• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

Any Mind by Any Mind
September 27, 2023
in Top Story, ಸಿನಿಮಾ
0
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ
Share on WhatsAppShare on FacebookShare on Telegram

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರೆಗಮ ಕನ್ನಡ’ ಯೂಟ್ಯೂಬ್‌ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ ಅಖಾಡ” ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

ADVERTISEMENT

“ಗರಡಿ” ಎಂದರೆ ಒಂದು ಊರನ್ನು ಕಾಯುವ ಪೊಲೀಸ್ ಠಾಣೆ ಇದ್ದ ಹಾಗೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಹಿಂದೆ ಒಂದು ಊರಿನ ರಕ್ಷಣೆಗೆ “ಗರಡಿ” ಬಹು ಮುಖ್ಯವಾಗಿತ್ತು. ಊರಿನವರು ಸಹ ಗರಡಿ ಮನೆಯ ಕುಸ್ತಿಪಟುಗಳನ್ನು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿದ್ದರು. ಅಂತಹ “ಗರಡಿ” ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಗರಡಿ ಮನೆಯ ಯಜಮಾನನಾಗಿ ಬಿ.ಸಿ.ಪಾಟೀಲ್ ಅಭಿನಯಿಸಿದ್ದಾರೆ. ಅವರ ಶಿಷ್ಯನಾಗಿ ಸೂರ್ಯ ಅಭಿನಯಿಸಿದ್ದಾರೆ. ಇದು ಒಂದು ರೀತಿ ದ್ರೋಣಾಚಾರ್ಯ ಹಾಗೂ ಏಕಲವ್ಯನ ಕಥೆ ಎನ್ನಬಹುದು. ಇನ್ನು ಇಂದು ಬಿಡುಗಡೆಯಾಗಿರುವ ಹಾಡನ್ನು ಹರಿಕೃಷ್ಣ ಅದ್ಭುತವಾಗಿ ಸಂಯೋಜಿಸಿ ಹಾಡಿದ್ದಾರೆ. ಚಿತ್ರ ನವೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು.

“ಗರಡಿ” ಚಿತ್ರ ಆರಂಭವಾಗಿ ಈ ನವೆಂಬರ್ 14 ಕ್ಕೆ ಎರಡು ವರ್ಷಗಳಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಈ ಚಿತ್ರ ಆರಂಭವಾಗಿತ್ತು. ದರ್ಶನ್ ಅವರು ಶೀರ್ಷಿಕೆ ಅನಾವರಣ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ (ನವೆಂಬರ್ 10) ಚಿತ್ರ ಬಿಡುಗಡೆಯಾಗುತ್ತದೆ. ಯೋಗರಾಜ್ ಭಟ್ ಅವರು ಬಹಳ ಶ್ರಮವಹಿಸಿ ಚಿತ್ರವನ್ನು ಉತ್ತಮವಾಗಿ ನಿರ್ದೇಶನ ಮಾಡಿದ್ದಾರೆ. ನಾನು ಈಗಾಗಲೇ ಚಿತ್ರವನ್ನು ಸಾಕಷ್ಟು ಸಲ ನೋಡಿ ಖುಷಿ ಪಟ್ಟಿದ್ದೇನೆ. ನಿಮಗೂ ಚಿತ್ರ ಹಿಡಿಸಲಿದೆ ಎಂದರು ಹಿರಿಯ ನಟ ಬಿ.ಸಿ.ಪಾಟೀಲ್.

ಈ ಚಿತ್ರದಲ್ಲೂ ನನ್ನ ಹೆಸರು ಸೂರ್ಯ ಅಂತ. ಎಲ್ಲರೂ “ಗರಡಿ ಸೂರಿ” ಅಂತ ಕರೆಯುತ್ತಿರುತ್ತಾರೆ. ಈ ಚಿತ್ರದಲ್ಲಿ ನನಗೆ ಅವಕಾಶ ಸಿಗಲು ದರ್ಶನ್ ಅವರು ಕಾರಣ. ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇಂದು ಬಿಡುಗಡೆಯಾಗಿರುವ ಟೈಟಲ್ ಸಾಂಗ್ ನಲ್ಲಿ ನಾನು ಸಖತ್ ಡ್ಯಾನ್ಸ್ ಮಾಡಿದ್ದೇನೆ. ಯೋಗರಾಜ್ ಭಟ್ ಅವರ ಸಾಹಿತ್ಯ ಹಾಗೂ ಹರಿಕೃಷ್ಣ ಅವರ ಸಂಗೀತದಲ್ಲಿ ಹಾಡು ಅದ್ಭುತವಾಗಿ ಮೂಡಿಬಂದಿದೆ ಎನ್ನುತ್ತಾರೆ ನಾಯಕ ಸೂರ್ಯ.

ನಾಯಕಿ ಸೋನಾಲ್ ಮಾಂತೆರೊ, ಚಿತ್ರದಲ್ಲಿ ನಟಿಸಿರುವ ಸುಜಯ್, ಧರ್ಮಣ್ಣ, ರಾಘು, ಛಾಯಾಗ್ರಾಹಕ ನಿರಂಜನ್ ಬಾಬು, ನೃತ್ಯ ನಿರ್ದೇಶಕ ಧನಂಜಯ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ವನಜಾ ಪಾಟೀಲ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕಿ ಸೃಷ್ಟಿ ಪಾಟೀಲ್ “ಗರಡಿ” ಚಿತ್ರ ಸಾಗಿ ಬಂದ ಬಗ್ಗೆ ವಿವರಣೆ ನೀಡಿದರು.

Tags: CinemagaradiMovie
Previous Post

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

Next Post

3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada