ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ.ಬಿಜೆಪಿ ಸರ್ಕಾರದ ಅಜೆಂಡಾವೇ ಮೂವರು ಸಿಎಂ ಆಗುವುದು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ, ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಸಿಎಂ ಅಗಿದ್ದರು.ಈ ಬಾರಿ ಯಡಿಯೂರಪ್ಪ ಸಿಎಂ ಆಗಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಮುರುಗೇಶ ನಿರಾಣಿ ಸಿಎಂ ಆಗುತ್ತಾರಂತ ಅವರ ಪಕ್ಷದವರೇ ಹೇಳುತ್ತಿದ್ದಾರೆ.ಹೀಗಾಗಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ ಎಂದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



