• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಂದಿನಿ ಮೊಸರು ಪ್ಯಾಕೆಟ್‌ ಮೇಲೆ ‘ದಹಿ’ ಮುದ್ರಣ ಆದೇಶ ಹಿಂಪಡೆದ FSSAI.. ಕನ್ನಡಿಗರು ಟೀಕೆ ಬೆನ್ನಲ್ಲೇ ನಿರ್ಧಾರ..!

Any Mind by Any Mind
March 30, 2023
in Top Story, ಇದೀಗ, ಕರ್ನಾಟಕ, ದೇಶ
0
ನಂದಿನಿ ಮೊಸರು ಪ್ಯಾಕೆಟ್‌ ಮೇಲೆ ‘ದಹಿ’ ಮುದ್ರಣ ಆದೇಶ ಹಿಂಪಡೆದ FSSAI.. ಕನ್ನಡಿಗರು ಟೀಕೆ ಬೆನ್ನಲ್ಲೇ ನಿರ್ಧಾರ..!
Share on WhatsAppShare on FacebookShare on Telegram

ADVERTISEMENT

ನವದೆಹಲಿ:ಮಾ.30: ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮೊಸರಿನ ಪ್ಯಾಕೆಟ್‌ಗಳ ಮೇಲೆ ಹಿಂದಿಯಲ್ಲಿ ‘ದಹಿ’ ಎಂದು ಮುದ್ರಿಸುವಂತೆ ಹೊರಡಿಸಿದ್ದ ಆದೇಶವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಇಂದು (ಗುರುವಾರ -ಮಾರ್ಚ್​ 30) ಹಿಂಪಡೆದಿದೆ.

ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕಠೋರವಾಗಿ ಟೀಕೆ ಮಾಡಿದ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐಯ ಈ ನಿರ್ಧಾರ ಹೊರಬಿದ್ದಿದೆ. “ಹಿಂದಿ ಹೇರಿಕೆಯ ನಾಚಿಕೆಯಿಲ್ಲದ ಒತ್ತಾಯಗಳು ಎಷ್ಟರ ಮಟ್ಟಿಗೆ ಅಂದರೆ, ಮೊಸರು ಪ್ಯಾಕೆಟ್‌ ಮೇಲೂ ಹಿಂದಿಯಲ್ಲಿ ಬರೆಯುವಂತೆ ನಿರ್ದೇಶಿಸುವ ಮಟ್ಟಕ್ಕೆ ಬಂದಿವೆ. ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಇದು ದೂರ ಮಾಡುತ್ತದೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣ ಭಾರತದಿಂದ ಶಾಶ್ವತವಾಗಿ ಬಹಿಷ್ಕರಿಸಬೇಕು” ಎಂದು ಸಿಎಂ ಸ್ಟಾಲಿನ್ ಟ್ವೀಟ್​ ಮಾಡಿದ್ದರು.

ತಮಿಳುನಾಡಿಗೂ ಮುನ್ನ ಕರ್ನಾಟಕಕ್ಕೆ ಮೊಸರಿನ ಪ್ಯಾಕೆಟ್‌ಗಳ ಮೇಲೆ ಹಿಂದಿಯಲ್ಲಿ ‘ದಹಿ’ ಎಂದು ಮುದ್ರಿಸುವಂತೆ ಆದೇಶ ಬಂದಿತ್ತು. ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಗೆ ಆದೇಶ ನೀಡಿತ್ತು. ಅದರಂತೆಯೇ ಕೆಎಂಎಫ್ ನಂದಿನಿ ಪ್ಯಾಕೆಟ್​​ನಲ್ಲಿ ‘ದಹಿ’ ಎಂದು ಮುದ್ರಿಸಿತ್ತು.

The unabashed insistences of #HindiImposition have come to the extent of directing us to label even a curd packet in Hindi, relegating Tamil & Kannada in our own states.

Such brazen disregard to our mother tongues will make sure those responsible are banished from South forever. https://t.co/6qvARicfUw pic.twitter.com/gw07ypyouV

— M.K.Stalin (@mkstalin) March 29, 2023

ಬಳಿಕ ಮೊಸರು ಪ್ಯಾಕೆಟ್‌ಗಳ ಲೇಬಲ್‌ಗಳನ್ನು ಇಂಗ್ಲಿಷ್‌ನಲ್ಲಿ ” Curd ” ಮತ್ತು ತಮಿಳಿನಲ್ಲಿ “ತೈರ್” ಎಂದು ಬರೆದಿರುವುದನ್ನು ಹಿಂದಿಯಲ್ಲಿ “ದಹಿ” ಎಂದು ಬದಲಾಯಿಸುವಂತೆ ತಮಿಳುನಾಡಿನ ಹಾಲು ಉತ್ಪಾದಕರ ಒಕ್ಕೂಟಕ್ಕೆ ನಿರ್ದೇಶನ ನೀಡಿತ್ತು.

‘ದಹಿ’ ಮುದ್ರಣ ಆದೇಶ ವಿರೋಧಿಸಿದ್ದ ಹೆಚ್​ಡಿಕೆ

ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು.4/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 30, 2023

ಈ ಬಗ್ಗೆ ಟ್ವೀಟ್​ ಮಾಡಿ ವಿರೋಧಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ, “ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

“ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದರು.

“ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, ಜೆಡಿಎಸ್​​ ಕಾರ್ಯಕರ್ತರು ‘ ನಂದಿನಿ ಉಳಿಸಿ ‘ ಎಂದು ಮೊಸರು, ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

ಜೈ ಕನ್ನಡಿಗ💛❤️💪

ಕೆಎಂಎಫ್ ಗೆ ಭೇಟಿ ಕೊಟ್ಟು ಹಿಂದಿಹೇರಿಕೆ ಬಯಲಿಗೆಳೆದು ನಿಂತ ನಮ್ಮ ಹೋರಾಟಕ್ಕೆ ಜಯವಾಗಿದೆ.
ದಹಿ ಹಿಂದಿ ಪದ ಬಳಕೆ ಕಡ್ಡಾಯ
ಆದೇಶ ವಾಪಸ್ ಪಡೆದ fssai

ನಾವು ಸುಮ್ಮನಿರದೆ ಧ್ವನಿ ಎತ್ತಿದರೆ ಎಲ್ಲವೂ ಸಾಧ್ಯ.
ಹಿಂದಿಹೇರಿಕೆ ನಿಲ್ಲಲಿ.
ಇದಕ್ಕೆ ಧ್ವನಿಯಾದ ಎಲ್ಲ ಕನ್ನಡಿಗರಿಗೂ ಧನ್ಯವಾದಗಳು..💛❤️

ಯುವ ಕರ್ನಾಟಕ ವೇದಿಕೆ pic.twitter.com/nwiVwWfdSn

— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) March 30, 2023

ಸಾಮಾಜಿಕ ಕಾರ್ಯಕರ್ತ ರೂಪೇಶ್​ ರಾಜಣ್ಣ ಸೇರಿದಂತೆ ಅನೇಕ ಕನ್ನಡ ಪರ ಹೋರಾಟಗಾರರು ಎಫ್‌ಎಸ್‌ಎಸ್‌ಎಐ ಆದೇಶ ಹಾಗೂ ಹಿಂದಿ ಹೇರಿಕೆ ವಿರುದ್ಧ ದನಿ ಎತ್ತಿದ್ದರು. ಇದೀಗ ಆದೇಶ ಹಿಂಪಡೆದ ಬೆನ್ನಲ್ಲೇ ಟ್ವೀಟ್​ ಮಾಡಿರುವ ರೂಪೇಶ್​ ರಾಜಣ್ಣ, “ಕೆಎಂಎಫ್ ಗೆ ಭೇಟಿ ಕೊಟ್ಟು ಹಿಂದಿಹೇರಿಕೆ ಬಯಲಿಗೆಳೆದು ನಿಂತ ನಮ್ಮ ಹೋರಾಟಕ್ಕೆ ಜಯವಾಗಿದೆ. ದಹಿ ಹಿಂದಿ ಪದ ಬಳಕೆ ಕಡ್ಡಾಯ ಆದೇಶ ವಾಪಸ್ ಪಡೆದ fssai. ನಾವು ಸುಮ್ಮನಿರದೆ ಧ್ವನಿ ಎತ್ತಿದರೆ ಎಲ್ಲವೂ ಸಾಧ್ಯ. ಹಿಂದಿಹೇರಿಕೆ ನಿಲ್ಲಲಿ. ಇದಕ್ಕೆ ಧ್ವನಿಯಾದ ಎಲ್ಲ ಕನ್ನಡಿಗರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

Tags: BJPCongress PartycurdHdKumaraswamyHindi ImpositionJDSjdskarnatakaNandiniTamilnadu Governmentಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೈವೋಲ್ಟೇಜ್​ ಕ್ಷೇತ್ರವಾಗಲಿದೆ ವರುಣ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಎಸ್​ವೈ ಸುಳಿವು

Next Post

ನನ್ನ ರಾಮ ಅಂತಃಕರಣ ಸ್ವರೂಪಿ, ಬಿಜೆಪಿಗೆ ಚುನಾವಣಾ ಸರಕು : ಬಿಜೆಪಿ ಟೀಕೆಗೆ ಸಿದ್ದು ಖಡರ್ ರಿಪ್ಲೆ..!

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ನನ್ನ ರಾಮ ಅಂತಃಕರಣ ಸ್ವರೂಪಿ, ಬಿಜೆಪಿಗೆ ಚುನಾವಣಾ ಸರಕು : ಬಿಜೆಪಿ ಟೀಕೆಗೆ ಸಿದ್ದು ಖಡರ್ ರಿಪ್ಲೆ..!

ನನ್ನ ರಾಮ ಅಂತಃಕರಣ ಸ್ವರೂಪಿ, ಬಿಜೆಪಿಗೆ ಚುನಾವಣಾ ಸರಕು : ಬಿಜೆಪಿ ಟೀಕೆಗೆ ಸಿದ್ದು ಖಡರ್ ರಿಪ್ಲೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada