ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ.ಬಿಜೆಪಿ ಸರ್ಕಾರದ ಅಜೆಂಡಾವೇ ಮೂವರು ಸಿಎಂ ಆಗುವುದು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ, ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಸಿಎಂ ಅಗಿದ್ದರು.ಈ ಬಾರಿ ಯಡಿಯೂರಪ್ಪ ಸಿಎಂ ಆಗಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಮುರುಗೇಶ ನಿರಾಣಿ ಸಿಎಂ ಆಗುತ್ತಾರಂತ ಅವರ ಪಕ್ಷದವರೇ ಹೇಳುತ್ತಿದ್ದಾರೆ.ಹೀಗಾಗಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ ಎಂದರು.
ವೈರಲ್ ವಿಡಿಯೋದಲ್ಲಿ ಘಟನೆ ಮಾತ್ರ ಕಾಣುತ್ತದೆ.. ಸಂಬಂಧದ ಇತಿಹಾಸವಲ್ಲ..!
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಚರ್ಚೆಗೆ ಕಾರಣವಾದ ಒಂದು ಘಟನೆ, ನಮ್ಮ ಸಮಾಜದ ತೀರ್ಪು ನೀಡುವ ಮನೋವೃತ್ತಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ವಯಸ್ಸಾದ ತಂದೆಯೊಬ್ಬರು ಮೃತಪಟ್ಟಿದ್ದು, ಅವರ...
Read moreDetails



