• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಘಾಜಿಯಾಬಾದ್:‌ ಶಿಕ್ಷಕನ ಮೇಲೆ ಗುಂಡು ಹಾರಿಸಿದ ಅಪ್ರಾಪ್ತ ವಿದ್ಯಾರ್ಥಿ!

by
March 8, 2021
in Uncategorized
0
ಘಾಜಿಯಾಬಾದ್:‌ ಶಿಕ್ಷಕನ ಮೇಲೆ ಗುಂಡು ಹಾರಿಸಿದ ಅಪ್ರಾಪ್ತ ವಿದ್ಯಾರ್ಥಿ!
Share on WhatsAppShare on FacebookShare on Telegram

ತರಗತಿಯಲ್ಲಿ ಬೈದ ಕಾರಣಕ್ಕೆ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿರುವ ಘಟನೆ ಘಾಜಿಯಾಬಾದ್‌ನ ಮುರಾದನಗರ್‌ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಕೃಷ್ಣ ವಿದ್ಯಾ ನಿಕೇತನ್‌ ಸಂಸ್ಥೆಯ ವಿದ್ಯಾರ್ಥಿಯೆಂದು ಗುರುತಿಸಲಾಗಿದೆ. ಅದೇ ಸಂಸ್ಥೆಯ ಅಧ್ಯಾಪಕ ಸಚಿನ್‌ ತ್ಯಾಗಿ ಗುಂಡೇಟಿಗೆ ಒಳಗಾದವರು.

ADVERTISEMENT

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಗುಂಡೇಟಿಗೆ ಒಳಗಾದ ಸಂತ್ರಸ್ತ ಶಿಕ್ಷಕ ಕಳೆದ ಕೆಲವು ವರ್ಷಗಳಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬೋಧಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ, ಆರೋಪಿ ವಿದ್ಯಾರ್ಥಿ ಉಳಿದ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ತೋರುತ್ತಿರುವ ಹಿನ್ನೆಲೆಯಲ್ಲಿ ತರಗತಿಯ ಎಲ್ಲರೆದುರು ಬೈದು ತರಗತಿಯಿಂದ ಹೊರಕ್ಕೆ ಕಳಿಸಿದ್ದಾರೆ. ಇದರಿಂದ ಕುಪಿತಗೊಂಡ ವಿದ್ಯಾರ್ಥಿ ಶಾಲೆಯ ಮುಖ್ಯದ್ವಾರದಿಂದ 100 ಮೀಟರ್‌ ಅಂತರದಲ್ಲಿ ತರಗತಿ ಮುಗಿದು ಶಿಕ್ಷಕ ಬರಲು ತನ್ನ ಗೆಳೆಯರೊಂದಿಗೆ ಕಾದು ನಿಂತಿದ್ದಾನೆ.

ತರಗತಿ ಮುಗಿಸಿ ತನ್ನ ಮೋಟಾರ್‌ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ಶಿಕ್ಷಕನನ್ನು ಮುಖ್ಯ ಆರೋಪಿಯ ಸಂಗಡಿಗರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ, ಮೊದಲೇ ಹೊಂಚು ಹಾಕಿ ಕುಳಿತಿದ್ದ ಆರೋಪಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಘಾಜಿಯಾಬಾದ್‌ ಎಸ್‌ಪಿ ಡಾ. ಇರಾಝ್‌ ರಾಜಾ ತಿಳಿಸಿದ್ದಾರೆ.

ನಾವು ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಆರೋಪಿ ಬಂದೂಕು ಹಿಡಿದು ಶಿಕ್ಷಕನ ಕಡೆಗೆ ಗುಂಡು ಹಾರಿಸುವುದು ವಿಡಿಯೊದಲ್ಲಿ ಕಂಡುಬಂದಿದೆ. ಗುಂಡು ಹಾರಿಸಿದ ಬಳಿಕ ಆರೋಪಿಗಳೆಲ್ಲರೂ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಕುತೂಹಲಕಾರಿಯೆಂಬಂತೆ, ಸಿಸಿಟಿವಿ ದೃಶ್ಯಾವಳಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಪೊಲೀಸರಿಗೆ ಗುಂಡು ಶಿಕ್ಷಕನಿಗೆ ತಗುಲಿರುವುದು ಕಂಡು ಬಂದಿಲ್ಲ. ಹಾಗೂ ಗುಂಡೇಟಿನಿಂದ ಶಿಕ್ಷಕನಿಗೆ ಯಾವುದೇ ರೀತಿಯ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂದು ಎಸ್‌ಪಿ ಹೇಳಿದ್ದಾರೆ.

ಆದರೆ ಘಟನೆಯ ಒಂದು ಗಂಟೆಯ ನಂತರ, ಶಿಕ್ಷಕನು ಗುಂಡಿನ ಗಾಯದ ಗುರುತುಗಳೊಂದಿಗೆ ಪೊಲೀಸ್ ಠಾಣೆಗೆ ತಲುಪಿ ವಿದ್ಯಾರ್ಥಿಯ ವಿರುದ್ಧ ದೂರು ನೀಡಿದ್ದಾರೆ. ಸದ್ಯ, ಶಿಕ್ಷಕ ನೀಡಿದ ದೂರಿನ ಮೇರೆಗೆ ಐಪಿಸಿಯ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಪರಾಧದ ಸ್ಥಳದಲ್ಲಿ ಬಳಸಿದ ಸ್ಕೂಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಲಿದ್ದಾರೆ. ನಾವು ಶಿಕ್ಷಕರ ಮೇಲಾದ ಗಾಯದ ಗುರುತಿನ ಹಿನ್ನೆಲೆಯನ್ನೂ ನಾವು ಪರಿಶೀಲಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Previous Post

ಯುವ ನಾಯಕರನ್ನು ಮುನ್ನಡೆಸುವಲ್ಲಿ ಪದೇ ಪದೇ ಎಡವುತ್ತಿರುವ ʼಕಾಂಗ್ರೆಸ್ʼ!

Next Post

ಬಜೆಟ್ ಬಯಲುಸೀಮೆಯ ಪಾಲಿಗೆ “ಹೊಸ ಬಾಟಲಿಯಲ್ಲಿ ಹಳೇ ಮದ್ಯ” ಎಂಬಂತಿದೆ – ಆಂಜನೇಯ ರೆಡ್ಡಿ

Related Posts

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
Uncategorized

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು‌ ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್‌...

Read moreDetails
ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

ಡಿಜಿಪಿ ರಾಸಲೀಲೆ ಕೇಸ್: ತನಿಖೆಗೆ ಆದೇಶ

January 23, 2026
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

January 21, 2026
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
Next Post
ಬಜೆಟ್ ಬಯಲುಸೀಮೆಯ ಪಾಲಿಗೆ “ಹೊಸ ಬಾಟಲಿಯಲ್ಲಿ ಹಳೇ ಮದ್ಯ” ಎಂಬಂತಿದೆ – ಆಂಜನೇಯ ರೆಡ್ಡಿ

ಬಜೆಟ್ ಬಯಲುಸೀಮೆಯ ಪಾಲಿಗೆ “ಹೊಸ ಬಾಟಲಿಯಲ್ಲಿ ಹಳೇ ಮದ್ಯ” ಎಂಬಂತಿದೆ - ಆಂಜನೇಯ ರೆಡ್ಡಿ

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada