• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಎಂಎಸ್ ಟ್ರಸ್ಟ್’ನಲ್ಲಿ ಗೋಲ್ ಮಾಲ್: ನ್ಯಾಯಾಂತ ತನಿಖೆಗೆ ಆಗ್ರಹಿಸಿ ಪ್ರಧಾನಿಗೆ ಹೆಚ್’ಡಿಕೆ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
February 23, 2023
in Top Story, ಇದೀಗ
0
ಬಿಎಂಎಸ್ ಟ್ರಸ್ಟ್’ನಲ್ಲಿ ಗೋಲ್ ಮಾಲ್: ನ್ಯಾಯಾಂತ ತನಿಖೆಗೆ ಆಗ್ರಹಿಸಿ ಪ್ರಧಾನಿಗೆ ಹೆಚ್’ಡಿಕೆ ಪತ್ರ
Share on WhatsAppShare on FacebookShare on Telegram

ಬೆಂಗಳೂರು: ಬಿಎಂಎಸ್ ಟ್ರಸ್ಟ್’ನಲ್ಲಿ ನಡೆದಿರುವ ಗೋಲ್ ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಈ ಸಂಬಂಧ ಪ್ರಧಾನಿ ಮೋದಿಯವರಿಗೆ ಸುಧೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ವಿನಂತಿಸಿರುವುದಾಗಿ ಜಾತ್ಯಾತೀತ ಜನತಾ ದಳ ಪಕ್ಷ ತಿಳಿಸಿದೆ.

ADVERTISEMENT

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಾತ್ಯಾತೀತ ಜನತಾ ದಳ ಪಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿಗೆ ಬರೆದಿರುವ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

BMS ಟ್ರಸ್ಟ್ ನಲ್ಲಿ ನಡೆದಿರುವ ಗೋಲ್ ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ @hd_kumaraswamy ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಈ ಸಂಬಂಧ ಪ್ರಧಾನಿ @narendramodi ಯವರಿಗೆ ಸುಧೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ವಿನಂತಿಸಿದ್ದಾರೆ.
1/6 pic.twitter.com/eQPe4p8lHn

— Janata Dal Secular (@JanataDal_S) February 23, 2023

1957ರಲ್ಲಿ ರಚನೆಯಾಗಿ ನೋಂದಣಿಯಾದ BMS ಟ್ರಸ್ಟ್‌’ನ ಮೂಲ ಡೀಡನ್ನು ಬದಲಾಯಿಸುವ ತಿದ್ದುಪಡಿಗೆ ಅನುಮೋದನೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಸಮರ್ಪಕ ಉತ್ತರವನ್ನೇ ಈವರೆಗೂ ನೀಡಿಲ್ಲ. 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಈ ತಿದ್ದುಪಡಿಯನ್ನು ತಿರಸ್ಕರಿಸಲಾಗಿತ್ತು ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

ದಾನಿ ಟ್ರಸ್ಟ್, ಆಜೀವ ಟ್ರಸ್ಟ್ ನೇಮಕಾತಿ ಬಗ್ಗೆ BMS ಟ್ರಸ್ಟ್ ನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳನ್ನು ಅಕ್ರಮ ಎಂದಿತ್ತು ಕುಮಾರಸ್ವಾಮಿ ನೇತೃತ್ವದ ಸರ್ಕಾರ. ಅಕ್ರಮ ನಿರ್ಧಾರಗಳನ್ನು ಸಕ್ರಮಗೊಳಿಸಿದ್ದು ಯಾರ ಹಿತಾಸಕ್ತಿ ಕಾಪಾಡಲು, ಅಶ್ವಥ್ ನಾರಾಯಣ್ ಅವರೆ? ಪ್ರಧಾನಿ ಮೋದಿಯವರೆ, ಭ್ರಷ್ಟಾಚಾರ ನಿರ್ಮೂಲನೆ ಎಂದರೆ ಇದೆಯೆ? ಎಂದು ಪ್ರಶ್ನಿಸಿದೆ.

‌ಶಿಕ್ಷಣ ಸಂಸ್ಥೆಯ ಟ್ರಸ್ಟ್‌ ನಲ್ಲಿ ಸರ್ಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿಗಳಾದ ಡಾ. ಮಂಜುಳಾ, ಮದನ್ ಗೋಪಾಲ್ ಅವರು BMS ಟ್ರಸ್ಟ್ ನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ನಿರ್ಧಾರಗಳ ಬಗ್ಗೆ ಸರ್ಕಾರಕ್ಕೆ ಬರೆದ ಪತ್ರಗಳು ಕಸದ ಬುಟ್ಟಿ ಕಂಡಿದ್ದು ಏಕೆ? ಪ್ರಧಾನಿಗೆ ಬರೆದ ಪತ್ರದಲ್ಲಿ ಇಂಚಿಂಚೂ ದಾಖಲೆಗಳನ್ನು ವಿವರಿಸಲಾಗಿದೆ.

ಸರ್ಕಾರಿ ಸ್ವತ್ತಾದ BMS ಟ್ರಸ್ಟ್ ಅನ್ನು ಹೀಗೆ ಖಾಸಗಿ ವ್ಯಕ್ತಿಗಳಿಗೆ ಧಾರೆ ಎರೆದು ಕೊಡುತ್ತಿರುವುದು ಏಕೆ? ಸಾರ್ವಜನಿಕರಿಗೆ ಸೇರಬೇಕಿದ್ದ ಶಿಕ್ಷಣ ಸಂಸ್ಥೆ, ಮತ್ತದರ ಸಾವಿರಾರು ಕೋಟಿ ಆಸ್ತಿಯನ್ನು ಲಪಟಾಯಿಸುವ ಉದ್ದೇಶವಲ್ಲದೆ, ಮತ್ತೇನು? ಸರ್ಕಾರದ ಜತೆ ಹಲವರು ಕೊಟ್ಟ ಕಾಣಿಕೆಯಿಂದ ಬೆಳೆದ ಸಂಸ್ಥೆಯನ್ನು ಖಾಸಗಿ ಟ್ರಸ್ಟ್ ಆಗಿ ಬದಲಿಸಿದ್ದು ಏಕೆ?

ಟ್ರಸ್ಟ್ ಗೆ ದಯಾನಂದ ಪೈ ಅವರನ್ನು ಆಜೀವ ಸದಸ್ಯರಾಗಿ ಹೇಗೆ ಕೂರಿಸಿದ್ರಿ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ನ್ಯಾಯಾಂಗ ತನಿಖೆಯಾಗಲೇಬೇಕು. ಖಾಸಗಿ ರಿಯಲ್ ಎಸ್ಟೇಟ್ ಕುಳಗಳ ಪಟ್ಟಭದ್ರ ಹಿತಾಸಕ್ತಿಗೆ ನೆರವಾಗಲು ಈ ಷಡ್ಯಂತ್ರ ನಡೆದಿದೆ. ಇದಕ್ಕೆ ಸಚಿವ ಅಶ್ವಥ್ ನಾರಾಯಣ್ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸಹಕಾರ ನೀಡಿದ್ದು ನಾಚಿಕೆಗೇಡಿನ ವಿಷಯ ಎಂದು ಟ್ವೀಟ್ ನಲ್ಲಿ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

Tags: ashwath narayanBMS trustH D KumaraswamyJDS KarnatakaPM Narendra Modi
Previous Post

ಕೋವಿಡ್‌ ಭಯಕ್ಕೆ ಮೂರು ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿ ಕಳೆದ ತಾಯಿ.!

Next Post

ಪ್ರಧಾನಿ ಅವರಿಂದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ನೇರವಾಗಿ ವರ್ಗಾವಣೆ: ಶೋಭಾ ಕರಂದ್ಲಾಜೆ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಪ್ರಧಾನಿ ಅವರಿಂದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ನೇರವಾಗಿ ವರ್ಗಾವಣೆ: ಶೋಭಾ ಕರಂದ್ಲಾಜೆ

ಪ್ರಧಾನಿ ಅವರಿಂದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ನೇರವಾಗಿ ವರ್ಗಾವಣೆ: ಶೋಭಾ ಕರಂದ್ಲಾಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada