• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಪಂಜರದ ಗಿಣಿ’ಗೆ ಸ್ವಾತಂತ್ರ್ಯ ನೀಡಿ- ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಲಾಯ್ಡ್ by ಲಾಯ್ಡ್
August 18, 2021
in ದೇಶ
0
‘ಪಂಜರದ ಗಿಣಿ’ಗೆ ಸ್ವಾತಂತ್ರ್ಯ ನೀಡಿ- ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ
Share on WhatsAppShare on FacebookShare on Telegram

CBI ಕೇವಲ ಸಂಸತ್ತಿಗೆ ಉತ್ತರದಾಯಿತ್ವ ಹೊಂದಿರುವ ಸ್ವಾಯತ್ತ (autonomous) ಸಂಸ್ಥೆಯಾಗಿರಬೇಕೆಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಮಹತ್ತರವಾದ ಆದೇಶ ನೀಡಿದೆ. ಕೇಂದ್ರ ಸರ್ಕಾರದ ಆಧೀನದಲ್ಲಿರುವ ಸಿಬಿಐ ಅನ್ನು ಸ್ವತಂತ್ರ ಸಂಸ್ಥೆಯಾಗಿ ಪರಿವರ್ತಿಸುವ ಕುರಿತು ಪ್ರಮುಖವಾದ ಹೆಜ್ಜೆ ಇಟ್ಟಿರುವ ಮದ್ರಾಸ್ ಹೈಕೋರ್ಟ್, ಈ ಆದೇಶ ‘ಪಂಜರದ ಗಿಣಿ’ಯನ್ನು ಸ್ವತಂತ್ರವಾಗಿಸುವ ಯತ್ನ ಎಂದು ಹೇಳಿದೆ.

ADVERTISEMENT

ಈಗಾಗಲೇ ಭಾರತದಲ್ಲಿ ಅಸ್ಥಿತ್ವದಲ್ಲಿ ಇರುವ ಎನ್.ಡಿ.ಎ. ಮೈತ್ರಿಕೂಟದಲ್ಲಿ ಇಲ್ಲದೇ ಇರುವಂತಹ ಪಕ್ಷಗಳು, ಸಿಬಿಐ ಅನ್ನು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿಯವರು ಆಡಳಿತಕ್ಕೆ ಬಂದ ಬಳಿಕ ತಮ್ಮ ರಾಜಕೀಯ ಕುತಂತ್ರಕ್ಕಾಗಿ ಸರ್ಕಾರಿ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಕುರಿತು ಆರೋಪಗಳು ಕೇಳಿ ಬಂದಿದ್ದವು. ಸಿಬಿಐ, ಇಡಿ, ತೆರಿಗೆ ಇಲಾಖೆ ಹೀಗೆ ಹಲವು ಇಲಾಖೆ/ಸಂಸ್ಥೆಗಳ ಹೆಸರಿನ ಮೇಲೆ ಕಳಂಕ ಎದ್ದಿತ್ತು. ಈ ಕಳಂಕವನ್ನು ತೊಡೆದುಹಾಕುವತ್ತ ಮದ್ರಾಸ್ ಹೈಕೋರ್ಟ್ ಇಟ್ಟಿರುವ ಹೆಜ್ಜೆ ನಿಜಕ್ಕೂ ಮಹತ್ವವಾದದ್ದು.

2013ರಲ್ಲಿ ಕಲ್ಲಿದ್ದಲು ಪ್ರದೇಶ ಹಂಚಿಕೆ ಪ್ರಕರಣದ ವಿಚಾರಣೆ ನಡೆಸುವಾಗ ಸುಪ್ರಿಂಕೋರ್ಟ್ ಸಿಬಿಐ ಅನ್ನು ‘ಪಂಜರದ ಗಿಣಿ’ ಎಂದು ಸಂಬೋಧಿಸಿತ್ತು. ಆ ಸಂದರ್ಭದಲ್ಲಿ ವಿರೋಧ ಪಕ್ಷ ಸ್ಥಾನದಲ್ಲಿದ್ದ ಬಿಜೆಪಿಯು, ಸಿಬಿಐ ಮೇಲೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತವನ್ನು ಟೀಕಿಸಿತ್ತು. ಇದಾಗಿ ಹಲವು ವರ್ಷಗಳ ಬಳಿಕವೂ ಸರ್ಕಾರದ ಕೈಗೊಂಬೆ ಎಂಬ ಸಿಬಿಐ ಪಟ್ಟ ಇನ್ನೂ ತೊಲಗಲಿಲ್ಲ. ಯಾವುದೇ ಸರ್ಕಾರ ಬಂದರೂ, ಆಯಾ ಸರ್ಕಾರದ ಆಧೀನದಲ್ಲಿಯೇ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಸಿಬಿಐಗೆ ಇದೆ.

ಮಮತಾ ಬ್ಯಾನರ್ಜಿ ಅವರಂತೂ ಸಿಬಿಐ ಅನ್ನು ಟೀಕಿಸುವಾಗ, ‘PM’s Conspiracy Bureau of Investigation’ (ಪ್ರಧಾನ ಮಂತ್ರಿಗಳ ಷಡ್ಯಂತ್ರ ತನಿಖೆ ಸಂಸ್ಥೆ) ಎಂದು ಹೇಳಿದ್ದರು. ಪ್ರತಿ ರಾಜ್ಯದಲ್ಲಿಯೂ ಚುನಾವಣಾ ಸಂದರ್ಭದಲ್ಲಿ ವಿರೋಧ ಪಕ್ಷಗಳ ನಾಯಕರ ಮೇಲೆ ಸಿಬಿಐ, ಇಡಿ ಹಾಗೂ ತೆರಿಗೆ ಇಲಾಖೆಯ ದಾಳಿ ಸಾಮಾನ್ಯವೆಂಬಂತೆ ಆಗಿಬಿಟ್ಟಿದೆ.

ಈ ಕಳಂಕವನ್ನು ತೆಗೆಯಲು, ಸಿಬಿಐಗೆ ಶಾಸನಬದ್ದ ಸ್ಥಾನಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. “ಶೀಘ್ರದಲ್ಲಿಯೇ ಸಿಬಿಐಗೆ ಶಾಸನಬದ್ದ ಸ್ಥಾನಮಾನ ನೀಡಿ, ಅದರ ಶಕ್ತಿ ಮತ್ತು ಕೆಲಸದ ಪರಿಧಿಯನ್ನು ವಿಸ್ತರಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಆಡಳಿತ ಹಸ್ತಕ್ಷೇಪವಿಲ್ಲದೇ, ಸಿಬಿಐ ಅನ್ನು ಸ್ವತಂತ್ರ ಸಂಸ್ಥೆಯಾಗಿ ಕೇಂದ್ರ ಸರ್ಕಾರ ಪರಿವರ್ತಿಸಬೇಕು,” ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

1941ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಪ್ರಧಾನ ಮಂತ್ರಿಗಳ ಕಾರ್ಯಾಲಯದಲ್ಲಿರುವ ಸಿಬ್ಬಂದಿ ಹಾಗೂ ತರಬೇತಿ (DoPT) ಇಲಾಖೆಯ ಆಧೀನದಲ್ಲಿದೆ. ಸಿಬಿಐ ನಿರ್ದೇಶಕರನ್ನು ಪ್ರಧಾನ ಮಂತ್ರಿ, ಸಿ ಜೆ ಐ ಹಾಗೂ ವಿಪಕ್ಷ ನಾಯಕರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಆಯ್ಕೆ ಮಾಡುತ್ತದೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯದಲ್ಲಿರುವ ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯ ಅಧೀನದಲ್ಲಿ ಸಿಬಿಐ ಕಾರ್ಯಾಚರಿಸುವುದನ್ನು ವಿರೋಧಿಸಿರುವ ಮದ್ರಾಸ್ ಹೈಕೋರ್ಟ್, ಸಿಬಿಐ ನಿರ್ದೇಶಕರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಅಧಿಕಾರವನ್ನು ನೀಡಬೇಕು. ಅವರು DoPT ಮುಖಾಂತರ ಸರ್ಕಾರವನ್ನು ಸಂಪರ್ಕಿಸದೇ, ನೇರವಾಗಿ ಮಂತ್ರಿ ಅಥವಾ ಪ್ರಧಾನ ಮಂತ್ರಿಗಳಿಗೆ ವರದಿ ಸಲ್ಲಿಸುವಂತಿರಬೇಕು, ಎಂದು ಜಸ್ಟೀಸ್ ಎನ್ ಕಿರುಬಾಕರಣ್ ಹಾಗೂ ಜಸ್ಟೀಸ್ ಬಿ ಪುಗಳೇಂಧಿ ಅವರಿಗೆ ದ್ವಸದಸ್ಯ ಪೀಠವು ಹೇಳಿದೆ.

ಇದರೊಂದಿಗೆ, ಸಿಬಿಐಗೆ ನೀಡಿರುವ ಸವಲತ್ತುಗಳನ್ನು ಇನ್ನಷ್ಟು ಅಭಿವೃದ್ದಿಪಡಿಸಬೇಕು. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿರುವ ಎಫ್ ಬಿ ಐ ಹಾಗೂ ಯುಕೆಯ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರಂತೆ ಭಾರತದ ಸಿಬಿಐ ಕೂಡಾ ಬೆಳೆಯಬೇಕು. ಬಜೆಟ್’ನಲ್ಲಿ ಇದಕ್ಕೆ ಪ್ರತ್ಯೇಕ ಅನುದಾನವನ್ನು ಮೀಸಲಿರಿಸಬೇಕು, ಎಂದು ಮದ್ರಾಸ್ ಹೈಕೊರ್ಟ್ ಹೇಳಿದೆ.

ದೇಶದಲ್ಲಿ ಸಿಬಿಐ ಮೇಲಿರುವ ವಿಶ್ವಾಸವನ್ನು ಜನರು ಕಳೆದುಕೊಳ್ಳುತ್ತಿರುವ ಜನರಲ್ಲಿ ಮತ್ತೆ ವಿಶ್ವಾಸವನ್ನು ಪುನರ್ ಸ್ಥಾಪಿಸುವಲ್ಲಿ ಮದ್ರಾಸ್ ಹೈಕೋರ್ಟ್ ನೀಡಿರುವ ನಿರ್ದೇಶನಗಳು ಮಹತ್ವ ಪಡೆದಿವೆ. ಈ ಹಿಂದೆ ಎನ್ ಡಿ ಎ ಭಾಗವಾಗಿ ಇದ್ದಂತಹ ಶೀವಸೇನೆಯು ಕೂಡಾ ಸಿಬಿಐ ವಿಶ್ವಾಸಾರ್ಹತೆ ಕುರಿತು ಪ್ರಶ್ನಿಸಿದ್ದು, ಬಿಜೆಪಿಯು ವಿಪಕ್ಷ ನಾಯಕರ ಬೆನ್ನ ಹಿಂದಿನಿಂದ ದಾಳಿ ನಡೆಸುವ ಸಲುವಾಗಿ ಸಿಬಿಐ ಅನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಶಿವಸೇನೆಯ ಸಂಸದರಾಗಿರುವ ಸಂಜಯ್ ರಾವತ್ ಅವರು ಕಳೆದ ಜುಲೈ ತಿಂಗಳಲ್ಲಿ ಸಿಬಿಐ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದರು.

“ನಿರಂತರವಾಗಿ ಸಿಬಿಐ ದಾಳಿ ನಡೆಸುವ ಕುರಿತು ಧಮ್ಕಿ ಹಾಕಲಾಗುತ್ತಿದೆ. ಈ ರೀತಿಯ ರಾಜಕಾರಣ ಒಳ್ಳೆಯದಲ್ಲ. ವಿಪಕ್ಷ ನಾಯಕರ ಬೆನ್ನ ಹಿಂದಿನಿಂದ ದಾಳಿ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ಸಿಬಿಐ, ಇಡಿಯನ್ನು ಬಳಸಿಕೊಳ್ಳುತ್ತಿದೆ,” ಎಂದು ಆರೋಪಿಸಿದ್ದರು.

ಇದೇ ವರ್ಷ ಮೇ ತಿಂಗಳಲ್ಲಿ ಸಿಬಿಐ ಅಧಿಕಾರಿಗಳು ಟಿಎಂಸಿ ನಾಯಕರನ್ನು ಬಂಧಿಸುವಾಗಲೂ ಇದೇ ರೀತಿಯ ಆರೋಪಗಳು ಕೇಳಿ ಬಂದಿದ್ದವು. ನಾರದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಟಿಎಂಸಿ ನಾಯಕರನ್ನು ಮಾತ್ರ ಗುರಿಯಾಗಿಸಲಾಗಿತ್ತು. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರ ಕುರಿತು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದು ಕೂಡಾ ಸಿಬಿಐ ವಿರುದ್ದ ಪಶ್ಚಿಮ ಬಂಗಾಳದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.

ಚುನಾವಣೆಯಲ್ಲಿ ಹೀನಾಯ ಸೋಲುಂಡದ್ದನ್ನು ಅರಗಿಸಿಕೊಳ್ಳಲಾಗಿದೆ, ಕಳ್ಳ ದಾರಿಯಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಟಿಎಂಸಿ ಕೇಂದ್ರ ಹಾಗೂ ಸಿಬಿಐ ವಿರುದ್ದ ಕಿಡಿಕಾರಿತ್ತು.

Tags: CBIMadras High Court
Previous Post

ಒಲಿಂಪಿಕ್ಸ್ ಕ್ರೀಡಾಪಟುಗಳೊಂದಿಗೆ ಖುಷಿಯ ಕ್ಷಣಗಳನ್ನು ಕಳೆದ ಪ್ರಧಾನಿ ಮೋದಿ

Next Post

ಸರ್ವೋಚ್ಚ ನ್ಯಾಯಮೂರ್ತಿಗಳ ನೇಮಕ: ʼಊಹಾತ್ಮಕʼ ವರದಿ ಪ್ರಕಟಿಸಿದ ಮಾಧ್ಯಮಗಳ ಕುರಿತು CJI ಅಸಮಾಧಾನ

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಸರ್ವೋಚ್ಚ ನ್ಯಾಯಮೂರ್ತಿಗಳ ನೇಮಕ: ʼಊಹಾತ್ಮಕʼ ವರದಿ ಪ್ರಕಟಿಸಿದ ಮಾಧ್ಯಮಗಳ ಕುರಿತು CJI ಅಸಮಾಧಾನ

ಸರ್ವೋಚ್ಚ ನ್ಯಾಯಮೂರ್ತಿಗಳ ನೇಮಕ: ʼಊಹಾತ್ಮಕʼ ವರದಿ ಪ್ರಕಟಿಸಿದ ಮಾಧ್ಯಮಗಳ ಕುರಿತು CJI ಅಸಮಾಧಾನ

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada