![](https://pratidhvani.com/wp-content/uploads/2024/06/WhatsApp-Image-2024-06-28-at-19.44.04.jpeg)
ಅಪ್ರಾಪ್ತ ವಯಸ್ಸಿನ ಬಾಲಕನ ಕೈಗೆ ಬೈಕ್ ಕೊಟ್ಟಿದ್ದ ತಪ್ಪಿಗೆ ವಾಹನದ ಮಾಲೀಕ 25 ಸಾವಿರ ರೂ. ದಂಡ ಪಾವತಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.
ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸುವರ್ಣ ಮಲಶೆಟ್ಟಿ ನೇತ್ರತ್ವದಲ್ಲಿ ನಗರದ ಐಡಿಯಲ್ ಶಾಲೆ ಹತ್ತಿರ ಇತ್ತೀಚೆಗೆ ವಾಹನ ತಪಾಸಣೆ ಮಾಡುವ ವೇಳೆ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು ಪತ್ತೆಯಾಗಿತ್ತು.
ಈ ಸಂಬಂಧ ದ್ವಿಚಕ್ರ ವಾಹನವನ್ನು ಠಾಣೆಗೆ ತೆಗೆದುಕೊಂಡು ಹೋಗಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಲಾವಣೆಗೆ ಅವಕಾಶ ನೀಡಿದ ವಾಹನದ ಮಾಲೀಕ ಸಾಹೇರಾ ಬೇಗಂ ಮೀರಜ್ ಖಾನ್ ಎನ್ನುವರ ವಿರುದ್ಧ ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದರು.