• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ ಗ್ಯಾರಂಟಿಯೇ ಆಸರೆ.. ಎಲ್ಲರನ್ನೂ ತಲುಪಿದೆ ಗೃಹಜ್ಯೋತಿ

Krishna Mani by Krishna Mani
May 2, 2024
in Top Story, ದೇಶ, ರಾಜಕೀಯ
0
ಸರ್ಕಾರಕ್ಕೆ ಗ್ಯಾರಂಟಿಯೇ ಆಸರೆ.. ಎಲ್ಲರನ್ನೂ ತಲುಪಿದೆ ಗೃಹಜ್ಯೋತಿ
Share on WhatsAppShare on FacebookShare on Telegram

ಕಾಂಗ್ರೆಸ್​ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್​ಗಿಂತ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ಇದು ದೇಶಕ್ಕಾಗಿ ನಡೆಯುತ್ತಿರುವ ಚುನಾವಣೆ, ನರೇಂದ್ರ ಮೋದಿ ನಾಯಕತ್ವಕ್ಕೆ ಜನರು ಮತ ನೀಡ್ತಾರೆ ಎನ್ನುವುದು ಎನ್​ಡಿಎ ಪಕ್ಷಗಳ ಅಂಬೋಣ. ಅದೇ ಕಾರಣಕ್ಕೆ 25 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುವ ಮಾತನಾಡ್ತಿದ್ದಾರೆ. ಆದರೆ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್​​ ಪಕ್ಷಕ್ಕೆ ಗ್ಯಾರಂಟಿ ಗೆಲುವು ತಂದುಕೊಡಲಿದೆ ಎನ್ನುವ ಬಲವಾದ ನಂಬಿಕೆ ಇದೆ. ಕಳೆದ ಬಾರಿ ಕರ್ನಾಟಕದ ಜನರು ಕಾಂಗ್ರೆಸ್​​ ಪಕ್ಷವನ್ನು ಗೆಲ್ಲಿಸಿದ್ದು, ಇದೇ ಗ್ಯಾರಂಟಿ ಯೋಜನೆಯ ಭರವಸೆ ಆಧಾರದಲ್ಲಿ ಎನ್ನುವುದು ಕಾಂಗ್ರೆಸ್​ ನಂಬಿಕೆಗೆ ಕಾರಣ.

ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರನ್ನು ಕೇಂದ್ರೀಕರಿಸಿ ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತು. ಅದರಲ್ಲಿ ಒಂದು ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮಹಿಳೆಯರ ಅಕೌಂಟ್​ಗೆ 2 ಸಾವಿರ ರೂಪಾಯಿ ಕೊಡುವುದು. ಅದರಂತೆ ಶಕ್ತಿಯೋಜನೆ, ಇದರಲ್ಲಿ ಪ್ರತಿ ಮಹಿಳೆಗೂ ಸಾರಿಗೆ ಬಸ್​​ನಲ್ಲಿ ಉಚಿತ ಸಂಚಾರ ಸೌಲಭ್ಯ. ಈ ಎರಡೂ ಯೋಜನೆಗಳು ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಕಾರಣವಾಯ್ತು. ಇದರ ಜೊತೆಗೆ ಪಕ್ಷಬೇಧ, ಲಿಂಗಬೇಧ ಮರೆತು ಬೆಂಬಲ ಸಿಗುವಂತೆ ಮಾಡಿದ್ದು ಗೃಹಜ್ಯೋತಿ ಯೋಜನೆ. ಪ್ರತಿ ಮನೆಗೂ 200 ಯುನಿಟ್​ ವಿದ್ಯುತ್​​ ಕೊಟ್ಟಿದ್ದು, ಜನರ ಮನಸ್ಸಲ್ಲಿ ಉಳಿಯುವಂತಾಗಿದೆ.

ಗ್ಯಾರಂಟಿ ಯೋಜನೆಗಳ ನಡುವೆ ಹೆಚ್ಚು ಜನಪ್ರಿಯ ಆಗಿದ್ದು ಗೃಹಜ್ಯೋತಿ ಯೋಜನೆ. ಕಳೆದ ಆಗಸ್ಟ್​ನಿಂದ ಯಾವುದೇ ಕುಟುಂಬಗಳಿಗೆ ಕರೆಂಟ್​ ಬಿಲ್​ ಬರ್ತಿಲ್ಲ. 200 ಯೂನಿಟ್​ ಒಳಗೆ ಬಳಸುವ ಕುಟುಂಬಗಳಿಗೆ ಸರ್ಕಾರ ಉಚಿತ ವಿದ್ಯುತ್​ ಪೂರೈಕೆ ಮಾಡುತ್ತಿದೆ. ಬಹುತೇಕ ಶೇಕಡ 90ರಷ್ಟು ಕುಟುಂಬಗಳು ಈ ಯೋಜನೆಯ ಲಾಭ ಪಡೆದುಕೊಂಡಿವೆ. ಕನಿಷ್ಟ 250 ರಿಂದ ಒಂದೂವರೆ ಸಾವಿರ ರೂಪಾಯಿ ಪ್ರತಿ ತಿಂಗಳು ಉಳಿತಾಯ ಆಗುತ್ತಿದೆ. ಇದರಲ್ಲಿ ಮಹಿಳೆ – ಪುರುಷ ಅನ್ನೋ ತಾರತಮ್ಯವಿಲ್ಲ. ಬಡವ ಶ್ರೀಮಂತ ಅನ್ನೋದು ಇಲ್ಲ. 200 ಯೂನಿಟ್​ ಒಳಗೆ ಬಳಕೆ ಮಾಡುವ ಎಲ್ಲರಿಗೂ ಈ ಯೋಜನೆಯ ಲಾಭ ಲಭಿಸಿದೆ.

ಇಂಧನ ಸಚಿವ ಕೆ.ಜೆ ಜಾರ್ಜ್​ ನೇತೃತ್ವದಲ್ಲಿ ಇಂಧನ ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಉಚಿತ ವಿದ್ಯುತ್​ ಕೊಡುತ್ತಿದ್ದರೂ ಬೇಸಿಗೆಯಲ್ಲಿ ವಿದ್ಯುತ್​ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿರುವುದು ರೈತರು ಹಾಗು ಹಳ್ಳಿ ಭಾಗದ ಜನರ ನೆಮ್ಮದಿಗೆ ಕಾರಣವಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಲೋಡ್​ ಶೆಡ್ಡಿಂಗ್​ ಅನ್ನೂ ಭೂತದ ಕೈಗೆ ಸರ್ಕಾರಗಳು ಸಿಲುಕಿಕೊಂಡಿದ್ದವು. ಈ ಬಾರಿ ಲೋಡ್​ ಶೆಡ್ಡಿಂಗ್​ ಇಲ್ಲದೆ ನಿತಂತರ ವಿದ್ಯುತ್​ ಪೂರೈಕೆ, ಕೊಳವೆ ಬಾವಿಗಳನ್ನು ಓಡಿಸಲು ರೈತರಿಗೆ ತ್ರಿಫೇಸ್​ ವಿದ್ಯುತ್​ ಕೂಡ ನಿರಂತರವಾಗಿ ನೀಡುತ್ತಿರುವುದು ಬರಗಾಲದಲ್ಲೂ ಜನರು ಶಾಂತಿಯಿಂದ ಇರುವಂತೆ ಮಾಡಿದೆ.

ಮತದಾನ ಮಾಡಲು ಮತಕೇಂದ್ರಕ್ಕೆ ಬಂದಾಗ ಮತಪೆಟ್ಟಿಗೆ ಬಳಿಗೆ ಹೋಗುವ ತನಕ ಮತದಾರ ಯೋಚಿಸುತ್ತಾನೆ. ಒಂದು ಕ್ಷಣ ಕಾಂಗ್ರೆಸ್​ ಸರ್ಕಾರ ನೀಡಿರುವ ಎಲ್ಲಾ ಅನುಕೂಲಗಳು ಕಣ್ಣ ಮುಂದೆ ಬಂದೇ ಬರುತ್ತವೆ ಎನ್ನುವುದು ಕಾಂಗ್ರೆಸ್​​ ನಾಯಕರ ವಿಶ್ವಾಸ. ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷದಲ್ಲಿ ಕೇವಲ ಭರವಸೆಗಳಿಗೆ ಸೀಮಿತ ಆಗಿದೆ. ಯಾವುದೇ ಉಪಯೋಗಕಾರಿ ಯೋಜನೆಗಳನ್ನು ಜಾರಿ ಮಾಡಿಲ್ಲ. ದರ ಏರಿಕೆ ಮಾಡಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮತದಾರ ಎಲ್ಲವನ್ನೂ ತುಲನೆ ಮಾಡಿ ಮತ ಚಲಾಯಿಸ್ತಾನೆ ಎನ್ನೋದು ಕಾಂಗ್ರೆಸ್​ ನಾಯಕರ ಮಾತು. ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದ್ದು, 14 ಸ್ಥಾನಗಳ ಪೈಕಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸ್ತಿದ್ದಾರೆ. ಎಲ್ಲದಕ್ಕೂ ಉತ್ತರ ಜೂನ್​ 4ರಂದು ಹೊರ ಬೀಳಲಿದೆ.

ಕೃಷ್ಣಮಣಿ

Tags: #dkshivakumarBJPCongress PartyGruha Jyothi SchemeKJ Georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ಶಾಸಕರು – ಕಾರ್ಯಕರ್ತೆ ವಿಡಿಯೋ ಅಸಲಿಯತ್ತು ಏನು..?

Next Post

Congressಗೆ Prajwal Revanna Sex Scandal ಬಗ್ಗೆ ಮೊದಲೇ ತಿಳಿದಿತ್ತು

Related Posts

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”
ಇದೀಗ

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರ ಪೂರ್ಣ - ಇದೇ ಕಾಂಗ್ರೆಸ್ ಸಾಧನೆ! ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದಿನದಿಂದ ದಿನಕ್ಕೆ ತನ್ನದೇ ದಾಖಲೆ...

Read moreDetails
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post

Congressಗೆ Prajwal Revanna Sex Scandal ಬಗ್ಗೆ ಮೊದಲೇ ತಿಳಿದಿತ್ತು

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada