ಕಳೆದ ಕೆಲ ವರ್ಷಗಳಿಂದ ಕಬ್ಬು ಬೆಳೆಗಾರರ ಬಹು ದಿನದ ಬಯಕೆಯನ್ನ ರಾಜ್ಯ ಸರ್ಕಾರ ಈಡೇರಿಸಲು ಅಸ್ತು ಎಂದಿದೆ.
ಸೋಮವಾರ ವಿಕಾಸಸೌಧದಲ್ಲಿ ಸಕ್ಕರೆ ಸಚಿವ ಶಂಕರಗೌಡ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರವನ್ನ ಕೈಗೊಳ್ಳಲಾಗಿದ್ದು ಸಭೆಯ ಪ್ರಮುಖ ಅಂಶಗಳು ಕೆಳಗಿನಂತಿವೆ
೧) ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಗಿಫ್ಟ್
೨) ಮೊದಲ ಹಂತದಲ್ಲಿ ಕಬ್ಬಿನ ಉಪ ಉತ್ಪನ್ನ ಎಥೆನಾಲ್ ಮೇಲಿನ ಲಾಭ ನೀಡಲು ಮುಂದಾದ ರಾಜ್ಯ ಸರ್ಕಾರ.

೩) FRP ದರದ ಪಾವತಿ ಬಳಿಕ ಹೆಚ್ಚುವರಿಯಾಗಿ ಪ್ರತಿ ಟನ್ ಗೆ 50 ರೂಪಾಯಿಯಂತೆ ಕಬ್ಬು ಬೆಳೆಗಾರರಿಗೆ ಒಟ್ಟು 204.47 ಕೋಟಿ ರೂ. ಬಂಪರ್ ಕೊಡುಗೆ ನೀಡಿದೆ.
೪) ವಿಕಾಸಸೌಧದಲ್ಲಿ ಸೋಮವಾರ ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯ ತೀರ್ಮಾನದ ಬಳಿಕ ಸಕ್ಕರೆ ಸಚಿವ ಶ್ರೀ ಶಂಕರ ಪಾಟೀಲ ಮುನೇನಕೊಪ್ಪ ಘೋಷಣೆ.
೫) ರಾಜ್ಯ ಸರ್ಕಾರದ ತೀರ್ಮಾನವನ್ನು ಇಂದೇ ಆದೇಶ ಹೊರಡಿಸಲು ಕಬ್ಬು ಆಯುಕ್ತರಿಗೆ ಸೂಚನೆ.






