• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ

Any Mind by Any Mind
January 13, 2023
in Top Story, ದೇಶ
0
ಕೇಂದ್ರದ ಮಾಜಿ ಸಚಿವ ಶರದ್ ಯಾದವ್  ನಿಧನ
Share on WhatsAppShare on FacebookShare on Telegram

ADVERTISEMENT

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಶರದ್‌ ಯಾದವ್‌ (75) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶರದ್‌ ಯಾದವ್‌ ಅವರು ಗುರುಗ್ರಾಮದ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

“ಪಪ್ಪ ನಹೀ ಹೇ” ಎಂದು ಅವರ ಮಗಳು ತನ್ನ ತಂದೆಯ ಮರಣ ವಾರ್ತೆಯನ್ನು ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. “ಗುರುವಾರ ರಾತ್ರಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆʼʼ ಎಂದು ಶರದ್‌ ಯಾದವ್‌ ಪುತ್ರಿ ಸುಭಾಷಿನಿ ಯಾದವ್‌ ತಿಳಿಸಿದ್ದಾರೆ.

Saddened at the demise of former Union minister and RJD leader Shri Sharad Yadav. May his soul rest in peace. May the Almighty grant his family & friends the strength to bear this huge loss. Om Shanti. pic.twitter.com/hjniiyGGpz

— Basavaraj S Bommai (@BSBommai) January 13, 2023


ನಿನ್ನೆ ಅವರು ಪ್ರಜ್ಞೆ ತಪ್ಪಿದ್ದರು. ಬಳಿಕ ಫೋರ್ಟಿಸ್‌ ಆಸ್ಪತ್ರೆಯ ಫೋರ್ಟಿಸ್‌ ಮೊಮೊರಿಯಲ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗೆ ದಾಖಲಿಸಲಾಗಿತ್ತು. “ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗೆ ಸೇರಿಸುವ ಸಮಯದಲ್ಲಿ ನಾಡಿ ಮಿಡಿತ ಸ್ಥಗಿತಗೊಂಡಿತ್ತು. ರಕ್ತದ ಪರಿಚಲನೆ ಸ್ಥಗಿತಗೊಂಡಿತ್ತು. ಹಲವು ತುರ್ತು ಚಿಕಿತ್ಸೆಗಳನ್ನು ನಡೆಸಲಾಯಿತು. ರಾತ್ರಿ 10.19 ಗಂಟೆಗೆ ಶರದ್‌ ಯಾದವ್ ಮೃತಪಟ್ಟಿರುವುದನ್ನು ಘೋಷಿಸಲಾಯಿತುʼʼ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Pained by the passing away of Shri Sharad Yadav Ji. In his long years in public life, he distinguished himself as MP and Minister. He was greatly inspired by Dr. Lohia’s ideals. I will always cherish our interactions. Condolences to his family and admirers. Om Shanti.

— Narendra Modi (@narendramodi) January 12, 2023

ಶರದ್‌ ಯಾದವ್ ನಿಧನ ವಾರ್ತೆಯಿಂದ ದುಃಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.
ಶರದ್‌ ಯಾದವ್‌ ಅವರು ಬಿಹಾರದ ಪ್ರಭಾವಿ ರಾಜಕಾರಣಿಯಾಗಿದ್ದರು. ಇವರು ಮಧ್ಯಪ್ರದೇಶದ ಹೊಶಂಗಾಬಾದ್‌ ಜಿಲ್ಲೆಯ ಬಬೈ ಗ್ರಾಮದಲ್ಲಿ ಕಿಶೋರ್‌ ಯಾದವ್‌ ಮತ್ತು ಸುಮಿತ್ರಾ ಯಾದವ್‌ ಸುಪುತ್ರರಾಗಿ 1947ರ ಜುಲೈ 1ರಂದು ಜನಿಸಿದರು. ಇವರು 1974ರ ಉಪಚುನಾವಣೆಯ ವೇಳೆ ಲೋಕಸಭೆಗೆ ಆಯ್ಕೆಯಾಗಿದ್ದರು. ಇವರು ಲೋಕಸಭೆಗೆ ಏಳು ಭಾರಿ ಆಯ್ಕೆಯಾಗಿದ್ದರು. ರಾಜ್ಯಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದರು.

ಇವರು ಜನತಾದಳ ಪಕ್ಷದ ರಾಷ್ಟ್ರೀಯ ಸ್ಥಾಪಕರು. 2004ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿತೀಶ್ ಕುಮಾರ್ ನೆರವಿನಿಂದ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಲೋಕತಾಂತ್ರಿಕ ಜನತಾದಳ ಆರಂಭಿಸಿದ್ದರು. ನಿತೀಶ್‌ ಜತೆ ಸಂಬಂಧ ಹಾಳಾದ ಕಾರಣ ಈ ಪಕ್ಷ ಆರಂಭಿಸಿದರು. ಕಳೆದ ವರ್ಷ ಎಲ್‌ಜೆಡಿ ಆರ್‌ಜೆಡಿ ವಿಲೀನವಾಗಿತ್ತು.

Tags: ಶರದ್ ಯಾದವ್
Previous Post

ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ

Next Post

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ/ಸಹಸ್ರಾವಧಾನಿಗಳು

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ  ಶತಾವಧಾನಿ/ಸಹಸ್ರಾವಧಾನಿಗಳು

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ/ಸಹಸ್ರಾವಧಾನಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada