• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ, ಬಿಜೆಪಿ ವಿರುದ್ದ ಸುದ್ದಿ ಪ್ರಸಾರ ಮಾಡದಂತೆ “ಟಿವಿ 5 ಕನ್ನಡ”ಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ

Any Mind by Any Mind
July 23, 2021
in ಕರ್ನಾಟಕ, ದೇಶ, ರಾಜಕೀಯ
0
ಮೋದಿ, ಬಿಜೆಪಿ ವಿರುದ್ದ ಸುದ್ದಿ ಪ್ರಸಾರ ಮಾಡದಂತೆ “ಟಿವಿ 5 ಕನ್ನಡ”ಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಯಾವುದೇ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಟಿವಿ 5 ಕನ್ನಡಕ್ಕೆ ಆನೇಕಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.

ADVERTISEMENT

ಸುದ್ದಿ ವಾಹಿನಿ ಟಿವಿ 5 ಮುಂದಿನ ಆದೇಶದವರೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಯಾವುದೇ ಚಾರಿತ್ರ್ಯವಧೆ ಅಥವಾ ಮಾನಹಾನಿಕರ ವರದಿಯನ್ನು ತಮ್ಮ ಸುದ್ದಿಸರಣಿಯಲ್ಲಿ ಅಥವಾ ʼಆರ್ ವೀ ಸ್ಟುಪಿಡ್ʼ ಕಾರ್ಯಕ್ರಮದಲ್ಲಿ ಪ್ರಸಾರ ಮಾಡದಂತೆ ಆನೇಕಲ್ನ ನ್ಯಾಯಾಲಯವೊಂದು ಇತ್ತೀಚೆಗೆ ಮಧ್ಯಂತರ ಆದೇಶ ನೀಡಿದೆ.

ಕರೋನಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಟಿವಿ 5 ಸುದ್ದಿವಾಹಿನಿಯ ವಿರುದ್ಧ ಬಿಜೆಪಿ ಕಾನೂನು ವಿಭಾಗದ ಸದಸ್ಯರಾದ ಆರ್. ಹರೀಶ್ ಕುಮಾರ್ ಅವರು ಆನೇಕಲ್ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ʼಟಿವಿ 5 ಕನ್ನಡʼ ಸುದ್ದಿಸಂಸ್ಥೆ, ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕ ಆರ್ .ಚೇತನ್ ಮತ್ತು ನಿರೂಪಕ ರಮಾಕಾಂತ್ ಆರ್ಯನ್ ವಿರುದ್ದ ಮೊಕದ್ದಮೆ ಹೂಡಿದ್ದರು.

“ಈ ಕುರಿತು ಕೋರ್ಟ್‌ ತಮ್ಮ ಅಬಿಪ್ರಾಯ ತಿಳಿಸಿದ್ದು, ʼಆರ್ ವಿ ಸ್ಟುಪಿಡ್ʼ ಹೆಸರಿನಲ್ಲಿ ಪ್ರಸಾರ ಮಾಡಲಾದ ಕಾರ್ಯಕ್ರಮ ಭಾರತದ ಪ್ರಧಾನಮಂತ್ರಿ ಅವರ ಇಮೇಜ್ ಅನ್ನು ಧಕ್ಕೆ ತರುತ್ತದೆ. ಪ್ರತಿವಾದಿ ಸಂಖ್ಯೆ 3 ರಮಾಕಾಂತ್ ಆರ್ಯನ್ ಅವರು ಬಳಸಿದ ಪದಗಳನ್ನು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯೊಳಗೆ ಬಳಸಿಲ್ಲ ಎಂದು ತೋರುತ್ತದೆ. ಪ್ರತಿಯೊಬ್ಬ ಭಾರತೀಯ ಪ್ರಜೆಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಇದರರ್ಥ ಯಾವುದೇ ವ್ಯಕ್ತಿ ಆಧಾರರಹಿತವಾಗಿ ಇಲ್ಲವೇ ಬಲವಿಲ್ಲದೇ ಮಾನಹಾನಿ ಮಾಡಬಹುದು ಎಂದಲ್ಲ” ಎಂಬುದಾಗಿ ನ್ಯಾಯಾಧೀಶರಾದ ಎಂ ಎನ್ ರಾಮ್ ಪ್ರಶಾಂತ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಭಾರತದ ಪ್ರಧಾನಿ ಇಡೀ ದೇಶವನ್ನು ಪ್ರತಿನಿಧಿಸುತ್ತಾರೆ ಮತ್ತು ಆಧಾರವಿಲ್ಲದೆ ಅವರ ವಿರುದ್ಧ ಮಾಡಲಾಗುವ ಯಾವುದೇ ಹೇಳಿಕೆ ಖಂಡಿತವಾಗಿಯೂ ಅವರ ವರ್ಚಸ್ಸಿಗೆ ಧಕ್ಕೆ ತರುತ್ತದೆ. ಪ್ರತಿವಾದಿ ಸಂಖ್ಯೆ 1 (ʼಟಿವಿ 5 ಕನ್ನಡʼ) ಮಾಧ್ಯಮವು ಕೂಡ ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾಗಿದೆ. ಪ್ರತಿವಾದಿಗಳು ಆರೋಗ್ಯಕರ ಹೇಳಿಕೆಗಳನ್ನು ನೀಡಬಹುದು. ಆದರೆ ನೇರವಾಗಿ ಮತ್ತು ಪರೋಕ್ಷವಾಗಿ ಮಾನಹಾನಿಕರ ಪದಗಳನ್ನು ಉಪಯೋಗಿಸುವಂತಿಲ್ಲ. ಒಟ್ಟಾರೆಯಾಗಿ ಯಾವುದೇ ವ್ಯಕ್ತಿಯನ್ನು ದೂಷಿಸುವ ಹಕ್ಕು ಯಾವುದೇ ವ್ಯಕ್ತಿಗೆ ಇಲ್ಲ” ಎಂದು ನ್ಯಾಯಾಧೀಶರು ವಿವರಿಸಿದ್ದಾರೆ.

ಅಲ್ಲದೆ ಇತ್ತೀಚೆಗೆ ವಾಹಿನಿಯ ಉದ್ಯೋಗ ತೊರೆದಿದ್ದ ನಿರೂಪಕಿ ಶ್ರೀಲಕ್ಷ್ಮೀ ಅವರ ಹೇಳಿಕೆಯನ್ನೂ ಆದೇಶ ಪ್ರತಿಯಲ್ಲಿ ಪ್ರಸ್ತಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ನಿಂದಿಸಬೇಕಿತ್ತು ಎಂಬ ಶ್ರೀಲಕ್ಷ್ಮಿ ಅವರ ಹೇಳಿಕೆಯನ್ನು ಗಮನಿಸಿರುವ ನ್ಯಾಯಾಲಯ, “ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪಕ್ಷದ ವಿರುದ್ಧ ಮಾನಹಾನಿಕರ ಮತ್ತು ಸತ್ಯರಹಿತ ಸಂಗತಿಗಳನ್ನು ಪ್ರಸಾರ ಮಾಡುವುದು ಅವರ ಚಾರಿತ್ರ್ಯವಧೆ ಅಥಾವ ಮಾನಹಾನಿ ಮಾಡಿದಂತಾಗುತ್ತದೆ. ಪ್ರತಿವಾದಿಗಳನ್ನು ನ್ಯಾಯಾಲಯ ನಿರ್ಬಂಧಿಸದಿದ್ದರೆ ಖಂಡಿತವಾಗಿಯೂ ಮುಂದಿನ ಎಪಿಸೋಡ್ ಪ್ರಸಾರದಲ್ಲಿ ಹೆಚ್ಚು ಮಾನಹಾನಿ ಉಂಟಾಗಬಹುದು ಎಂದು ಕೊರ್ಟ್ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ವಾಹಿನಿಯ ಪ್ರತಿನಿಧಿಗಳು, ನಿರೂಪಕರು ಪ್ರಧಾನಮಂತ್ರಿ ಅವರ ವಿರುದ್ಧ ಮತ್ತು ಅವರಿಗೆ ಸಂಬಂಧಿಸಿದ ವಿಚಾರಗಳಲ್ಲಿ ಮತ್ತು ಬಿಜೆಪಿ ವಿರುದ್ಧ, ಬರವಣಿಗೆ, ಪ್ರಕಟಣೆ, ಪ್ರಚಾರ, ಪ್ರಸಾರ ರೂಪದಲ್ಲಿ ಮಾನಹಾನಿಕರ ಮತ್ತು ಸತ್ಯಸತ್ಯತೆ ಇಲ್ಲದ ಹೇಳಿಕೆಗಳನ್ನು ತಮ್ಮ ಸುದ್ದಿ ಸರಣಿಯಲ್ಲಿ ಅಥವಾ ʼಆರ್ ವೀ ಸ್ಟುಪಿಡ್ ಕಾರ್ಯಕ್ರಮದಲ್ಲಿ ನೀಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಜೊತೆಗೆ ಫಿರ್ಯಾದಿಗಳು ಸಲ್ಲಿಸಬೇಕಾದ ದಾಖಲೆಗಳ ಕುರಿತಂತೆ ಕೆಲವು ಸೂಚನೆಗಳನ್ನು ನೀಡಿ ಪ್ರಕರಣವನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.

Tags: BJPCourtModi GovernmentTV5ನರೇಂದ್ರ ಮೋದಿ
Previous Post

9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ

Next Post

ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಿ: ಸಚಿವ ಸಿಪಿವೈ’ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಮನವಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಿ: ಸಚಿವ ಸಿಪಿವೈ’ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಮನವಿ

ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಿ: ಸಚಿವ ಸಿಪಿವೈ'ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಮನವಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada