• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗೌರಿ ಲಂಕೇಶ್‌ ಹತ್ಯೆ ; ಮತ್ತೆ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌(Gauri Lankesh) ಕೊಲೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳಿಗೆ ಈಚೆಗೆ ಕರ್ನಾಟಕ ಹೈಕೋರ್ಟ್‌ ಜಾಮೀನು (Karnataka High Court Bail)ಮಂಜೂರು ಮಾಡಿದೆ.ಈ ಹಿಂದೆ ನಾಲ್ವರು Four)ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.ಇದರೊಂದಿಗೆ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು (court granted bail.)ನೀಡಿದಂತಾಗಿದೆ.

ADVERTISEMENT

ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ್‌ ಜಯವಂತ್‌ ಕುರಾನೆ ಅಲಿಯಾಸ್‌ ಬರತ್‌ ಕುರಾನೆ ಅಲಿಯಾಸ್‌ ಅಂಕಲ್‌ ಅಲಿಯಾಸ್‌ ಟೊಮೊಟರ್; 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್‌ ಅಲಿಯಾಸ್ ಪಂದೇಜಿ ಅಲಿಯಾಸ್‌ ಪಂಡೆ ಅಲಿಯಾಸ್‌ ಗುಜ್ಜಾರ್‌ ಅಲಿಯಾಸ್‌ ಮಹೇಶ್‌ ಪಾಟೀಲ್‌; 13ನೇ ಆರೋಪಿ ಶಿವಮೊಗ್ಗದ ಶಿಕಾರಿಪುರದ ಸುಜಿತ್‌ ಕುಮಾರ್‌ ಅಲಿಯಾಸ್‌ ಸುಜಿತ್‌ ಎಸ್‌ ಆರ್‌ ಅಲಿಯಾಸ್‌ ಸಂಜಯ್‌ ಅಲಿಯಾಸ್‌ ಪ್ರವೀಣ್‌ ಅಲಿಯಾಸ್‌ ಮಂಜುನಾಥ್‌ ಅಲಿಯಾಸ್‌ ಗೋವಿನಾಥ್‌; ಮಹಾರಾಷ್ಟ್ರದ ಔರಂಗಾಬಾದ್‌ನ 16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್‌ನ ಶ್ರೀಕಾಂತ್‌ ಪಂಗಾರ್ಕರ್‌ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಎಲ್ಲಾ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್‌ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗುವಂತಿಲ್ಲ. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್‌ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ಗೌರಿ ಹತ್ಯೆ ಪ್ರಕರಣ: ಅಮಿತ್‌ ದಿಗ್ವೇಕರ್‌, ಸುರೇಶ್‌, ನವೀನ್‌ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ಗೌರಿ ಲಂಕೇಶ್‌ ಕೊಲೆಯಾದ ಅರ್ಜಿದಾರರು ಸ್ಥಳದಲ್ಲಿರಲಿಲ್ಲ. ಎರಡನೇ ಆರೋಪಿ ಪರಶುರಾಮ್‌ ವಾಘ್ಮೋರೆ ಮತ್ತು 3ನೇ ಆರೋಪಿ ಗಣೇಶ್‌ ಮಿಸ್ಕಿನ್‌ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಉಳಿದವರ ಜೊತೆ ಸೇರಿ ಕೊಲೆಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಇತ್ಯಾದಿ ಮೂಲಕ ಪಿತೂರಿ ನಡೆಸಿರುವ ಆರೋಪ ಅರ್ಜಿದಾರರ ವಿರುದ್ಧವಿದೆ. ಇದೇ ಆರೋಪ ಈಚೆಗೆ ಜಾಮೀನು ಪಡೆದಿದ್ದ ಅಮಿತ್‌ ದಿಗ್ವೇಕರ್‌ (5ನೇ ಆರೋಪಿ), ಎಚ್‌ ಎಲ್‌ ಸುರೇಶ್‌ (7ನೇ ಆರೋಪಿ), ಎನ್‌ ಮೋಹನ್‌ ನಾಯಕ್‌ (11ನೇ ಆರೋಪಿ) ಮತ್ತು ಕೆ ಟಿ ನವೀನ್‌ ಕುಮಾರ್‌ (17ನೇ ಆರೋಪಿ) ಅವರ ವಿರುದ್ಧವಿತ್ತು. ಮೋಹನ್‌ ನಾಯಕ್‌ಗೆ ಮೊದಲಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್‌ ಸಹ ಎತ್ತಿ ಹಿಡಿದಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

6ನೇ ಆರೋಪಿ ಭರತ್‌ ವಿರುದ್ಧ ಪರಶುರಾಮ್‌ ವಾಘ್ಮೋರೆ ಮತ್ತು ಗಣೇಶ್‌ ಮಿಸ್ಕಿನ್‌ಗೆ ವ್ಯವಸ್ಥೆ ಮಾಡಿದ ಆರೋಪವಿದೆ. ಆರೋಪಿಗಳಿಗೆ ಸುಧನ್ವ ವಾಹನ ವ್ಯವಸ್ಥೆ ಮಾಡಿದ್ದು, ಶಸ್ತ್ರಾಸ್ತ್ರ ಪೂರೈಕೆಗೆ ನೆರವಾಗಿದ್ದನು ಎಂದು ಆರೋಪಿಸಲಾಗಿದೆ. ಆರೋಪಿ ಶ್ರೀಕಾಂತ್‌ ಪಂಗಾರ್ಕರ್‌ ಎಂಬಾತ ತರಬೇತಿ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದು, 10ನೇ ಆರೋಪಿ ಶರದ್‌ ಕಲಸ್ಕರ್‌ ಅಲಿಯಾಸ್‌ ಚೋಟುಗೆ ಶಸ್ತ್ರಾಸ್ತ್ರ ತಲುಪಿಸಿದ್ದ ಆರೋಪವಿದೆ. 1ನೇ ಆರೋಪಿ ಅಮೋಲ್‌ ಕಾಳೆ ಮತ್ತು 14ನೇ ಆರೋಪಿ ಮನೋಜ್‌ ಜೊತೆಗೆ ಸೇರಿ ಬೆಳಗಾವಿಯ ಸ್ವೀಕಾರ್‌ ಹೋಟೆಲ್‌ನಲ್ಲಿ ಪಿತೂರಿ, ಮನೋಹರ್‌ ಜೊತೆಗೆ ಆದಿಚುಂಚನಗಿರಿ ಮಠದ ಪಾರ್ಕ್‌ ಸಮೀಪ ಪಿತೂರಿ ಹಾಗೂ ಸುಜಿತ್‌ ಕಸ್ಟಡಿಯಲ್ಲಿದ್ದಾಗ ದಾವಣಗೆರೆಯ ಆತನ ಅಜ್ಜಿಯ ಮನೆಯಲ್ಲಿ ಎರಡು ಜೀವಂತ ಬುಲೆಟ್‌ ವಶಕ್ಕೆ ಪಡೆಯಲಾಗಿತ್ತು. 12ನೇ ಆರೋಪಿ ವಾಸುದೇವ್‌ ಭಗವಾನ್‌ ಸೂರ್ಯವಂಶಿ ಜೊತೆಗೂಡಿ ದಾವಣಗೆರೆಯಲ್ಲಿ ಹೀರೊ ಹೋಂಡಾ ಪ್ಯಾಷನ್‌ ಪ್ರೊ ಬೈಕ್‌ ಕದ್ದ ಆರೋಪ ಸುಜಿತ್‌ ಮೇಲಿದೆ.

Tags: bangalore press clubGauri Lankesh's murdergranted bail to four accusedKarnataka High Court
Previous Post

ಕದ್ದ ಮೊಬೈಲ್‌ ಬಾಂಗ್ಲಾ ದೇಶಕ್ಕೆ ಕಳ್ಳ ಸಾಗಾಟ ; ಮೂವರ ಬಂಧನ

Next Post

ಬೆಂಗಳೂರಲ್ಲಿ ಭೀಕರ ಮರ್ಡರ್ : ಹಳೆ ದ್ವೇಷ ಹಿನ್ನೆಲೆಯಲ್ಲಿ ಯುವಕನಿಗೆ ಚಾಕು ಇರಿದ ರೌಡಿಶೀಟರ್!

Related Posts

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
0

ಬಿಗ್‌ ಬಾಸ್‌ ಕನ್ನಡ (Bigg Boss Kannada) ಸೀಸನ್‌ 12 ಎರಡು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇಂದು ಕೂಡ ಆಶ್ಚರ್ಯಕರವಾಗಿ ಡಬ್ಬಲ್‌...

Read moreDetails
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
Next Post

ಬೆಂಗಳೂರಲ್ಲಿ ಭೀಕರ ಮರ್ಡರ್ : ಹಳೆ ದ್ವೇಷ ಹಿನ್ನೆಲೆಯಲ್ಲಿ ಯುವಕನಿಗೆ ಚಾಕು ಇರಿದ ರೌಡಿಶೀಟರ್!

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada