ಗೂಗಲ್ ಮ್ಯಾಪ್ ನಂಬಿ ಪ್ರಾಣ ಕಳೆದುಕೊಂಡ ಸ್ನೇಹಿತರು..!!

ಉತ್ತರ ಪ್ರದೇಶದ ಬರೇಲಿಯಲ್ಲಿ ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಕಾರಿನ ಚಾಲಕ ಗೂಗಲ್ ಮ್ಯಾಪ್ ನಂಬಿಕೊಂಡು ಕಾರು ಚಲಾಯಿಸುತ್ತಿದ್ದ ಆತನ ಜೊತೆ ಇಬ್ಬರು ಸ್ನೇಹಿತರು ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿ ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿರುವುದು ಕಾಣದೆ, ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್ಪುರ ಮತ್ತು ದತಗಂಜ್ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಸೇತುವೆಯಿಂದ ಕಾರು ಉರುಳಿ ಬಿದ್ದಿರುವ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದ ಸೇತುವೆ ಮೇಲೆ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಹರಿಯಾಣದ ಗುರುಗ್ರಾಮದಿಂದ ಬರೇಲಿಗೆ ಹೊರಟಿದ್ದರು. ಖಾಲ್ಪುರ ಗ್ರಾಮದ ನಿವಾಸಿಗಳು ನದಿ ದಡಕ್ಕೆ ಭೇಟಿ ನೀಡಿದಾಗ ಕಾರು ಹಳ್ಳದಲ್ಲಿ ಮುಳುಗಿರುವುದು ಕಂಡು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಒಳಗೆ ಮೂವರು ಪ್ರಯಾಣಿಕರ ಶವಗಳನ್ನು ಕಂಡಿದ್ದಾರೆ. ಈ ದೃಶ್ಯ ಕಂಡು ಕೂಡಲೇ ಗ್ರಾಮಸ್ಥರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.