• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ತಮಿಳುನಾಡಿನಲ್ಲಿ ಟಿವಿಕೆ ಗೆಲುವನ್ನು ಉಲ್ಲೇಖಿಸಿ ಚಾಟಿ ಬೀಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಬಿನ್..

ಪ್ರತಿಧ್ವನಿ by ಪ್ರತಿಧ್ವನಿ
May 24, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Share on WhatsAppShare on FacebookShare on Telegram

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ.

ADVERTISEMENT
Nithin Nabin Meeting : ರಾಜ್ಯ ನಾಯಕರ ಜತೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಬಿನ್‌ ಮೀಟಿಂಗ್‌..! #bengaluru

ಶನಿವಾರ ರಾತ್ರಿ ನಗರಕ್ಕೆ ಆಗಮಿಸಿ, ಇಂದು ಸರಣಿ ಸಭೆಗಳು, ಭೇಟಿಗಳನ್ನು ಮಾಡುತ್ತಿರುವ ನಬಿನ್‌ ಪಕ್ಷದ ಎಲ್ಲ ವರ್ಗದ ನಾಯಕರ ಸಭೆ ನಡೆಸಿ, ಪ್ರಮುಖ ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದಾರೆ. ನೀವು ಇನ್ನು ಮುಂದೆ ಎಲ್ಲೋ ಕುಳಿತು ಪಕ್ಷ ಸಂಘಟನೆಯ ಮಾತನಾಡುವ ಬದಲು ಗ್ರೌಂಡ್‌ ಲೆವೆಲ್‌ನಲ್ಲಿ ಜನರನ್ನು ಭೇಟಿಯಾಗಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ತಾಕೀತು ಮಾಡಿದ್ದಾರೆ.

Image

ಇಷ್ಟು ದಿನಗಳ ಕಾಲ ಆದದ್ದ ಆಯಿತು, ಇನ್ನು ಮುಂದೆ ಕಡ್ಡಾಯವಾಗಿ ಎಲ್ಲ ಶಾಸಕರು ಹಾಗೂ ಸಂಸದರು ತಳಮಟ್ಟದಲ್ಲಿನ ಜನರನ್ನು ಭೇಟಿಯಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಅರಿವು ಮೂಡಿಸಬೇಕು. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಬೇಕು. ಹೋರಾಟ, ಸಂಘಟನೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಜೊತೆ ಜೊತೆಗೆ ಎಲ್ಲರನ್ನೂ ಕರೆದುಕೊಂಡು ಹೋಗಬೇಕು ಎಂದು ನಬಿನ್‌ ಸೂಚಿಸಿದ್ದಾರೆ.

Image

ಇದನ್ನೂ ಓದಿ : ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಸಂಘಟನೆಯ ವಿಚಾರದಲ್ಲಿ ಬೂತ್ ಮಟ್ಟ, ಶಕ್ತಿ ಕೇಂದ್ರ, ಮಂಡಲ, ಮಹಾ ಮಂಡಲ, ಜಿಲ್ಲಾ ಮಟ್ಟ, ರಾಜ್ಯಮಟ್ಟದಲ್ಲಿ ಹೋರಾಟ ನಡೆಸಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಪಶ್ಚಿಮ ಬಂಗಾಳ ಮಾದರಿಯಲ್ಲಿ ಕಾರ್ಯಕರ್ತರು, ನಾಯಕರು ಗ್ರೌಂಡ್​​​ಗಿಳಿದು ಸಂಘಟನೆ, ಹೋರಾಟ ಮಾಡಬೇಕು ಎಂದು ಸದ್ಯ ಇರುವ ಪಕ್ಷದ ಸ್ಥಿತಿಯ ಬಗ್ಗೆ ನಬಿನ್‌ ಕಳವಳ ವ್ಯಕ್ತಪಡಿಸಿದ್ದಾರೆ.

Labour Minister Santhosh Lad : ವಿಶೇಷ ಚೇತನರೊಂದಿಗೆ ಆತ್ಮೀಯವಾಗಿ ಕ್ಷಣ ಕಳೆದ ಕಾರ್ಮಿಕ ಸಚಿವ..! #Innov8Ability

ಕಾಂಗ್ರೆಸ್ ಸರ್ಕಾರ ಜನರಲ್ಲಿ ಮೂಡಿಸಿದ್ದ ವಿಶ್ವಾಸ ಹುಸಿಯಾಗಿದೆ, ಜನರ ನಂಬಿಕೆ ಉಳಿಸಲು ವಿಫಲವಾಗಿದೆ. ಹೀಗಾಗಿ ನೀವು ಗಟ್ಟಿಯಾಗಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿ, ಇಲ್ಲಿನ ಪ್ರತಿಯೊಬ್ಬ ಮಂತ್ರಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಹ ಭ್ರಷ್ಟಾಚಾರದ ಆರೋಪದಿಂದ ಮುಕ್ತರಾಗಿಲ್ಲ. ಜನರ ಬದುಕನ್ನು ಹಸನು ಮಾಡುವ ಭರವಸೆ ಕೊಟ್ಟ ಕಾಂಗ್ರೆಸ್ ಬೆಲೆ ಏರಿಕೆ ಮೂಲಕ ಜನರ ಬದುಕು ದುಸ್ತರವಾಗಿಸಿದೆ ಎಂದು ನಬಿನ್‌ ವಾಗ್ದಾಳಿ ನಡೆಸುವ ಮೂಲಕ ಪಕ್ಷದ ನಾಯಕರಿಗೆ ಕಾಂಗ್ರೆಸ್‌ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ.

Image

ಕೇವಲ ಗ್ಯಾರಂಟಿ ಪ್ರಚಾರದಲ್ಲಿ ತೊಡಗಿದ್ದಾರೆ. ಜನರ ಬದುಕಿಗೆ ಗ್ಯಾರಂಟಿ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಸರ್ಕಾರದ ನಡೆಯಿಂದ ಯುವಕರು ಹತಾಶರಾಗಿದ್ದಾರೆ, ರೈತರು ಸಂಕಷ್ಟದಲ್ಲಿದ್ದಾರೆ. ಮಹಿಳೆಯರು ನಾಪತ್ತೆಯಾಗುತ್ತಿದ್ದಾರೆ. ಈ ಎಲ್ಲಾ ವೈಫಲ್ಯಗಳು ಸ್ಪಷ್ಟವಾಗಿವೆ. ಕೇವಲ ವೈಫಲ್ಯಗಳ ಜೊತೆಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಿಂದ ಬಿಜೆಪಿ ನಾಯಕರು ಹೊರಬರಬೇಕು. ಈಗಾಗಲೇ ತಮಿಳುನಾಡಿನ ರಾಜಕೀಯ ಸ್ಥಿತಿ ನಿಮ್ಮೆದುರು ಇದೆ ಎಂದು ಟಿವಿಕೆಯ ಗೆಲುವಿನ ಪರಿಯನ್ನು ಉಲ್ಲೇಖಿಸಿ ಚಾಟಿ ಬೀಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ದೊರಕಿದೆ.

ಯಾವುದೇ ಕಾರಣಕ್ಕೂ ಇಲ್ಲಿನ ಬಿಜೆಪಿ ನಾಯಕರು ಪಕ್ಷ ಸಂಘಟನೆಯಲ್ಲಿ ಹಿಂದೆ ಉಳಿಯಬಾರದು. ಸರ್ಕಾರ ನಡೆಸುತ್ತಿರುವ ನಾಯಕರು ಸರ್ಕಾರವನ್ನು ತಮಗಾಗಿ ಬಳಸಿಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇಲ್ಲಿನ ಸರ್ಕಾರ ದೆಹಲಿ ಕಾಂಗ್ರೆಸ್‌ನ ಎಟಿಎಂ ಆಗಿದೆ ಎಂದು ದೂರಿದ್ದಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ರಾಜ್ಯ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

Tags: B S YediyurappaB Y VijayendraBJP Indiabjp karnatakaBJP MLAsBJP MPsBjp presidentCongress Governmentcongress karnatakaNitin NabinPratidhvaniR Ashok
Previous Post

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

Related Posts

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

by ಪ್ರತಿಧ್ವನಿ
May 24, 2026
0

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada