ಪಶ್ಚಿಮ ಬಂಗಾಳದ ಹಲವೆಡೆ ಇಂದಿನಿಂದ ಭಾರೀ ಮಳೆ ಸುರಿಯುತ್ತಿದೆ.. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ರೆಮಲ್ ಚಂಡಮಾರುತ ಎಫೆಕ್ಟ್ ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಅಬ್ಬರ ಶುರುವಾಗಿದೆ. ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ಹಲವೆಡೆ ಬಿಟ್ಟು ಬಿಡದೆ ಮಳೆ ಆಗ್ತಿದೆ.
ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ರೈಲು, ವಿಮಾನ ಸಂಚಾರಗಳಲ್ಲಿ ವ್ಯತ್ಯಯ ಉಂಟಾಗಿದೆ. ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಕರಾವಳಿಗಳ ನಡುವೆ ಮಧ್ಯರಾತ್ರಿಯೇ ರೆಮಲ್ ಚಂಡಮಾರುತ ಅಪ್ಪಳಿಸಲಿದೆ ಎನ್ನಲಾಗಿದೆ. ಉತ್ತರ 24 ಪರಗಣದ ಹಸ್ನಾಬಾದ್ನಲ್ಲಿ ಭಾರೀ ಮಳೆ ಮುನ್ಸೂಚನೆ ಇದೆ.
ಮಲೆಯಿಂದ ಭಾರೀ ಅನಾಹುತ ಆಗುವ ಮುನ್ಸೂಚನೆ ಸಿಕ್ಕಿದ್ದು, ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಸಲು NDRF ತಂಡವನ್ನು ನಿಯೋಜನೆ ಮಾಡಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ತುರ್ತು ರಕ್ಷಣಾ ಕಾರ್ಯಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿರೋ ರೆಮೆಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕಕ್ಕೆ ತಟ್ಟಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ, ಚಂಡ ಮಾರುತದ ಪರಿಣಾಮ ಬೀರುವ ಸಾಧ್ಯತೆ ತೀರಾ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.