• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಾಮೂಹಿಕ ಅತ್ಯಾಚಾರ ಪ್ರಕರಣ: ಉ.ಪ್ರ. ಮಾಜಿ ಸಚಿವನಿಗೆ ಜೀವಾವಧಿ ಶಿಕ್ಷೆ

Shivakumar A by Shivakumar A
November 13, 2021
in ದೇಶ
0
ಸಾಮೂಹಿಕ ಅತ್ಯಾಚಾರ ಪ್ರಕರಣ: ಉ.ಪ್ರ. ಮಾಜಿ ಸಚಿವನಿಗೆ ಜೀವಾವಧಿ ಶಿಕ್ಷೆ
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಖಿಲೇಶ್ ನೇತೃತ್ವದ ಸರ್ಕಾರದಲ್ಲಿದ್ದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜಾಪತಿ ಅವರೊಂದಿಗೆ ಇನ್ನೂ ಇಬ್ಬರು ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದ ವಿಶೇಷ ನ್ಯಾಯಾಲಯವು, ಅಪರಾಧಿಗಳಿಗೆ ತಲಾ ಎರಡು ಲಕ್ಷ ದಂಡವನ್ನೂ ವಿಧಿಸಿದೆ. 

ADVERTISEMENT

ಶಿಕ್ಷೆ ಪ್ರಕಟಿಸುವ ಸಮಯದಲ್ಲಿ ಗಾಯತ್ರಿ ಪ್ರಜಾಪತಿ, ಇನ್ನಿಬ್ಬರು ಅಪರಾಧಿಗಳಾದ ಅಶೋಕ್ ತಿವಾರಿ ಮತ್ತು ಆಶೀಶ್ ಶುಕ್ಲಾ ಅವರು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು. ಬುಧವಾರದಂದು ಪ್ರಕರಣದ ತೀರ್ಪನ್ನು ಜಸ್ಟೀಸ್ ಪಿ ಕೆ ರೈ ಅವರು ಪ್ರಕಟಿಸಿದ್ದರು. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಾಜಿ ಸಚಿವ ಸೇರಿದಂತೆ ಇನ್ನಿಬ್ಬರ ಪಾತ್ರ ಇರುವುದರ ಕುರಿತು ಪೊಲೀಸರು ಒದಗಿಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ನ್ಯಾಯಾಲಯ ಮೂವರನ್ನು ದೋಷಿ ಎಂದು ಘೋಷಿಸಿತ್ತು. ಪ್ರಕರಣದಲ್ಲಿ ಆರೋಪಿಗಳಾಗಿದ್ದ ವಿಕಾಸ್ ವರ್ಮಾ, ರೂಪೇಶ್ವರ್, ಅಮರೇಂದ್ರ ಸಿಂಗ್ ಅಲಿಯಾಸ್ ಪಿಂಟು ಹಾಗೂ ಚಂದ್ರಪಾಲ್  ನಾಲ್ವರನ್ನು ನಿರ್ದೋಷಿಗಳೆಂದು ಕೋರ್ಟ್ ಹೇಳಿತ್ತು.

ತೀರ್ಪು ನೀಡಲು ಯಾವುದೇ ಸಂಶಯವೇ ಇಲ್ಲದಂತ ಸಾಕ್ಷ್ಯಾಧಾರಗಳನ್ನು ಪ್ರಾಸಿಕ್ಯೂಶನ್ ಒದಗಿಸಿದೆ ಎಂದು ಕೋರ್ಟ್ ಹೇಳಿತ್ತು. ಸಾಮೂಹಿಕ ಅತ್ಯಾಚಾರವೆಸಗಿದ್ದಕ್ಕೆ IPC ಸೆಕ್ಷನ್ 376 (D) ಹಾಗೂ  ಅಪ್ರಾಪ್ತೆಯ ಮೇಲೆ ನಿಷೇಧಿತ ಲೈಂಗಿಕ ಕ್ರೀಯೆ ನಡೆಸಿದ್ದಕ್ಕೆ ಪೋಕ್ಸೊ ಕಾಯ್ದೆಯ ಸೆಕ್ಷನ್ 5 (g) ಹಾಗೂ ಸೆಕ್ಷನ್ 6ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 

ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಹತ್ತು ವರ್ಷಗಳ ಕಠಿಣ ಅಜೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ನ್ಯಾಯಾಲಯಕ್ಕೆ ಅವಕಾಶವಿದೆ. 

ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಸರ್ಕಾರವಿದ್ದಾಗ, ಗಾಯತ್ರಿ ಪ್ರಜಾಪತಿ ಅವರು ಸಾರಿಗೆ ಮತ್ತು ಗಣಿ ಸಚಿವರಾಗಿದ್ದರು. ಗ್ಯಾಂಗ್ ರೇಪ್ ಪ್ರಕರಣದಲ್ಲಿ 2017ರ ಮಾರ್ಚ್ ತಿಂಗಳಲ್ಲಿ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿಯೇ ಇದ್ದಾರೆ. 

ಪ್ರಜಾಪತಿ ಹಾಗೂ ಇತರ ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸುವ ಮೊದಲು, ಇವರ ಪರ ವಕೀಲರು ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 

“ತಮ್ಮ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗುವ ಸಂದರ್ಭದಲ್ಲಿ ಪ್ರಜಾಪತಿ ಸರ್ಕಾರದಲ್ಲಿ ಜವಾಬ್ದಾರಿಯುತ ಮಂತ್ರಿ ಸ್ಥಾನವನ್ನು ಹೊಂದಿದ್ದರು. ಜವಾಬ್ದಾರಿ ಹೊಂದಿರಬೇಕಾದ ವ್ಯಕ್ತಿ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ಅತ್ಯಾಚಾರದಂತಹ ಹೀನಾಯ ಕೃತ್ಯವೆಸಗಿದ ಕಾರಣಕ್ಕೆ ಅವರಿಗೆ ಕಠಿಣ ಸಜೆ ನೀಡಬೇಕು. ಇದು ಸಮಾಜಕ್ಕೊಂದು ಉದಾಹರಣೆಯಾಗಿರಬೇಕು,” ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಸರ್ಕಾರಿ ವಕೀಲರು ಪ್ರಕರಣಕ್ಕೆ ಸಂಬಂಧಿಸಿ 17 ಜನ ಸಾಕ್ಷಿಗಳನ್ನು ಕೋರ್ಟಿನ ಮುಂದೆ ಹಾಜರುಪಡಿಸಿದ್ದರು. 

ಪ್ರಕರಣದ ಎಫ್ಐಆರ್ ದಾಖಲಿಸುವ ಸಂದರ್ಭದಲ್ಲಿ ಅತ್ಯಾಚಾರ ಸಂತ್ರಸ್ಥೆಯು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ಹೇಳಿಕೆ ನೀಡಿದ್ದರು. ಕೋರ್ಟಿನಲ್ಲಿ ವಿಚಾರಣೆ ನಡೆಸುವ ವೇಳೆ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದು. ಆದರೆ, ಕೋರ್ಟ್ ಸಂತ್ರಸ್ಥೆಯು ಮೊದಲು ನೀಡಿದ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ತೀರ್ಪು ನೀಡಿದೆ. 

ಸಂತ್ರಸ್ಥೆಯು ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣಕ್ಕಾಗಿ ಮಹಿಳೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಎಫ್ಐಆರ್ ದಾಖಲಿಸುವಂತೆ ಸುಪ್ರಿಂ ಆದೇಶ ನೀಡಿತ್ತು. ಇದಾದ ಬಳಿಕ ಫೆಬ್ರುವರಿ 18, 2017ರಂದು ಮಾಜಿ ಸಚಿವ ಪ್ರಜಾಪತಿ ಮೇಲೆ ಗೌತಮಪಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಸಂತ್ರಸ್ಥೆಯ ಮೇಲೆ ಸಚಿವ ಪ್ರಜಾಪತಿ ಹಾಗೂ ಆತನ ಆಪ್ತರು 2014ರ ಅಕ್ಟೋಬರ್ ತಿಂಗಳಿಂದ ನಿರಂತರ ಅತ್ಯಾಚಾರವೆಸಗುತ್ತಿದ್ದರು. 2016ರ ಜುಲೈನಲ್ಲಿ ಅತ್ಯಾಚಾರಿಗಳು ಅಪ್ರಾಪ್ತ ಮಗಳ ಮೇಲೂ ದೌರ್ಜನ್ಯವೆಸಗಿದಾಗ ದೂರು ನೀಡಲು ನಿರ್ಧರಿಸಿದೆ ಎಂದು ಸಂತ್ರಸ್ಥೆ ಹೇಳಿಕೊಂಡಿದ್ದರು. 

Tags: Harassmentlifeimprisionmentsupreme courtUttar Pradesh
Previous Post

ಕೃಷಿ ಮೇಳ 2021; ಹಲವು ವಿಶೇಷಗಳಿಗೆ ಸಾಕ್ಷಿಯಾದ ಅನ್ನದಾತರ ಮೇಳ | GKVK |

Next Post

ಸಾವಿರಾರು ಕೋಟಿ ಮೊತ್ತದ ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ಸಿಸಿಬಿ ಮೌನ ವಹಿಸಿದ್ದು ಯಾಕೆ?

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಸಾವಿರಾರು ಕೋಟಿ ಮೊತ್ತದ ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ಸಿಸಿಬಿ ಮೌನ ವಹಿಸಿದ್ದು ಯಾಕೆ?

ಸಾವಿರಾರು ಕೋಟಿ ಮೊತ್ತದ ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ಸಿಸಿಬಿ ಮೌನ ವಹಿಸಿದ್ದು ಯಾಕೆ?

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada