
ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ನೂರು ಕೋಟಿಗೂ ಅಧಿಕ ನಷ್ಟವಾಗಿದೆ(More Than 100 Crores). ಮೇ ತಿಂಗಳಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ (Chikkamagaluru DC Meena Nagaraj) ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈನಲ್ಲಿ ಅತಿ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಮಳೆಯಾಗಿದೆ ಎಂದರು.
ಜಿಲ್ಲೆಯಲ್ಲಿ ಭಾರಿ ಮಳೆ ಗಾಳಿಗೆ ಮೂಡಿಗೆರೆ(Mudigere), ಚಿಕ್ಕಮಗಳೂರು ತಾಲೂಕಿನಲ್ಲಿ 192 ಮನೆಗಳಿಗೆ ಹಾನಿಯಾಗಿದೆ. ಈವರೆಗೂ ಹಾನಿಗೊಳಗಾದ 77 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ 1,849 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ ಎಂದು ಹೇಳಿದರು.

ಮಳೆಯಿಂದ ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದ್ದು 48 ಕೋಟಿ ರೂ. ನಷ್ಟವಾಗಿದೆ. 41 ಸೇತುವೆಗಳಿಗೆ ಹಾನಿಯಾಗಿದೆ. ಚಾರ್ಮಾಡಿಘಾಟ್-ಸೊಲ್ಲಾಪುರ (Charmadi Ghat – Sollapur Highway 169) ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ 8.5 ಕಿ.ಮೀ.ವರೆಗೆ ಹಾನಿಯಾಗಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಚರ್ಚಿಸಿ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.
ಪ್ರವಾಸಿಗರಿಗೆ ನಿಷೇಧ
ಮುಳ್ಳಯ್ಯನಗಿರಿಯಲ್ಲಿ ಸಾಲು ಸಾಲು ಗುಡ್ಡ ಮತ್ತು ಭೂ ಕುಸಿತವಾಗಿದೆ. ಹೀಗಾಗಿ ಪ್ರವಾಸಿಗರು ಜಿಲ್ಲೆಗೆ ಪ್ರವಾಸ ಬರುವುದನ್ನ ಮುಂದುಡಬೇಕು. ಜುಲೈ 29 ರ ವರೆಗೂ ಚಂದ್ರದ್ರೋಣ ಪರ್ವತದ ಸಾಲಿನ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ. ಮುಳ್ಳಯ್ಯನಗಿರಿ(Mullayyanagiri), ಸೀತಾಳಯ್ಯನಗಿರಿ (Seethalayyanagiri), ದತ್ತಪೀಠ(Dattapeeta), ಹೊನ್ನಮ್ಮನ ಹಳ್ಳ(Honnammana Halla) ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.