• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಾಕತ್ತಿದ್ದರೆ ಡಿಸಿ ವರ್ಗಾವಣೆ ಮಾಡಿಸು: ಸಂಸದ ಸಿಂಹಗೆ ಜಿಟಿಡಿ ಸವಾಲು

Any Mind by Any Mind
May 29, 2021
in ಕರ್ನಾಟಕ
0
ತಾಕತ್ತಿದ್ದರೆ ಡಿಸಿ ವರ್ಗಾವಣೆ ಮಾಡಿಸು: ಸಂಸದ ಸಿಂಹಗೆ ಜಿಟಿಡಿ ಸವಾಲು
Share on WhatsAppShare on FacebookShare on Telegram

ADVERTISEMENT

ಇಡೀ ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಕಾಣುತ್ತಿದೆ.  ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತವು ಪಂಚಸೂತ್ರ ಮತ್ತು  ಕೋವಿಡ್ ಮಿತ್ರ ಜಾರಿಗೊಳಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸಹ ತಮ್ಮದೇ ಆದ ಟಾಸ್ಕ್ಫೋರ್ಸ್ ರಚಿಸಿ ಕಾರ್ಯಾಚರಣೆಗೆ ಇಳಿಸಿದ್ದಾರೆ.  ಆದರೆ ಮೈಸೂರು ಜಿಲ್ಲೆಯಲ್ಲಿ ಮಾತ್ರ ಸೋಂಕು  ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಕೋವಿಡ್ ಪರೀಕ್ಷೆಯನ್ನು ಕಡಿಮೆಗೊಳಿಸಿದ ನಂತರವೂ ಮೈಸೂರಿನಲ್ಲಿ ನಿತ್ಯವೂ 2 ಸಾವಿರದ ಆಸುಪಾಸು ಪ್ರಕರಣಗಳು ದಾಖಲಾಗುತ್ತಿವೆ. 

ಒಂದೆಡೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರಣಿ ಸಭೆ. ಮತ್ತೊಂದೆಡೆ ಟಾಸ್ಕ್ಫೋರ್ಸ್ ಅಧ್ಯಕ್ಷರ ಸಭೆ ಹಾಗೂ ವಿವಿಧೆಡೆ ಭೇಟಿ. ಇದು ನಿತ್ಯವೂ ತಪ್ಪದ ವೇಳಾಪಟ್ಟಿ. ಎರಡೂ ಕಡೆಯೂ ಹಾಜರಿರಬೇಕಾದ ಅನಿವಾರ್ಯತೆ ಅಧಿಕಾರಿ ವರ್ಗದ್ದು. ಇದರಿಂದ ಹೈರಾಣಾಗಿರುವ ಅಧಿಕಾರಿಗಳು, ತಮಗೆ ಸಮರ್ಪಕವಾಗಿ ಕೆಲಸ ಮಾಡಲಾಗುತ್ತಿಲ್ಲ ಎಂದು ಅಲವತ್ತುಕೊಳ್ಳುತ್ತಿದ್ದಾರೆ. ‘ರಾಜ್ಯದ ಬೇರಾವ ಜಿಲ್ಲೆಯಲ್ಲೂ ಇರದ ಇಂತಹ ವ್ಯವಸ್ಥೆ ಇಲ್ಲಿಯೇ ಏಕೆ?’ ಎಂದು ಪ್ರಶ್ನಿಸುತಿದ್ದಾರೆ. ಮತ್ತೊಂದೆಡೆ  ಜಿಲ್ಲಾಡಳಿತ ಹಾಗೂ  ಜನಪ್ರತಿನಿಧಿಗಳ  ನಡುವೆ ಸಮನ್ವಯತೆ ಇಲ್ಲದಿರುವುದರಿಂದಲೇ ಮೈಸೂರು ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಬಂದಿಲ್ಲ. ಅವರ ನಡುವಿನ ವೈಯಕ್ತಿಕ ಪ್ರತಿಷ್ಠೆ, ಪ್ರಚಾರದ ಹಪಾಹಪಿತನ, ದುಡ್ಡು ಮಾಡುವ ದಂಧೆ ಇದ್ಯಾವುದೂ ನಮಗೆ ಬೇಕಿಲ್ಲ. ಮೊದಲು ಕೋವಿಡ್ನ ದುಷ್ಪರಿಣಾಮ ತಪ್ಪಿಸಿ. ಸಾವಿನ ಸರಣಿಗೆ  ಫುಲ್ ಸ್ಟಾಪ್ ಹಾಕಿ ಎಂದು ಜನತೆ ಆಗ್ರಹಿಸುತಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೊರೋಣ ನಿಯಂತ್ರಣಕ್ಕೆ ಒಂದಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಮೊದಲು ಇವರನ್ನು ಬೆಂಬಲಿಸುತಿದ್ದ  ಆಳುವ ಪಕ್ಷದ ಜನಪ್ರತಿನಿಧಿಗಳೇ ಇವರ ವಿರುದ್ದ ಈಗ ತಿರುಗಿ ಬಿದ್ದಿರುವುದು ಗುಟ್ಟಾಗೇನೂ ಉಳಿದಿಲ್ಲ.    ಸಚಿವರು, ಸಂಸದರು, ಜಿಲ್ಲಾಧಿಕಾರಿ ನಡುವಿನ ಗುದ್ದಾಟ–ತಿಕ್ಕಾಟಕ್ಕೆ ಹಲವು ಕಾರಣಗಳಿವೆ. ಇದರಲ್ಲಿ ಪ್ರಚಾರಪ್ರಿಯತೆ, ಪ್ರತಿಷ್ಠೆಯೂ ಸೇರಿಕೊಂಡಿದೆ ಎಂಬುದು ಅವರ ಆಪ್ತ ವಲಯದಿಂದಲೇ ಗೊತ್ತಾಗಿದೆ. ಉಸ್ತುವಾರಿ ಸಚಿವರು ಘೋಷಿಸಲು ಉದ್ದೇಶಿಸಿದ್ದ ಕೋವಿಡ್ ಮಿತ್ರ ಯೋಜನೆಯನ್ನು ಜಿಲ್ಲಾಧಿಕಾರಿಯೇ ತರಾತುರಿಯಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಪ್ರಕಟಿಸಿದ್ದು, ಕೊರೊನಾ ಜಾಗೃತಿ ಮೂಡಿಸುವ ಪ್ರಚಾರ ಫಲಕದಿಂದ ಭಾವಚಿತ್ರ ತೆಗೆಯುವಂತೆ ಸೂಚಿಸಿದ್ದು, ಟಾಸ್ಕ್ಫೋರ್ಸ್ಗೆ ಯಾವೊಂದು ಮಾನ್ಯತೆ ಇಲ್ಲ ಎಂದು ತಮ್ಮ ಆಪ್ತ ಅಧಿಕಾರಿ ವಲಯದಲ್ಲೇ ಹೇಳಿಕೊಂಡಿದ್ದು ತಿಕ್ಕಾಟ ಆರಂಭವಾಗಲು ಕಾರಣವಾಗಿದೆ’ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು   ತಿಳಿಸಿದರು. ಚಾಮರಾಜ ನಗರದಲ್ಲಿ ನಡೆದ ಆಮ್ಲಜನಕ ದುರಂತ ಘಟನೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಎಸ್.ಸುರೇಶ್ಕುಮಾರ್ ಅವರು ಜಿಲ್ಲಾಧಿಕಾರಿ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರೂ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಏನೊಂದು ಮಾತನಾಡಿರಲಿಲ್ಲ. ಈ ವಿದ್ಯಮಾನದ ಬಳಿಕ, ಜಿಲ್ಲಾಧಿಕಾರಿ ಬದಲಾವಣೆಗಾಗಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳ ನಿಯೋಗವೊಂದನ್ನು ಮುಖ್ಯಮಂತ್ರಿ ಬಳಿಗೆ ಕರೆದೊಯ್ಯಲು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್  ಚಿಂತನೆ ನಡೆಸಿದ್ದರು. ಇದುವೇ ಆಡಳಿತಾರೂಢರ ನಡುವೆ ಸಮನ್ವಯ ತಪ್ಪಲು, ತಿಕ್ಕಾಟ ನಡೆಯಲು ಪ್ರಮುಖ ಕಾರಣ’ ಎಂಬುದು ಉನ್ನತ ಮೂಲಗಳು ತಿಳಿಸಿವೆ.    ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ಬಗ್ಗೆ ಸಂಸದ ಪ್ರತಾಪ ಸಿಂಹ ಅವರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ಬೆನ್ನಿಗೆ ನಿಂತಿರುವ ಶಾಸಕ ಜಿ.ಟಿ. ದೇವೇಗೌಡ, ನಿನಗೆ ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಖಾಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ, ದಿನ ಬೆಳಗಾದರೆ ಪೇಪರ್ ಸ್ಟೇಟ್ಮೆಂಟ್ ಮಾಡಿದರೆ ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು? ಎಂದು ಪ್ರಶ್ನಿಸಿದ್ದಾರೆ. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್ಫುರ್ ಎಂಪಿ, ಪಿಎಂ, ಸಿಎಂ ನೀನು ಹೇಳಿದಂತೆ ಕೇಳ್ತಾರೆ? ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಪೇಪರ್ ಸ್ಟೇಟ್ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡಿಸ್ತೀಯಾ? ಎಂದು ಪ್ರಶ್ನಿಸಿರುವ ಅವರು,  ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನಸಾಮಾನ್ಯರಲ್ಲಿ ಅನುಮಾನ ಸೃಷ್ಟಿಸಿವೆ ಎಂದರು.  ಶಾಸಕ ಸಾ.ರಾ.ಮಹೇಶ್ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಜಿಟಿಡಿ, ಒಬ್ಬ ಮಾತ್ರ ಹೀರೋ, ನಾವೆಲ್ಲಾ ಜೀರೋನಾ? ನಾವೆಲ್ಲ ನಮ್ಮ ಸ್ವಂತ ಹಣ ಖರ್ಚು ಮಾಡ್ತಿದ್ದೀವಿ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು ಎಂದು ಪ್ರಶ್ನಿಸಿದರು.

  ಜಿಲ್ಲಾಧಿಕಾರಿ ವರ್ಗಾವಣೆ ವಿಚಾರವಾಗಿ ಸವಾಲು ಹಾಕಿದ್ದ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಇಂದು  ಮಾತನಾಡಿದ  ಅವರು  ಅಧಿಕಾರಿಗಳನ್ನ ಟ್ರಾನ್ಸಫರ್ ಮಾಡೋದೇ ತಾಕತ್ತಾದ್ರೆ ಅಂತಹ ತಾಕತ್ತು ನನಗೆ ಬೇಡ. ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೆನೆ. ಮೈಸೂರಿಗೆ ನಾನು ಹೊರಗಿನವನು. ಆದರು ಮೊದಲ ಚುನಾವಣೆಯಲ್ಲಿ ಮೈಸೂರು- ಕೊಡಗಿನ ಜನ 30 ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದರು. ನನ್ನ ತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, 2ನೇ ಬಾರಿ  1.4 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದಾರೆ. ಇದಕ್ಕಿಂತಲೂ ನಾನು ಯಾವ ತಾಕತ್ತು ತೋರಿಸಬೇಕು ಎಂದು ಟಾಂಗ್ ನೀಡಿದ್ದಾರೆ. ಡಿಸಿ ಅಥವಾ ಇನ್ನಾವುದೋ ಅಧಿಕಾರಿಯನ್ನ ವರ್ಗಾವಣೆ ಮಾಡಿಸೋದು ರಾಜಕಾರಣಿಗಳಿಗೆ ಕಾಮನ್. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡೋದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.

  ಜಿಟಿಡಿ ಅವರು ನನಗೆ ತಂದೆ ಇದ್ದಂತೆ. ಅವರು ಹರೀಶ್ಗೌಡರನ್ನ ಹೇಗೆ ನೋಡಿಕೊಂಡಿದ್ದಾರೋ ಹಾಗೇ ನನ್ನನ್ನು ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿ ನನ್ನನ್ನು ಬೈಯುವ ಹಕ್ಕು ಜಿ.ಟಿ ದೇವೇಗೌಡರಿಗೆ ಇದೆ. ಅವರು ಬೈಯುವುದನ್ನ ನಾನು ಪ್ರೀತಿಯಿಂದ ಸ್ವೀಕರಿಸಿಸುತ್ತೇನೆ ಎಂದರು. ಒಟ್ಟಿನಲ್ಲಿ ಕರೋನಾ ಸಂಕಷ್ಟದ ನಡುವೆ ಜನನಾಯಕರು ಹೀಗೆ ರಾಜಕೀಯ ಕೆಸರೆರಚಾಟದಲ್ಲಿ ಮುಳುಗಿರುವುದು ನಾಚಿಕೆಗೇಡಿನ ಸಂಗತಿ..

Tags: G T Devegouda told Prathapasinha that if you have guts
Previous Post

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: ಕರವೇಯಿಂದ ಟ್ವಿಟರ್ ಅಭಿಯಾನಕ್ಕೆ ಕರೆ

Next Post

ಒಂದೂವರೆ ವರ್ಷದಲ್ಲೇ ‘ಕೊರೋನಾ’ ವಿರುದ್ಧ ಗೆಲುವು ಸಾಧ್ಯವಾಗುತ್ತಿದ್ದರೂ 40 ವರ್ಷಗಳಿಂದಲೂ ‘ಏಡ್ಸ್’ ವಿರುದ್ಧದ ಹೋರಾಟದ‍ಲ್ಲಿ ಕೈಸೋಲುತ್ತಿರುವುದೇಕೆ?

Related Posts

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?
Top Story

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಗಳು ಜೋರಾಗಿವೆ. ಎರಡು ಉಪಚುನಾವಣೆಗಳ ವಿಚಾರದಲ್ಲಿ "ಕೈ" ನಲ್ಲಿ ಆಂತರಿಕ ಕೊತ ಕೊತ ಕುದಿಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ...

Read moreDetails
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
Next Post
ಒಂದೂವರೆ ವರ್ಷದಲ್ಲೇ ‘ಕೊರೋನಾ’ ವಿರುದ್ಧ ಗೆಲುವು ಸಾಧ್ಯವಾಗುತ್ತಿದ್ದರೂ 40 ವರ್ಷಗಳಿಂದಲೂ ‘ಏಡ್ಸ್’ ವಿರುದ್ಧದ ಹೋರಾಟದ‍ಲ್ಲಿ ಕೈಸೋಲುತ್ತಿರುವುದೇಕೆ?

ಒಂದೂವರೆ ವರ್ಷದಲ್ಲೇ ‘ಕೊರೋನಾ’ ವಿರುದ್ಧ ಗೆಲುವು ಸಾಧ್ಯವಾಗುತ್ತಿದ್ದರೂ 40 ವರ್ಷಗಳಿಂದಲೂ ‘ಏಡ್ಸ್’ ವಿರುದ್ಧದ ಹೋರಾಟದ‍ಲ್ಲಿ ಕೈಸೋಲುತ್ತಿರುವುದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada