• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ವಿಘ್ನ ನಿವಾರಣಾ ಶಕ್ತಿ ಗಣಪತಿ ದೇವರಿಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ : ಹಿಂದು ಸಂಪ್ರದಾಯದಲ್ಲಿ ಗಣಪತಿ ಪೂಜೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.ವಿಘ್ನ ನಿವಾರಣೆಯ ಶಕ್ತಿ ಗಣಪತಿ ದೇವರಿಗೆ ಇದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ADVERTISEMENT

ಬೀದರ್ ನಗರದ ಗಾಂಧಿ ಗಂಜ್ ಆವರಣದಲ್ಲಿ ಶ್ರೀ ವರ ಸಿದ್ದಿ ವಿನಾಯಕ ಗಣೇಶ ಮಂಡಳಿಯ ವತಿಯಿಂದ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿ, ನಗರದ ಶ್ರೀಸಾಯಿ ಶಿಕ್ಷಣ ಸಂಸ್ಥೆಯ ಸಾಯಿ ಸ್ಕೂಲ್ ಆವರಣದಲ್ಲಿ ಪ್ರತಿಷ್ಠಾಪಿಸಿದ ಬೀದರ್ ಕಾ ರಾಜಾ ಗಣೇಶ ಮೂರ್ತಿಗಳ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಮಂಗಳವಾರ ಅವರು ಮಾತನಾಡಿದರು.ಮುಂಬೈನಲ್ಲಿ ಪ್ರತಿಷ್ಠಾಪನೆ ಮಾಡಿದಂತೆ ನಮ್ಮ ಬೀದರ್ ನಲ್ಲಿ ಕೂಡ ಅನೇಕ ವರ್ಷಗಳಿಂದ ದೊಡ್ಡ ಪ್ರಮಾಣದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅರ್ಥಪೂರ್ಣವಾಗಿ ಪೂಜೆ ಕಾರ್ಯಕ್ರಮಗಳನ್ನು ಮಾಡಿ ವಿಜೃಂಭಣೆಯೊಂದಿಗೆ ವಿಸರ್ಜನೆ ಮಾಡಲಾಗುತ್ತದೆ.ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆ ಕಾರ್ಯಕ್ರಮದವರೆಗೂ ಪ್ರಸಾದ ವ್ಯವಸ್ಥೆ ಕೂಡ ಇರುತ್ತದೆ.

ಈ ಬಾರಿ ನಾನು ಬೀದರ್ ನಗರದ ಗಾಂಧಿ ಗಂಜ್ ಆವರಣದಲ್ಲಿ, ಶ್ರೀ ಸಾಯಿ ಶಿಕ್ಷಣ ಸಂಸ್ಥೆಯ ಸಾಯಿ ಸ್ಕೂಲ್ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಗಣಪತಿ ದೇವರ ದರ್ಶನ ಪಡೆದಿದ್ದೇನೆ. ದೊಡ್ಡಮಟ್ಟದ ಗಣೇಶ ಮೂರ್ತಿಗಳನ್ನು ಇಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ.ಸಾಯಿ ಸ್ಕೂಲ್ ಆವರಣದಲ್ಲಿ ಮತ್ತು ಗಾಂಧಿ ಗಂಜ್ ನಲ್ಲಿ ಬಹುತೇಕ ಕೇದಾರನಾಥ ಮಂದಿರದ ರೀತಿಯಲ್ಲಿಯೇ ಮಂದಿರ ನಿರ್ಮಾಣ ಮಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ವಿಶೇಷವಾಗಿದೆ.ಹಿಮಾಲಯವೇ ಬೀದರ್ ಗೆ ಬಂದಿದೆ ಏನೋ ಅನ್ನೋ ರೀತಿಯ ಸುಂದರವಾದ ವಾತಾವರಣ ಬೀದರ್ ನಲ್ಲಿ ನಿರ್ಮಾಣವಾಗಿದೆ.

ನಾನು ಕೂಡ ಗಣಪತಿ ದೇವರಿಗೆ ಪೂಜೆ ಸಲ್ಲಿಸಿ, ನಾಡಿನ ಮತ್ತು ಬೀದರ್ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ.ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ, ಅಭಿವೃದ್ಧಿ ಕರುಣಿಸುವಂತೆ ಗಣೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಸನಾತನ ಪರಂಪರೆಯ ಉಳಿವಿಗಾಗಿ ಜನರು ಶ್ರಮಿಸುತ್ತಿದ್ದಾರೆ. ಅವರಿಗೆ ದೇವರು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಶುಭ ಕೋರಿದರು.

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರೊಂದಿಗೆ ಗಾಂಧಿ ಗಂಜ್ ಆವರಣದ ಶ್ರೀ ವರಸಿದ್ದಿವಿನಾಯಕ ಗಣೇಶ ಮಂಡಳಿಯ ಗಣಪತಿ ಮೂರ್ತಿಯ ಬಳಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲ್ಪೂರ್, ಪ್ರಮುಖರಾದ ಬಸವರಾಜ ಪಾಟೀಲ್ ಹಾರೋಗೇರಿ, ಶಾಮರಾವ್ ಭೀಮರಾವ್, ರೋಲ್ಯಾಕ್ಸ್ ನಾರಾಯಣ್, ಅಶೋಕ್ ರೇಜಂತಲ್, ಸಾಯಿ ಶಿಕ್ಷಣ ಸಂಸ್ಥೆಯ ಆವರಣದ ಗಣಪತಿ ಮೂರ್ತಿಯ ಬಳಿ ರಾಜಶೇಖರ್ ಜವಳೆ, ಸಿಂದೋಲ್ ನಾಗು, ಅಭಿಷೇಕ ಪಾಟೀಲ್, ನಾಗು ಜಾಬ್ ಶೆಟ್ಟಿ, ವೀರೇಶ್, ಅಜಯ್, ಭೀರಪ್ಪ, ಅಮಿತ್ ಪುಲೇಕರ್, ಸಾಗರ್ ಪಟಕ್ ಸೇರಿದಂತೆ ಅನೇಕರಿದ್ದರು. ಇದೇ ಸಂದರ್ಭದಲ್ಲಿ ಬಂಡೆಪ್ಪ ಖಾಶೆಂಪುರ್ ರವರು, ಜನರಿಗೆ ಪ್ರಸಾದ ವಿತರಣೆ ಮಾಡಿ, ಪ್ರಸಾದ ಸ್ವೀಕರಿಸಿದರು.

Tags: a former MinisterBandeppa KhashempurGanapati PujaJDS party
Previous Post

ಹಿಂದೂ ಮಹಿಳೆಗೆ ಮುಸ್ಲಿಂ ವ್ಯಕ್ತಿಯ ರಕ್ತ ನೀಡಲು ನಿರಾಕರಿಸಿದ ವೈದ್ಯ!:ವಿಡಿಯೋ ವೈರಲ್

Next Post

ಸರ್ಕಾರಕ್ಕೆ ₹20 ಕೋಟಿ ಪ್ರಸ್ತಾವ: ಶಾಸಕ ಬೆಲ್ದಾಳೆ,

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಸರ್ಕಾರಕ್ಕೆ ₹20 ಕೋಟಿ ಪ್ರಸ್ತಾವ: ಶಾಸಕ ಬೆಲ್ದಾಳೆ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada