• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪ್ರತಿಷ್ಠಿತ ಬೆಳಗಾವಿ ಉಪ ಚುನಾವಣಾ ಕಣ ಚಿತ್ರಣ; ಕೆಲವೇ ಕ್ಷಣದಲ್ಲಿ ಸ್ಪಷ್ಟ!

by
March 30, 2021
in Uncategorized
0
ಪ್ರತಿಷ್ಠಿತ ಬೆಳಗಾವಿ ಉಪ ಚುನಾವಣಾ ಕಣ ಚಿತ್ರಣ; ಕೆಲವೇ ಕ್ಷಣದಲ್ಲಿ ಸ್ಪಷ್ಟ!
Share on WhatsAppShare on FacebookShare on Telegram

ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಗಳಿಗೆ ಇಂದು ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ. ಆದರೂ ಆಡಳಿತ ಮತ್ತು ಪ್ರತಿಪಕ್ಷಗಳ ಪಾಳೆಯದಲ್ಲಿ ಇನ್ನೂ ಅಭ್ಯರ್ಥಿಗಳು ಪಟ್ಟಿ ಅಂತಿಮದ ಕಸರತ್ತು ಮುಗಿದಿಲ್ಲ.

ADVERTISEMENT

ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಏಳು ದಿನಗಳು ಮಾತ್ರ ಉಳಿದಿದ್ದರೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ವಿಷಯದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಗೌಪ್ಯತೆ ಕಾಯ್ದುಕೊಂಡಿವೆ. ಸದ್ಯ ಅಧಿಕೃತ ಅಧಿಸೂಚನೆ ಹೊರಬೀಳ್ಳುತ್ತಲೇ ಎರಡೂ ಪಕ್ಷಗಳು ತಮ್ಮು ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆಗಳಿದ್ದರೂ, ವಾಸ್ತವವಾಗಿ ಎರಡೂ ಪಕ್ಷದಲ್ಲಿ ಅಭ್ಯರ್ಥಿ ಘೋಷಣೆಯ ವಿಷಯದಲ್ಲಿ ಸಾಕಷ್ಟು ಗೊಂದಲಗಳು ತಲೆದೋರಿವೆ. ಹಾಗಾಗಿ, ಅವರು ಅಭ್ಯರ್ಥಿ ಘೋಷಿಸಲಿ ಎಂದು ಇವರು, ಇವರು ಘೋಷಿಸಲಿ ಎಂದು ಅವರು ಕಾದಿರುವಂತಿದೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹಾಗೆ ನೋಡಿದರೆ ಬೆಳಗಾವಿ ಉಪ ಚುನಾವಣೆ ಘೋಷಣೆಗೆ ಮುನ್ನ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಸಿಡಿ ಹೊರಬೀಳುವ ಮುನ್ನ ಆಡಳಿತ ಬಿಜೆಪಿಯಲ್ಲಿ ಬಹುತೇಕ ಎಲ್ಲವೂ ನಿಚ್ಛಳವಾಗಿತ್ತು. ಸಣ್ಣ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನೇ ಕಣಕ್ಕಿಳಿಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದರು. ಅದೇ ಉಮೇದಿನಲ್ಲಿಯೇ ರಮೇಶ್, ಕಳೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತರು ಅತಿ ಹೆಚ್ಚು ಸಂಖ್ಯೆಯಲ್ಲಿ ಗೆಲುವು ಪಡೆಯುವಂತೆ ಸಾಕಷ್ಟು ಕೆಲಸ ಮಾಡಿದ್ದರು. ಜೊತೆಗೆ ಬಿಜೆಪಿ ಕೂಡ ಬೆಳಗಾವಿ ಉಪ ಚುನಾವಣೆಯನ್ನೇ ಗುರಿಯಾಗಿಟ್ಟುಕೊಂಡು ಅಲ್ಲಿನ ಕಣದಲ್ಲಿ ನಿರ್ಣಾಯಕರಾಗಿರುವ ಮರಾಠ ಸಮುದಾಯವನ್ನು ಓಲೈಸುವ ನಿಟ್ಟಿನಲ್ಲಿ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದಕ್ಕೆ 500 ಕೋಟಿ ರೂ ಅನುದಾನವನ್ನೂ ಘೋಷಿಸಿತ್ತು. ಹಾಗೇ ಕ್ಷೇತ್ರದ ಮತ್ತೊಂದು ಪ್ರಬಲ ಸಮುದಾಯ ಲಿಂಗಾಯತರಿಗೂ ಪ್ರತ್ಯೇಕ ಮಂಡಳಿ ಸ್ಥಾಪಿಸಿ ಅವರಿಗೂ 500 ಕೋಟಿ ಹಣ ಘೋಷಿಸಿತ್ತು. ಹಾಗಾಗಿ, ರಮೇಶ್ ಜಾರಕಿಹೊಳಿಯ ಪ್ರಭಾವ ಮತ್ತು ಬಿಜೆಪಿಯ ಭರಪೂರ ಕೊಡುಗೆಗಳ ಮೇಲೆ ಚುನಾವಣೆ ನಡೆಸುವ ಲೆಕ್ಕಾಚಾರ ಬಿಜೆಪಿಯದ್ದಾಗಿತ್ತು.

ಆದರೆ, ಸಿಡಿ ಪ್ರಕರಣ ಸಿಡಿಯುತ್ತಲೇ ಎಲ್ಲವೂ ಬದಲಾಗಿದೆ. ಲೆಕ್ಕಾಚಾರಗಳು ಉಲ್ಟಾ ಆಗಿವೆ. ಹಾಗಾಗಿ, ರಮೇಶ್ ಜಾರಕಿಹೊಳಿ ಕಣದಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಹಲವು ನಾಯಕರು ನಾಮುಂದೆ, ತಾಮುಂದೆ ಎಂದು ಪೈಪೋಟಿಯ ಮೇಲೆ ಪಕ್ಷದ ಟಿಕೆಟ್ ಗೆ ಲಾಬಿ ನಡೆಸಿದ್ದಾರೆ. ಆ ಪೈಕಿ ಅಕಾಲಿಕ ನಿಧನಹೊಂದಿದ ಮಾಜಿ ಸಂಸದ ಸುರೇಶ್ ಅಂಗಡಿ ಅವರ ಸೊಸೆ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಮಗಳು ಶ್ರದ್ಧಾ ಶೆಟ್ಟರ್, ಸ್ವತಃ ಜಗದೀಶ್ ಶೆಟ್ಟರ್, ಕೆ ಎಲ್ ಇ ಸಂಸ್ಥೆಯ ಡಾ ಪ್ರಭಾಕರ ಕೋರೆ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಮತ್ತಿತರ ಹೆಸರುಗಳು ಚಾಲ್ತಿಯಲ್ಲಿವೆ. ಆದರೆ, ಅಂಗಡಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರಕ್ಕೆ ಅವರ ಕುಟುಂಬದವರಿಗೇ ಅವಕಾಶ ನೀಡಿದಲ್ಲಿ ಅನುಕಂಪ ಮತ್ತು ಕುಟುಂಬದ ಪಕ್ಷನಿಷ್ಠೆಗಳು ಒಟ್ಟಿಗೇ ಕೆಲಸ ಮಾಡುವುದರಿಂದ ಚುನಾವಣೆಯಲ್ಲಿ ಗೆಲುವು ಸಲೀಸಲಾಗಲಿದೆ ಎಂಬ ಅಭಿಪ್ರಾಯ ಬಿಜೆಪಿಯ ವರಿಷ್ಠರದ್ದು. ಹಾಗಾಗಿ ಶ್ರದ್ಧಾ ಹೆಸರನ್ನೇ ಅಂತಿಮಗೊಳಿಸಿ ಕೇಂದ್ರಕ್ಕೆ ಕಳಿಸಲಾಗಿದೆ ಎನ್ನಲಾಗಿದೆ.

ಈ ನಡುವೆ, ಕಾಂಗ್ರೆಸ್ ಪಾಳೆಯದಲ್ಲಿ ಕೂಡ ಆರಂಭದಲ್ಲಿ ಸತೀಶ್ ಜಾರಕಿಹೊಳಿ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ಕಣಕ್ಕಿಳಿದರೆ, ಕಾಂಗ್ರೆಸ್ ನಿಂದ ಅವರ ಸಹೋದರ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ. ಹಾಗಾಗಿ ಈ ಬಾರಿಯ ಉಪಚುನಾವಣೆ ಸಹೋದರರ ಸವಾಲ್ ಆಗಿ ಬದಲಾಗಲಿದೆ ಎಂದೇ ಊಹಿಸಲಾಗಿತ್ತು. ಆದರೆ, ಸಿಡಿ ಪ್ರಕರಣ ತಂದ ತಿರುವು ಎಲ್ಲವನ್ನೂ ಬದಲಾಯಿಸಿದೆ. ಆದರೂ, ಕಾಂಗ್ರೆಸ್ ನಿಂದ ಸತೀಶ್ ಅವರೇ ಕಣಕ್ಕಿಳಿಯುವುದು ಬಹುತೇಕ ಖಚಿತ. ಪಕ್ಷದ ವರಿಷ್ಠರ ಸಮಿತಿ ಕೂಡ ಸತೀಶ್ ಒಬ್ಬರ ಹೆಸರನ್ನೇ ಸರ್ವಾನುಮತದಿಂದ ಅಂತಿಮಗೊಳಿಸಿ ಹೈಕಮಾಂಡ್ ಅನುಮೋದನೆಗೆ ಕಳಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಆದರೆ, ಈ ನಡುವೆ, ರಮೇಶ್ ಜಾರಕಿಹೊಳಿ ಕಣದಿಂದ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳೆಯದಲ್ಲೂ ಕಣಕ್ಕಿಳಿಯಲು ಪೈಪೋಟಿ ಆರಂಭವಾಗಿದೆ. ಪ್ರಮುಖವಾಗಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಪ್ರಮುಖವಾಗಿ ಟಿಕೆಟ್ ಗಾಗಿ ಕೋರಿದ್ದಾರೆ. ಆದರೆ, ಪಕ್ಷದ ರಾಜ್ಯ ಪ್ರಮುಖರು ಸತೀಶ್ ಪರ ಒಮ್ಮತದ ನಿರ್ಧಾರಕ್ಕೆ ಬಂದಿರುವುದು ತಿಳಿಯುತ್ತಲೇ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ.

ಏಪ್ರಿಲ್ 17ರಂದು ಮತದಾನ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಆ ಪೈಕಿ ಸದ್ಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಎರಡು ಕಡೆ ಕಾಂಗ್ರೆಸ್ ಶಾಸಕರಿದ್ದಾರೆ. ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಗೋಕಾಕ, ಅರಭಾವಿ, ರಾಮದುರ್ಗ, ಸವದತ್ತಿ ಎಲ್ಲಮ್ಮ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದರೆ, ಬೆಳಗಾವಿ ಗ್ರಾಮಾಂತರ ಮತ್ತು ಬೈಲಹೊಂಗಲ ಕ್ಷೇತ್ರಗಳು ಕಾಂಗ್ರೆಸ್ ಶಾಸಕರ ಅಧಿಕಾರದಲ್ಲಿವೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆಹಾರ ಸಚಿವ ಉಮೇಶ್ ಕತ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೋಲ್ಲೆ, ಜವಳಿ ಸಚಿವ ಶ್ರೀಮಂತ ಪಾಟೀಲ್ ಸೇರಿದಂತೆ ಹಾಲಿ ನಾಲ್ವರು ಸಚಿವರು ಈ ಜಿಲ್ಲೆಯವರು. ಜೊತೆಗೆ ಸಚಿವ ಸ್ಥಾನ ಕಳೆದುಕೊಂಡರೂ, ಜಿಲ್ಲೆಯ ಮೇಲೆ ಸಾಕಷ್ಟು ರಾಜಕೀಯ ಹಿಡಿತ ಹೊಂದಿರುವ ರಮೇಶ್ ಜಾರಕಿಹೊಳಿ ಕೂಡ ಸ್ವತಃ ಕಣಕ್ಕಿಳಿಯದಿದ್ದರೂ, ಇಡೀ ಚುನಾವಣೆಯ ಹೊಣೆ ಅವರೇ ಹೊತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಹಾಗಾಗಿ, ಸದ್ಯದ ರಾಜಕೀಯ ಬಲಾಬಲದ ವಿಷಯದಲ್ಲಿ ಬಿಜೆಪಿ, ಪ್ರತಿ ಪಕ್ಷ ಕಾಂಗ್ರೆಸ್ಸಿಗಿಂತ ಸಾಕಷ್ಟು ಮುಂದಿದೆ ಎನಿಸುತ್ತದೆ. ಆದರೆ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ್ ಜಾರಕಿಹೊಳಿ ಸ್ವತಃ ಕಣಕ್ಕಿಳಿದರೆ, ಅವರೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಂಥ ಪ್ರಭಾವಿ ನಾಯಕಿಯೂ ಚುನಾವಣಾ ಹೋರಾಟದ ನಾಯಕತ್ವ ವಹಿಸುವುದರಿಂದ ಉಪ ಚುನಾವಣಾ ಕಣ ಭರ್ಜರಿ ಪೈಪೋಟಿ ಕಾಣಲಿದೆ. ಅದರಲ್ಲೂ ಮುಖ್ಯವಾಗಿ ಬೆಳಗಾವಿಯಲ್ಲಿ ಅಧಿಕಾರ ಹಿಡಿಯುವುದು ಉಭಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಸಂಗತಿಯಾಗಿರುವುದರಿಂದ ಸಾಕಷ್ಟು ರಂಗೇರಲಿದೆ. ಅಧಿಕೃತ ಅಧಿಸೂಚನೆ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಉಭಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಹೆಸರೂ ಘೋಷಣೆಯಾಗುವುದರಿಂದ, ಕಣದ ಚಿತ್ರಣ ಸ್ಪಷ್ಟವಾಗಲು ಹೆಚ್ಚು ಸಮಯ ಕಾಯಬೇಕಿಲ್ಲ.

Previous Post

ಯತಿಂದ್ರ ಸಿದ್ದರಾಮಯ್ಯ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ಯಡಿಯೂರಪ್ಪ ಸ್ಪಷ್ಟನೆ

Next Post

ಅಸ್ಸಾಂ ಚುನಾವಣೆ: CAA, NRCಯನ್ನು ಚುನಾವಣಾ ದಾಳವಾಗಿಸಿದ ಬಿಜೆಪಿ ಮತ್ತು ಕಾಂಗ್ರೆಸ್‌

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಅಸ್ಸಾಂ ಚುನಾವಣೆ: CAA, NRCಯನ್ನು ಚುನಾವಣಾ ದಾಳವಾಗಿಸಿದ ಬಿಜೆಪಿ ಮತ್ತು ಕಾಂಗ್ರೆಸ್‌

ಅಸ್ಸಾಂ ಚುನಾವಣೆ: CAA, NRCಯನ್ನು ಚುನಾವಣಾ ದಾಳವಾಗಿಸಿದ ಬಿಜೆಪಿ ಮತ್ತು ಕಾಂಗ್ರೆಸ್‌

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada