• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೇಶಕ್ಕೆ ಸದೃಢ ಕಾಂಗ್ರೆಸ್ಸಿನ ಅಗತ್ಯವಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಪ್ರತಿಧ್ವನಿ by ಪ್ರತಿಧ್ವನಿ
March 28, 2022
in ದೇಶ
0
ದೇಶಕ್ಕೆ ಸದೃಢ ಕಾಂಗ್ರೆಸ್ಸಿನ ಅಗತ್ಯವಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ
Share on WhatsAppShare on FacebookShare on Telegram

“ಸತತ ಚುನಾವಣಾ ಸೋಲಿನ ಬಳಿಕ ಕಂಗೆಟ್ಟಿರುವ ಕಾಂಗ್ರೆಸ್ ಮತ್ತಷ್ಟು ಬಲಿಷ್ಟವಾಗಿ ಬೆಳೆಯಬೇಕು ಎಂಬುದು ನನ್ನ ಪ್ರಾಮಾಣಿಕ ಇಚ್ಚೆ.”

ADVERTISEMENT

ಇದನ್ನು ಹೇಳಿದವರು ಕಾಂಗ್ರೆಸ್ ನ ಹಿರಿಯ ಮುಖಂಡರಲ್ಲ. ಇತರೆ ವಿಪಕ್ಷಗಳ ನಾಯಕರಲ್ಲ. ಬದಲಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ. ಬಿಜೆಪಿಯ ಪ್ರಮುಖ ಚುನಾವಣಾ ಘೋಷಣೆಯಾಗಿರುವ ‘ಕಾಂಗ್ರೆಸ್ ಮುಕ್ತ ಭಾರತ’ದ ವಿರುದ್ಧವಾಗಿ ಗಡ್ಕರಿ ನೀಡಿರುವ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಒಳಗಾಗಿದೆ.

ರಾಷ್ಟ್ರ ಮಟ್ಟದಲ್ಲಿ ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್ ಈ ರೀತಿ ಸತತ ಸೋಲಿನಿಂದ ಕಂಗೆಟ್ಟರೆ ಪ್ರಾದೇಶಿಕ ಪಕ್ಷಗಳು ಆ ಸ್ಥಾನಗಳನ್ನು ತುಂಬಿಕೊಳ್ಳುತ್ತವೆ. ಇದು ಒಳ್ಳೆಯ ಸೂಚನೆ ಅಲ್ಲ, ಎಂದಿದ್ದಾರೆ.

“ಪ್ರಜಾಪ್ರಭುತ್ವ ಎಂಬುದು ಎರಡು ಚಕ್ರಗಳ ಸಹಾಯದಿಂದ ನಡೆಯುತ್ತದೆ. ಒಂದು ಆಡಳಿತ ಪಕ್ಷ ಮತ್ತೊಂದು ವಿಪಕ್ಷ. ಪ್ರಜಾಪ್ರಭುತ್ವದ ಉಳಿವಿಗಾಗಿ ಸದೃಢ ವಿಪಕ್ಷ ಇರುವುದು ಅನಿವಾರ್ಯ. ಹೀಗಾಗಿ, ನನ್ನ ಪ್ರಾಮಾಣಿಕ ಇಚ್ಚೆ ಏನೆಂದರೆ ಕಾಂಗ್ರೆಸ್ ಮತ್ತಷ್ಟು ಸದೃಢವಾಗಿ ಬಲಿಷ್ಟವಾಗಿ ಬೆಳೆಯಬೇಕು. ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷದ ಸ್ಥಾನ ಪಡೆದರೆ ಅದು ಪ್ರಜಾಪ್ರಭುತ್ವದ ಒಳ್ಳೆಯ ಗುಣಲಕ್ಷಣವಲ್ಲ. ಹಾಗಾಗಿ, ಪ್ರಮುಖ ವಿಪಕ್ಷ ಸದೃಢವಾಗಿರಬೇಕು,” ಎಂದು ಗಡ್ಕರಿ ಹೇಳಿದ್ದಾರೆ.

ಇದಕ್ಕೆ ಜವಾಹರ್ ಲಾಲ್ ನೆಹರೂ ಉತ್ತಮ ಉದಾಹರಣೆ. ಅಟಲ್ ಬಿಹಾರಿ ವಾಜಪೇಯಿ ಲೋಕಸಭಾ ಚುನಾವಣೆ ಸೋತಾಗಲೂ, ನೆಹರೂ ವಾಜಪೇಯಿಗೆ ಗೌರವ ನೀಡಿದರು. ಕಾಂಗ್ರೆಸ್ ನಾಯಕರು ಕೂಡಾ ಸೋಲಿನಿಂದ ಕಂಗೆಡಬಾರದು. ಮತ್ತೆ ಪಕ್ಷವನ್ನು ಕಟ್ಟುವತ್ತ ದೃಷ್ಟಿ ಇಡಬೇಕು. ಕಾಂಗ್ರೆಸ್ ಸಿದ್ದಾಂತವನ್ನು ಬೆಂಬಲಿಸುವವರು ಪಕ್ಷದೊಂದಿಗೆ ಇರಬೇಕೇ ಹೊರತು, ಪಕ್ಷವನ್ನು ತ್ಯಜಿಸಬಾರದು. ಇಂದು ಸೋತರೆ ಮುಂದೆ ಒಂದು ದಿನ ಗೆಲುವು ಇದ್ದೇ ಇರುತ್ತದೆ, ಎಂದು ಗಡ್ಕರಿ ಕಾಂಗ್ರೆಸ್ ಗೆ ಕಿವಿಮಾತು ಹೇಳಿದ್ದಾರೆ.

“ಒಂದು ಕಾಲದ ಸಂಸತ್ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಪಡೆದಿತ್ತು. ಪಕ್ಷದ ಕಾರ್ಯಕರ್ತರ, ನಾಯಕರ ಕಠಿಣ ಪರಿಶ್ರಮದಿಂದ ಪಕ್ಷವು ಮತ್ತೆ ಪುಟಿದೆದ್ದಿದೆ. ಕೆಲವು ಕ್ಷಣಗಳ ಹತಾಶೆಗಾಗಿ ಯಾರೂ ತಮ್ಮ ಸೈದ್ಧಾಂತಿಕ ನಿಲುವುಗಳನ್ನು ಮರೆಯಬಾರದು,” ಎಂದಿದ್ದಾರೆ.

ಗಡ್ಕರಿ ಹೇಳಿಕೆಗೆ ಸ್ವಾಗತ ಕೋರಿರುವ ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಸಾವಂತ್, “ಗಡ್ಕರಿ ಅವರ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರು ವಿಪಕ್ಷಗಳನ್ನು ಬಲಹೀನಗೊಳಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆಯ ಕುರಿತಾಗಿಯೂ ಮಾತನಾಡಬೇಕಿದೆ. ಪ್ರಧಾನಿ ಮೋದಿ ತನಿಖಾ ಸಂಸ್ಥೆಗಳ ಸಹಕಾರದೊಂದಿಗೆ ವಿಪಕ್ಷಗಳ ವಿರುದ್ದ ಸಮರ ಸಾರುತ್ತಿದ್ದಾರೆ. ಅದರ ಕುರಿತಾಗಿಯೂ ತಮ್ಮ ವಿಚಾರಗಳನ್ನು ಸ್ಪಷ್ಟಪಡಿಸಬೇಕಿದೆ,” ಎಂದಿದ್ದಾರೆ.

ಭಾರತದ ಪ್ರಜಾಪ್ರಭುತ್ವನ್ನು ಸರ್ವಾಧಿಕಾರವಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ಮೋದಿ ಹಾಗೂ ವಿಪಕ್ಷಗಳನ್ನು ಬಲಹೀನಗೊಳಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ಮೋದಿಯ ಮನಸ್ಥಿತಿಯ ಕುರಿತಾಗಿ ಕೂಡಾ ಗಡ್ಕರಿ ಮಾತನಾಡಿದರೆ ಅದು ದೇಶಕ್ಕೆ ಹಾಗೂ ಪ್ರಜಾಪ್ರಭುತ್ವಕ್ಕೆ ಹಿತವಾದ ಮಾತುಗಳಾಗಲು ಸಾಧ್ಯ, ಎಂದಿದ್ದಾರೆ.

“ಕಾಂಗ್ರೆಸ್ ದೇಶದ ಪ್ರಮುಖ ವಿರೋಧ ಪಕ್ಷ. ಜನರು ಕಾಂಗ್ರೆಸ್ ನ ಸಿದ್ದಾಂತ ಹಾಗೂ ಆಲೋಚನೆಗಳನ್ನು ಶೀಘ್ರದಲ್ಲಿ ಅರಿತುಕೊಳ್ಳಲಿದ್ದಾರೆ,” ಎಂದು ಸಚಿನ್ ಸಾವಂತ್ ಹೇಳಿದ್ದಾರೆ.

Tags: BJPCongress PartyCovid 19ಕಾಂಗ್ರೆಸ್ ಪಕ್ಷನರೇಂದ್ರ ಮೋದಿನಿತಿನ್ ಗಡ್ಕರಿಬಿಜೆಪಿ
Previous Post

SSLC ಪರೀಕ್ಷೆ : ಮೊದಲ ದಿನವೇ 20 ಸಾವಿರಕ್ಕೂ ಅಧಿಕ ಮಕ್ಕಳು ಪರೀಕ್ಷೆಗೆ ಗೈರು!

Next Post

ಮದರಸಾಗಳು ದೇಶ ವಿರೋಧಿ ಚಟುವಟಿಕೆಗಳನ್ನು ಕಲಿಸುತ್ತವೆ, ಅವುಗಳನ್ನು ನಿಷೇಧಿಸಬೇಕು : ಶಾಸಕ ರೇಣುಕಾಚಾರ್ಯ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಮದರಸಾಗಳು ದೇಶ ವಿರೋಧಿ ಚಟುವಟಿಕೆಗಳನ್ನು ಕಲಿಸುತ್ತವೆ, ಅವುಗಳನ್ನು ನಿಷೇಧಿಸಬೇಕು : ಶಾಸಕ ರೇಣುಕಾಚಾರ್ಯ

ಮದರಸಾಗಳು ದೇಶ ವಿರೋಧಿ ಚಟುವಟಿಕೆಗಳನ್ನು ಕಲಿಸುತ್ತವೆ, ಅವುಗಳನ್ನು ನಿಷೇಧಿಸಬೇಕು : ಶಾಸಕ ರೇಣುಕಾಚಾರ್ಯ

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada