
ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ
ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ
ನವದೆಹಲಿ ಏ 3: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.
ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು.

ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ.
ಸಂಬಂಧಿತ ಸಂಸ್ಥೆಗಳಿಂದ ಶೇ5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆ: ನವದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂತೋಷ್ ಲಾಡ್ ಸೇರಿ ಹಲವರು ಭಾಗಿ
ಕಾರ್ಮಿಕ ಇಲಾಖೆಯ ಮತ್ತೊಂದು ಮಹತ್ವದ ಕ್ರಮ ಜಾರಿಗೆ
ನವದೆಹಲಿ, ಏ 3: ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸುವ ಸಂಬಂಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಇತರ ಸಚಿವರು ಭಾಗಿಯಾಗಿದ್ದರು.

ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಭಾಗವಹಿಸಿ ಮಂಡಳಿ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು.
ಸಭೆಯಲ್ಲಿ “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಕಾರ್ಮಿಕ ಇಲಾಖೆಯ ಮತ್ತೊಂದು ಮಹತ್ವದ ಕ್ರಮದಿಂದಾಗಿ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಸಹಾಯವಾಗಲಿದೆ.
ಅಮೆಜಾನ್, ಫ್ಲಿಪ್ ಕಾರ್ಟ್, ಜೆಪ್ಪೊ, ಬ್ಲಿಂಕಿಟ್ ಸೇರಿದಂತೆ ಪ್ಲಾಟ್ ಪಾರಂ ಆಧಾರಿತ ಸಂಸ್ಥೆಗಳಲ್ಲಿ ಅಸಂಖ್ಯಾತ ಕಾರ್ಮಿಕರು ಕೆಲಸ ಮಾಡುತಿದ್ದು, ಈ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

ಸಂಬಂಧಿತ ಸಂಸ್ಥೆಗಳಿಂದ ಶೇ 5 ರಷ್ಟು ಸುಂಕ ಸಂಗ್ರಹಿಸುವುದು ಮತ್ತು ಉಳಿದ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗಿಗ್ ಕಾರ್ಮಿಕರಿಗೆ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಉದ್ದೇಶ ಇದೆ: ಸಂತೋಷ್ ಲಾಡ್
ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ವಿಶೇಷವಾಗಿ ಗಿಗ್ ಕಾರ್ಮಿಕರ ಬಗ್ಗೆ ಚರ್ಚಿಸಲಾಯಿತು. ಗಿಗ್ ಕಾರ್ಮಿಕರ ಬಗ್ಗೆ ರಾಹುಲ್ ಗಾಂಧಿ ಅವರು ವಿಶೇಷವಾಗಿ ಕಾಳಜಿ ಹೊಂದಿದ್ದಾರೆ. ರಾಜಸ್ಥಾನದಲ್ಲಿ ಬಂದ ಮಸೂದೆಗಿಂತ ಹೆಚ್ಚಿನ ಅಧ್ಯಯನ ಮಾಡಿ ನಾವು ಈವರೆಗೆ ಮೂವತ್ತಕ್ಕೂ ಹೆಚ್ಚು ಸಭೆಗಳನ್ನು ಮಾಡಿದ್ದೇವೆ. ಒಂದು ಅತ್ಯುತ್ತಮವಾದ ಬಿಲ್ ತಂದಿದ್ದೇವೆ. ಗಿಗ್ ಕಾರ್ಮಿಕರಿಗೆ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಉದ್ದೇಶ ಇದೆ ಎಂದು ಸಚಿವ ಸಂತೋಷ್ ಲಾಡ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಈ ಮಸೂದೆ ಬಗ್ಗೆ ಅಂತಿಮ ಚರ್ಚೆ ಆಗಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ಬಂದ ನಂತರ ಗಿಗ್ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ಪರಿಹಾರ ನೀಡುವ ಕ್ರಮ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಸಚಿವ ಸಂಪಟುದಲ್ಲಿ ಮಂಡಿಸಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಕಾನೂನು ಮಾಡಿ ಜಾರಿಗೆ ತರುವ ಸಾಧ್ಯತೆ ಇದೆ ಎಂದು ವಿವರಿಸಿದರು.
ಇದರಲ್ಲಿ ಉದ್ಯೋಗಿ, ಉದ್ಯೋಗದಾತ, ಕೈಗಾರಿಕಾ ವಿವಾದ ಅಥವಾ ಪ್ಲಾಟ್ ಫಾರಂನವರಿಗೆ ತೊಂದರೆ ಕೊಡುವ ಉದ್ದೇಶ ಇಲ್ಲ. ಈ ಮಸೂದೆ ಉದ್ದೇಶ ಯಾರು ಗಿಗ್ ವಲಯದಲ್ಲಿ ಕೆಲಸ ಮಾಡುತ್ತಾರೆ ಅವರಿಗೆ ಅನುಕೂಲ ಮಾಡಿಕೊಡುವುದಾಗಿದೆ. ಇಂತಿಷ್ಟು ಶುಲ್ಕ ಪಡೆದು ಮಂಡಳಿ ಮೂಲಕ ಹಣ ಸಂಗ್ರಹಿಸಿ ಅನುಕೂಲವಾಗುವ ಕೆಲಸಗಳನ್ನು ಮಾಡುತ್ತೇವೆ ಎಂದರು.