• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ

ಪ್ರತಿಧ್ವನಿ by ಪ್ರತಿಧ್ವನಿ
December 31, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ
Share on WhatsAppShare on FacebookShare on Telegram

ADVERTISEMENT

ಹೊಸ ವರ್ಷಕ್ಕೆ ಸಿಹಿಸುದ್ದಿ; ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ

ಪ್ರಧಾನಿ ಕಾರ್ಯಾಲಯದ ಜತೆ ಕೇಂದ್ರದ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ

ಹೊಸ ವರ್ಷದ ಆರಂಭದಲ್ಲಿಯೇ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಯೋಜನೆ

ವಿಕಸಿತ ಭಾರತ 2047; ಪ್ರಧಾನಿಗಳ ಗುರಿ ಮುಟ್ಟಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕಾಯಕಲ್ಪ ಎಂದ ಕೇಂದ್ರ ಸಚಿವರು

ನವದೆಹಲಿ: ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉಕ್ಕು ನಿಗಮ (RINL) ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಹೊಸ ವರ್ಷದಲ್ಲಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅವಿರತ ಪ್ರಯತ್ನ ಫಲಕಾರಿಯಾಗಿದೆ.

ಹೊಸ ವರ್ಷದ ಆರಂಭದಲ್ಲಿಯೇ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಯೋಜನೆ ಘೋಷಣೆ ಆಗುವ ಸಾಧ್ಯತೆ ಇದೆ.

2030ಕ್ಕೆ ದೇಶದ ಉಕ್ಕು ಉತ್ಪಾದನೆ ಪ್ರಮಾಣವನ್ನು 300 ದಶಲಕ್ಷ ಟನ್ ಗಳಿಗೆ ಹೆಚ್ಚಿಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿ ಮಾಡಿರುವ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕೇಂದ್ರ ಉಕ್ಕು ಸಚಿವರು ಈ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದ್ದಾರೆ.

ಶೇ.100ರಷ್ಟು ಬಂಡವಾಳ ವಾಪಸಾತಿ ನಿರ್ಧಾರದಿಂದ ಪೂರ್ಣ ಪ್ರಮಾಣದಲ್ಲಿ ಖಾಸಗೀಕರಣ ಆಗುವ ಹಂತದಲ್ಲಿದ್ದ ವೈಜಾಗ್ ಸ್ಟೀಲ್ ಗೆ ಕೊನೆಗೂ ಜೀವದಾನವಾಗುತ್ತಿದೆ. ಈ ಬಗ್ಗೆ ಕಾರ್ಖಾನೆಗೆ ಮರುಜೀವ ಕೊಡುವ ಪುನಶ್ಚೇತನ ಯೋಜನೆಯ ಬಗ್ಗೆ ಪ್ರಧಾನಮಂತ್ರಿಗಳ ಕಾರ್ಯಾಲಯದ ಜತೆ ಕೇಂದ್ರ ಸಚಿವರು ವಿಸ್ತೃತ ಸಮಾಲೋಚನೆ ನಡೆಸಿದ್ದಾರೆ.

ಪ್ರಧಾನಿಗಳ ಕನಸಿನ ‘ವಿಕಸಿತ ಭಾರತ 2047’ ಗುರಿ ತಲುಪಲು ಭಾರತೀಯ ಉಕ್ಕು ಕ್ಷೇತ್ರದ ಕೊಡುಗೆ ಮಹತ್ವವಾದದ್ದು. ಈ ದಿಸೆಯಲ್ಲಿ ಪ್ರಧಾನಿಗಳ ಆತ್ಮನಿರ್ಭರ ಭಾರತ ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕೇಂದ್ರ ಸರಕಾರ ಕಾಯಕಲ್ಪ ನೀಡುತ್ತಿದೆ ಎಂದು ಹೇಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ತಾವು ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ 2024 ಜುಲೈ 10-11ರಂದು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಭೇಟಿ ನೀಡಿದ್ದರು.

ನಿರ್ಮಲಾ ಸೀತಾರಾಮನ್ ಅವರ ನೇತೃತ್ವದ ಹಣಕಾಸು ಸಚಿವಾಲಯವು ವೈಜಾಗ್ ಸ್ಟೀಲ್ ಕಾರ್ಖಾನೆ ಪುನಚ್ಚೇತನ ಯೋಜನೆ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮುಖ್ಯವಾಗಿ ವಿಶೇಷವಾಗಿ ಕಾರ್ಖಾನೆಯ ಸಾಲಗಳ ಪುನಾರಚನೆ ಮತ್ತು ಹಣಕಾಸಿನ ಬೆಂಬಲದ ಅಗತ್ಯಗಳನ್ನು ಪರಿಹರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೂಡ ಕೇಂದ್ರ ಉಕ್ಕು ಸಚಿವರು ನಿರ್ಮಲಾ ಸೀತಾರಾಮನ್ ಅವರೊಂದಿಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಿದ್ದಾರೆ.

RINL ಭಾರತದ ಉಕ್ಕು ಉದ್ಯಮದ ಆಧಾರ ಸ್ತಂಭ

HD Kumaraswamy : ಸ್ವಾಮೀಜಿಗಳ ಮುಂದೆ ಸಿದ್ದರಾಮಯ್ಯನ ಮರ್ಯಾದೆ ತೆಗೆದ ಕುಮಾರಸ್ವಾಮಿ #pratidhvani

ವೈಜಾಗ್ ಸ್ಟೀಲ್ ಎಂದೇ ಹೆಸರಾಗಿರುವ RINL, ಪ್ರಾರಂಭದಿಂದಲೂ ಭಾರತದ ಉಕ್ಕು ಕ್ಷೇತ್ರದಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿದೆ. ಅನೇಕ ವರ್ಷಗಳ ಕಾಲ ವೈಭವದಿಂದ ಕಾರ್ಯ ನಿರ್ವಹಿಸಿದ್ದ ಕಾರ್ಖಾನೆಯು, ಇತ್ತೀಚಿನ ವರ್ಷಗಳಲ್ಲಿ ಅತಿಯಾದ ಸಾಲ, ಕಾರ್ಯಾಚರಣೆಯ ಅಸಮರ್ಥತೆ ಮತ್ತು ಜಾಗತಿಕ ಮಾರುಕಟ್ಟೆ ಒತ್ತಡಗಳಿಂದಾಗಿ ತೀವ್ರ ಹಣಕಾಸು ಬಿಕ್ಕಟ್ಟಿಗೆ ಸಿಕ್ಕಿತ್ತು. ಕಾರ್ಖಾನೆಯನ್ನು ಪುನಚ್ಚೇತನಗೊಳಿಸುವುದು ಎಂದರೆ ಕೇವಲ ಕಾರ್ಖಾನೆಯ ರಕ್ಷಣೆ ಮಾತ್ರವಲ್ಲ, ಸಾವಿರಾರು ಕಾರ್ಮಿಕರ ಜೀವನೋಪಾಯವನ್ನು ರಕ್ಷಣೆ ಮಾಡುವುದು ಹಾಗೂ ದೇಶದ ಉಕ್ಕು ಅಗತ್ಯಗಳಿಗಳಿಗೆ ಇದೇ ಕಾರ್ಖಾನೆಯಿಂದ ದೊಡ್ಡ ಕೊಡುಗೆ ನೀಡುವುದೇ ಆಗಿದೆ ಎಂದು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈಗಾಗಲೇ ವೈಜಾಗ್ ಸ್ಟೀಲ್ ಕಾರ್ಖಾನೆಯ ಪುನಚ್ಚೇತನಕ್ಕಾಗಿ ಸರಣಿ ಸಭೆಗಳನ್ನು ನಡೆಸಿರುವ ಸಚಿವರು; ಪ್ರಧಾನಿಗಳ ಕಾರ್ಯಾಲಯ, ಹಣಕಾಸು ಸಚಿವಾಲಯ, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು, ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಕಾರ್ಮಿಕ ಸಂಘಟನೆಗಳ ಜತೆಯೂ ನಿರಂತರ ಮಾತುಕತೆ ನಡೆಸಿದ್ದರು.

ಕಾರ್ಖಾನೆ ಪುನಚ್ಚೇತನ ಎಂದರೆ ಕಾರ್ಖಾನೆ ಹೊಂದಿರುವ ಸಾಲ ಪುನಾರಚನೆ, ಸೌಲಭ್ಯಗಳ ಆಧುನೀಕರಣ, ತಾಂತ್ರಿಕ ಉನ್ನತೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತಿರುವ ಸಚಿವರು; ಜಾಗತಿಕ ಮಾರುಕಟ್ಟೆಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಖಾನೆಯನ್ನು ಸಜ್ಜುಗೊಳಿಸಲು ಸಚಿವರು ಊದೇಶಿಸಿದ್ದಾರೆ. ಪುನಚ್ಚೇತನ ಯೋಜನೆಯಲ್ಲಿ ಇವೆಲ್ಲಾ ಅಂಶಗಳು ಸೇರಿವೆ.

RINL ಪುನಶ್ಚೇತನ ರಾಷ್ಟ್ರೀಯ ಆದ್ಯತೆ

RINL ಕಾರ್ಖಾನೆಗೆ ಮರುಜೀವ ನೀಡುವ ಯೋಜನೆ ರಾಷ್ಟ್ರೀಯ ಆದ್ಯತೆ ಎಂದು ಬಣ್ಣಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಭಾರತದ ಕೈಗಾರಿಕಾ ಪರಂಪರೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರ ಸರಕಾರ ಇಟ್ಟಿರುವ ದಿಟ್ಟ ಹೆಜ್ಜೆ ಇದಾಗಿದೆ ಇಂದು ಹೇಳಿದ್ದಾರೆ.

ಪ್ರಧಾನಿಗಳ ಕಾರ್ಯಾಲಯದ ಸ್ಪಷ್ಟ ಭರವಸೆ ಹಾಗೂ ಹಣಕಾಸು ಸಚಿವಾಲಯದ ಸಹಕಾರ ಕಾರ್ಖಾನೆಯನ್ನು ಉಳಿಸುವ ಪಯತ್ನಕ್ಕೆ ಕಾರಣವಾಗಿದೆ. ಇದು ಕೇವಲ ಉಕ್ಕಿನ ಸ್ಥಾವರವನ್ನು ಪುನರುಜ್ಜೀವನಗೊಳಿಸುವುದಷ್ಟೇ ಅಲ್ಲ, ಸಾವಿರಾರು ಕಾರ್ಮಿಕರ ಕುಟುಂಬಗಳ ಜೀವನೋಪಾಯ ಕಾಪಾಡುವುದೇ ಆಗಿದೆ. ಅಲ್ಲದೆ; ದೇಶೀಯ ಉಕ್ಕು ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದು ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ. ವೈಜಾಗ್ ಸ್ಟೀಲ್ ಭಾರತದ ಕೈಗಾರಿಕೆ ಕ್ಷೇತ್ರದ ಶಕ್ತಿ ಮತ್ತು ಹೆಮ್ಮೆಯ ಸಂಕೇತ, ಮತ್ತು ಅದರ ಯಶಸ್ಸು ಯಾವುದೇ ಸವಾಲನ್ನು ಜಯಿಸುವ ಭಾರತದ ಸಾಮರ್ಥ್ಯದ ಬಗ್ಗೆ ವಿಶ್ವಾಸವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತದ ಭವಿಷ್ಯದ ಅಗತ್ಯಗಳಿಗೆ, ಬೇಡಿಕೆಗಳಿಗೆ ಈ ಕಾರ್ಖಾನೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ಅವರ ಗುರಿಯಾದ ‘ವಿಕಸಿತ ಭಾರತ 2047’ ಗುರಿ ಸಾಧಿಸಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಮರುಜೀವ ಕೊಡುವ ಯೋಜನೆ ಮಹತ್ವದ ಉಪಕ್ರಮವಾಗಿದೆ. ರಾಷ್ಟ್ರದ ಹಿತಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಭಾರತದ ಗುರಿಗೆ ಈ ಕಾರ್ಖಾನೆ ಗಣನೀಯ ಕೊಡುಗೆ ನೀಡುತ್ತದೆ ಎನ್ನುವ ವಿಶ್ವಾಸ ಸರ್ಕಾರಕ್ಕೆ ಇದೆ ಎಂದು ಅವರು ಸಚಿವರು ತಿಳಿಸಿದ್ದಾರೆ.

Lawyer Jagadish : ಪ್ರಮೋದ್‌ ಮುತಾಲಿಕ್‌ ಗೆ ಓಪನ್‌ ಚಾಲೆಂಜ್‌ ಹಾಕಿದ ಲಾಯರ್‌ ಜಗ್ಗು ಜಗದೀಶ್‌  #pratidhvani #new

ಕೋಟ್

ನಮ್ಮ ಪ್ರಯತ್ನ ಉಕ್ಕಿನ ಸ್ಥಾವರವನ್ನು ಪುನರುಜ್ಜೀವನಗೊಳಿಸುವುದಷ್ಟೇ ಅಲ್ಲ, ಸಾವಿರಾರು ಕಾರ್ಮಿಕರ ಕುಟುಂಬಗಳ ಜೀವನೋಪಾಯ ಕಾಪಾಡುವುದೇ ಆಗಿದೆ. ದೇಶೀಯ ಉಕ್ಕು ಉತ್ಪಾದನೆಯನ್ನು ಹೆಚ್ಚಿಸುವುದು, ಆಮದು ಮೇಲಿನ ಅವಲಂಬನೆ ಕಡಿಮೆ ಮಾಡುವುದು ನಮ್ಮ ಗುರಿ. ವೈಜಾಗ್ ಸ್ಟೀಲ್ ಭಾರತದ ಕೈಗಾರಿಕೆ ಕ್ಷೇತ್ರದ ಶಕ್ತಿ ಮತ್ತು ಹೆಮ್ಮೆಯ ಸಂಕೇತ, ಮತ್ತು ಅದರ ಯಶಸ್ಸು ಯಾವುದೇ ಸವಾಲನ್ನು ಜಯಿಸುವ ಭಾರತದ ಸಾಮರ್ಥ್ಯದ ಬಗ್ಗೆ ವಿಶ್ವಾಸವನ್ನು ನೀಡುತ್ತದೆ.

  • ಹೆಚ್.ಡಿ.ಕುಮಾರಸ್ವಾಮಿ
    ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು
Tags: centre on vizag steel plantlatest newslive newsNewstelangana newstelugu newsvisakha steel plant latest newsvisakha steel plant news todayvisakha steel plant privitizationvisakhapatnam steel plantvizag steel plantvizag steel plant latest newsvizag steel plant privatisationvizag steel plant privatizationvizag steel plant privatization latest newsvizag steel plant privatization newsvizag steel plant privatized
Previous Post

ದೂಪದ್ ಕಾಂಪ್ಲೆಸ್ ನಲ್ಲಿ ಗೃಹೋಪಯೋಗಿ ವಸ್ತುಗಳು ಕಡಿಮೆ ಬೆಲೆಗೆ ಮಾರಾಟ:ಸ್ಥಾನೀಯ ಸಮಿತಿ ದೂರು

Next Post

2025ರ ಹೊಸ ವರ್ಷ ಸ್ವಾಗತ ಸಂಭ್ರಮ ರಾಜ್ಯಾದ್ಯಂತ ಎಲ್ಲೆಲ್ಲಿ ಹೇಗಿದೆ..?

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
2025ರ ಹೊಸ ವರ್ಷ ಸ್ವಾಗತ ಸಂಭ್ರಮ ರಾಜ್ಯಾದ್ಯಂತ ಎಲ್ಲೆಲ್ಲಿ ಹೇಗಿದೆ..?

2025ರ ಹೊಸ ವರ್ಷ ಸ್ವಾಗತ ಸಂಭ್ರಮ ರಾಜ್ಯಾದ್ಯಂತ ಎಲ್ಲೆಲ್ಲಿ ಹೇಗಿದೆ..?

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada