• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಗೆದ್ದಿದ್ದು NDA .. BJP ಸೋಲಿನ ಹೊಣೆ ಯಾರದ್ದು..? ನಾಯಕನ ಪಾತ್ರವೇನು..?

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in Uncategorized
0
Share on WhatsAppShare on FacebookShare on Telegram

ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯ ಆಗುವ ಕೊನೇ ಹಂತದಲ್ಲಿ ಭಾರತೀಯರು ಬಂದು ನಿಂತಿದ್ದಾರೆ. NDA ಮೈತ್ರಿಕೂಟಕ್ಕೆ ಬಹುಮತ ಬಂದಿದ್ದು, ಎನ್​ಡಿಎ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರಿಗೆ ಎನ್​ಡಿಎ ಮೈತ್ರಿಕೂಟದ ಸಂಪೂರ್ಣ ಬೆಂಬಲ ಇದೆ ಎಂದು ಈಗಾಗಲೇ ಮೈತ್ರಿಕೂಟದ ನಾಯಕರು ಸಹಿ ಹಾಕಿ ಕೊಟ್ಟಿದ್ದಾರೆ ಎನ್ನುವ ಮಾಹಿತಿ ದೆಹಲಿಯ ಕೆಂಪುಕೋಟೆಯಿಂದ ಹೊರ ಬಿದ್ದಿದೆ. ಆದರೆ ಎನ್​ಡಿಎ ಮೈತ್ರಿಕೂಟ ಆಯ್ಕೆ ಮಾಡಿದ ವ್ಯಕ್ತಿ ಪ್ರಧಾನಿ ಆಗುವುದರಲ್ಲಿ ಯಾವುದೇ ಕಾನುನು ತೊಡಕು ಇರುವುದಿಲ್ಲ. ಆದರೆ ನೈತಿಕತೆ ಪ್ರಶ್ನೆ ಎನ್ನುವುದು ಬಂದಾಗ ಬಿಜೆಪಿ ಸೋಲಿನ ಹೊಣೆಯನ್ನು ಹೊರುವುದು ಯಾರು..? ಅನ್ನೋ ಪ್ರಶ್ನೆ ಎದುರಾಗಿದೆ.

ADVERTISEMENT

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಹಾಗು ಎನ್​ಸಿಪಿ ಪಾರ್ಟಿಯನ್ನು ಇಬ್ಭಾಗ ಮಾಡಿ ಅಧಿಕಾರ ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಈ ಬಾರಿ ಲೋಕಸಭೆಯಲ್ಲಿ ಬಿಜೆಪಿ ಸೇರಿದಂತೆ ಸರ್ಕಾರದಲ್ಲಿ ಭಾಗಿಯಾಗಿರುವ ಎನ್​ಸಿಪಿ ಹಾಗು ಶಿವಸೇನೆ ಹೀನಾಯ ಫಲಿತಾಂಶ ಪಡೆದಿವೆ. ಇಬ್ಭಾಗದಿಂದ ಹಿಂಸೆ ಅನುಭವಿಸಿದ್ದ ಉದ್ಧವ್​ ಠಾಕ್ರೆ ಬಣದ ಶಿವಸೇನೆ ಹಾಗು ಶರದ್​ ಪವಾರ್​ ಬಣದ ಎನ್​ಸಿಪಿ ಜೊತೆಗೆ ಕಾಂಗ್ರೆಸ್​ ಭರ್ಜರಿ ಸ್ಥಾನಗಳಲ್ಲಿ ಗೆದ್ದು ಬೀಗುತ್ತಿದೆ. ಈ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ ಎಂದು ಡಿಸಿಎಂ ಆಗಿರುವ ದೇವೇಂದ್ರ ಫಡ್ನಾವಿಸ್​ ಬಹಿರಂಗವಾಗಿ ಹೇಳಿದ್ದಾರೆ. ಜೊತೆಗೆ ಡಿಸಿಎಂ ಸ್ಥಾನದಿಂದ ಹೊರಬರುವುದಕ್ಕೆ ಹೈಕಮಾಂಡ್​ ಅನುಮತಿಯನ್ನೂ ಕೇಳಿದ್ದಾರೆ. ಇದು ನೈತಿಕತೆ ಇರುವ ನಾಯಕ ಮಾಡಬೇಕಿರುವ ಕೆಲಸ. ಹೈಕಮಾಂಡ್​ ಒಪ್ಪುವುದು ಬಿಡುವುದು ಬೇರೆ ವಿಚಾರ. ಆದರೆ ಸೋಲಿನ ಹೊಣೆಯನ್ನು ಹೊರುವ ಕೆಲಸ ಮಾಡಿದ್ದಾರೆ.

ಓರ್ವ ರಾಜ್ಯ ನಾಯಕನಿ9ಗೆ ಇರುವ ಸೂಕ್ಷ್ಮತೆ ರಾಷ್ಟ್ರೀಯ ನಾಯಕರಿಗೆ ಇಲ್ಲದಂತಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕಳೆದ ಬಾರಿ 282 ಸ್ಥಾನಗಳನ್ನು ಗೆದ್ದು ಅಧಿಕಾರ ನಡೆಸಿತ್ತು. ಆದರೆ ಈ ಬಾರಿ ಸರಳ ಬಹುಮತದ ಗೆರೆಯನ್ನು ದಾಟುವುದಕ್ಕೆ ಸಾಧ್ಯವಾಗಿಲ್ಲ. ಅಂದ ಮೇಲೆ ದೇಶದ ಜನರು ಬಿಜೆಪಿಯನ್ನು ತಿರಸ್ಕಾರ ಮಾಡಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಸೋಲಿನ ಹೊಣೆಯನ್ನು ಹೊರಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಎನ್​ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಪ್ರಧಾನಿ ಆಗುವುದಕ್ಕೆ ಪೇಟ ಕಟ್ಟಿಕೊಂಡು ಸಜ್ಜಾಗಿದ್ದಾರೆ. ಅಂದರೆ ನೈತಿಕತೆ ವಿಚಾರ ಬರುವುದಿಲ್ಲ ಎನ್ನುವುದನ್ನು ಸಾಬೀತು ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲೇ ಪ್ರಧಾನಿ ಆಗಬೇಕು ಎಂದರೆ ಬೇರೆಯವರಿಗೆ ಅವಕಾಶ ಕೊಡಬಹುದು ಅಲ್ಲವೇ..?

ಯುದ್ಧಕ್ಕೆ ಹೋದ ರಾಜನ ಮೇಲೆ ಜನರು ಅಥವಾ ಸೇನೆ ದಂಗೆ ಎದ್ದರೆ ರಾಜನ ವಿರುದ್ಧ ಜನಾಭಿಪ್ರಾಯವಿದೆ ಎಂದು ಅರ್ಥ. ಆದರೆ ನಾನು ಮತ್ತೆ ಬೇರೊಬ್ಬರ ಸಪೋರ್ಟ್​ನಿಂದ ರಾಜನೇ ಆಗ್ತೀನಿ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಿಯಲ್ಲ ಎನ್ನಬಹುದು. ತಿರಸ್ಕೃತಗೊಂಡ ನಾಯಕ ಬೇರೊಂದು ಮಾರ್ಗದಲ್ಲಿ ಅಧಿಕಾರ ಹಿಡಿದರೆ ಮುಂದಿನ ದಿನಗಳಲ್ಲಿ ಯಾವ ಮಾರ್ಗವೂ ಇಲ್ಲದಂತೆ ಸಂಪೂರ್ಣವಾಗಿ ಮುಚ್ಚಿಬಿಡುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಎನ್​ಡಿಎ ಮೈತ್ರಿಕೂಟ ಎಲ್ಲರೂ ಸೇರಿದರೂ ಅಧಿಕಾರ ಸಿಗಬಾರದು ಆ ರೀತಿಯ ನಿರ್ಧಾರವನ್ನು ದೇಶದ ಜನರೇ ತೆಗೆದುಕೊಂಡರೆ ಅಚ್ಚರಿಯಿಲ್ಲ. ಹೀಗಾಗಿ NDA ಮೈತ್ರಿಕೂಟಕ್ಕೆ ಬಹುಮತವಿದೆ. ಆದರೆ ಬಿಜೆಪಿಗೆ ಬಹುಮತ ಹೋಗಿದೆ. ಎನ್​ಡಿಎ ಮೈತ್ರಿಕೂಟದ ನಾಯಕನಾಗಿ ಬೇರೊಬ್ಬರ ಆಯ್ಕೆ ಮಾಡಬಹುದಿತ್ತು. ಮೋದಿಯೇ ಸ್ವತಃ ನೈತಿಕತೆ ಆಧಾರದಲ್ಲಿ ಬೇರೊಬ್ಬರನ್ನು ಆಯ್ಕೆ ಮಾಡಲು ಸೂಚಿಸಬೇಕಿತ್ತು. ದೇಶದ ಜನರು ತಿರಸ್ಕಾರ ಮಡಿದ್ದಾರೆ ಎನ್ನುವುದನ್ನು ಎಲ್ಲರೂ ಒಪ್ಪಲೇಬೇಕು ಅಲ್ಲವೇ..?

ಕೃಷ್ಣಮಣಿ

Previous Post

ಎನ್‌ಡಿಎ ಸಭೆಯಲ್ಲಿ ಹೆಚ್‌ಡಿಕೆ ಫುಲ್ ಸೈಲೆಂಟ್ ! ಸಚಿವ ಸ್ಥಾನದ ಬಗ್ಗೆ ನೋ ಡಿಮ್ಯಾಂಡ್ !

Next Post

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; 45 ಕೋಟಿ ರೂ. ಸೀಜ್

Related Posts

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?
Uncategorized

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

by ಪ್ರತಿಧ್ವನಿ
January 16, 2026
0

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ನಾಯಕತ್ವ ಬದಲಾವಣೆಯ ವಿಚಾರ ತಾರಕಕ್ಕೇರಿದ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ತನ್ನ ನಿಷ್ಠರನ್ನು ಸಂಪರ್ಕಿಸಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ...

Read moreDetails
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

December 27, 2025

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

December 26, 2025
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

December 21, 2025
Next Post
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; 45 ಕೋಟಿ ರೂ. ಸೀಜ್

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; 45 ಕೋಟಿ ರೂ. ಸೀಜ್

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada