• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎರಡು ಡೋಸ್ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್; ಬಿಬಿಎಂಪಿ ಅಂಕಿಅಂಶಗಳು ಹೇಳುತ್ತಿರೋದೇನು?

ನಚಿಕೇತು by ನಚಿಕೇತು
September 22, 2021
in ಕರ್ನಾಟಕ
0
ಎರಡು ಡೋಸ್ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್; ಬಿಬಿಎಂಪಿ ಅಂಕಿಅಂಶಗಳು ಹೇಳುತ್ತಿರೋದೇನು?
Share on WhatsAppShare on FacebookShare on Telegram

ಮಾರಕ ಕರೋನಾ ವಿರುದ್ಧ ಹೋರಾಡಲು ದೇಶಾದ್ಯಂತ ಬೃಹತ್ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ. ದಾಖಲೆ ಪ್ರಮಾಣದಲ್ಲಿ ಜನರಿಗೆ ಲಸಿಕೆ ನೀಡುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೇಳುತ್ತಿದೆ. ಇನ್ನೊಂದೆಡೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ಕೇವಲ ಅಂಕಿಅಂಶ ತೋರಿಸುತ್ತಿದೆ. ಲಸಿಕಾ ಕೇಂದ್ರಕ್ಕೆ ಹೋದರೆ ಎಲ್ಲೂ ನಿಮಗೆ ವ್ಯಾಕ್ಸಿನ್ ಸಿಗೋದೆ ಇಲ್ಲ ಎಂದು ಕೆಂಡಕಾರುತ್ತಿದ್ದಾರೆ. ಹೀಗಿರುವಾಗಲೇ ಎರಡು ಡೋಸ್ ಲಸಿಕೆ ಪಡೆದವರು ಕೊರೋನಾದಿಂದ ಸೇಫ್ ಅಂಕಿ ಅಂಶವೊಂದು ಹೊರಬಿದ್ದಿದೆ.

ADVERTISEMENT

ಹೌದು, ಈಗಾಗಲೇ ಎರಡೂ ಡೋಸ್ ಲಸಿಕೆ ಪಡೆದವರಿಗೆ ಬಿಬಿಎಂಪಿ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ. ಲಸಿಕೆಯ ಮಹತ್ವದ ಬಗ್ಗೆ ಅಂಕಿ ಅಂಶವೊಂದು ಬಿಡುಗಡೆಯಾಗಿದ್ದು, ವ್ಯಾಕ್ಸಿನ್ ಪಡೆದವರಿಗೆ ಕೊರೋನಾ ಸೋಂಕು ತಗುಲಿದ್ರೂ ಸೇಫ್ ಅಂತಾ ಹೇಳಲಾಗುತ್ತಿದೆ. ಬಿಬಿಎಂಪಿ ಅಂಕಿಅಂಶಗಳ ಪ್ರಕಾರ ಎರಡೂ ಡೋಸ್ ಲಸಿಕೆ ಪಡೆದ ಒಬ್ಬ ವ್ಯಕ್ತಿಯೂ ICUಗೆ ದಾಖಲಾಗಿಲ್ಲವಂತೆ.

ಇನ್ನು, ಸೋಂಕು ತಗುಲಿದ್ರೂ ವ್ಯಾಕ್ಸಿನ್ ಪಡೆದವರಲ್ಲಿ ಗಂಭೀರ ಲಕ್ಷಣ ಕಾಣಿಸಿಕೊಂಡಿಲ್ಲ. ಇತ್ತೀಚಿಗೆ ಕೊರೋನಾದಿಂದ 32 ಮಂದಿ ಐಸಿಯುಗೆ ದಾಖಲಾಗಿದ್ದು, ಇದರಲ್ಲಿ 25 ಮಂದಿ ವ್ಯಾಕ್ಸಿನ್ ಪಡೆದಿರಲಿಲ್ಲ. ಇನ್ನು ಐಸಿಯುನಲ್ಲಿದ್ದ ಉಳಿದ 7 ಮಂದಿ ಕೇವಲ ಮೊದಲ ಡೋಸ್ ಮಾತ್ರ ಪಡೆದಿದ್ದರಂತೆ.

ಸದ್ಯ 2 ಡೋಸ್ ಲಸಿಕೆ ಪಡೆದವರು ಕೊರೊನಾದಿಂದ ಐಸಿಯುಗೆ ದಾಖಲಾಗಿಲ್ಲ. ಬಿಬಿಎಂಪಿಯ ಈ ಅಂಕಿಅಂಶಗಳು 2 ಡೋಸ್ ಲಸಿಕೆ ಪಡೆದವರಿಗೆ ಸೋಂಕು ತಗುಲಿದ್ರೂ ಸೇಫ್ ಎನ್ನುವುದು ಸಾರಿ ಹೇಳುತ್ತಿದೆ. ಬಿಬಿಎಂಪಿಯ ಇದೊಂದು ಅಂಕಿಅಂಶ ಲಸಿಕೆ ಬಗೆಗಿನ ಮಹತ್ವವನ್ನ ತೋರಿಸಿದೆ ಎನ್ನಲಾಗುತ್ತಿದೆ.

ಸದ್ಯ ದೇಶಾದ್ಯಂತ 3ನೇ ಅಲೆ ಎದುರಿಸೋಕೆ ಸರ್ಕಾರದಿಂದ ತಯಾರಿ ನಡೀತಿದೆ. ಇತ್ತೀಚೆಗಷ್ಟೇ ಸಣ್ಣ ಸಣ್ಣ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಳ್ತಿರೋದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ.

ಅಕ್ಟೋಬರ್ ಅಂತ್ಯದ ವೇಳೆಗೆ ಮಕ್ಕಳಿಗೆ ಝೈಡಸ್ ಕ್ಯಾಡಿಲಾ ಲಸಿಕೆಯನ್ನ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಮಕ್ಕಳ ತುರ್ತು ಬಳಕೆಗೆ ಈ ಲಸಿಕೆ ನೀಡಲು ತಯಾರಿ ನಡೆಸಲಾಗಿದ್ದು, 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ 1 ಕೋಟಿ ಡೋಸ್ ಸರಬರಾಜು ಮಾಡಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಈ ಬಗ್ಗೆ ತಜ್ಞರು ಸೂಕ್ತ ಗೈಡ್ಲೈನ್ಸ್ಗಳನ್ನು ಹೊರಡಿಸಿದ ಬಳಿಕ ಲಸಿಕೆ ವಿತರಣೆಯನ್ನ ಕೇಂದ್ರ ಸರ್ಕಾರ ಆರಂಭಿಸಲಿದೆ.

ಇದೆಲ್ಲದರ ನಡುವೆ ದೇಶಾದ್ಯಂತ ಲಸಿಕೆ ವಿತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಿದ್ಧತೆ ನಡೀತಿದೆ. ಅಕ್ಟೋಬರ್ 7ರ ಒಳಗೆ ದೇಶದಲ್ಲಿ ನೂರು ಕೋಟಿ ಜನರಿಗೆ ಲಸಿಕೆ ನೀಡುವ ಗುರಿಯನ್ನ ಕೇಂದ್ರ ಸರ್ಕಾರ ಹೊಂದಿದೆ. ಹಾಗೇನಾದ್ರು ಆಗಿದ್ದೇ ಆದ್ರೆ, ದೇಶದಲ್ಲಿ ಲಸಿಕೆ ವಿತರಣೆ ಮಿಂಚಿನ ವೇಗದಲ್ಲಿ ಸಾಗುತ್ತೆ. ಅಲ್ಲದೆ 3ನೇ ಅಲೆಯ ವಿರುದ್ಧದ ಹೋರಾಟಕ್ಕೆ ಆನೆ ಬಲ ಸಿಕ್ಕಂತಾಗುತ್ತೆ.

ದೇಶದ ಒಟ್ಟಾರೆ ಕೋವಿಡ್ ಲಸಿಕೆ ನೀಡಿಕೆ ಪೈಕಿ 8 ರಾಜ್ಯಗಳಲ್ಲಿ ಶೇ.59.58ರಷ್ಟು ಲಸಿಕೆ ನೀಡಲಾಗಿದೆ. ಈ 8 ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಮಧ್ಯಪ್ರದೇಶ ಮತ್ತು ಕೇರಳ ಇದೆ. ಮಹಾರಾಷ್ಟ್ರ, ಛತ್ತೀಸ್ಗಢ, ಕರ್ನಾಟಕ, ಪಂಜಾಬ್, ತಮಿಳುನಾಡು, ಕೇರಳ, ದೆಹಲಿ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿನ ಸೋಂಕಿತರ ಪ್ರಮಾಣವೂ ಕಡಿಮೆಯಾಗುತ್ತಿದೆ.

Tags: Covid 19ಕರೋನಾಕರೋನಾ ಲಸಿಕೆಕರ್ನಾಟಕ ಸರ್ಕಾರಕೋವಿಡ್-19ಬಿಬಿಎಂಪಿ
Previous Post

ದೇವರ ಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಓರ್ವ ಮಹಿಳೆ ಸಾವು

Next Post

ಮೈಸೂರು ದಸರಾ ತಾಲೀಮು ಆರಂಬಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜ ಪಡೆ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಮೈಸೂರು ದಸರಾ ತಾಲೀಮು ಆರಂಬಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜ ಪಡೆ

ಮೈಸೂರು ದಸರಾ ತಾಲೀಮು ಆರಂಬಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜ ಪಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada