• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ ಗ್ಯಾರಂಟಿಯೇ ಆಸರೆ.. ಎಲ್ಲರನ್ನೂ ತಲುಪಿದೆ ಗೃಹಜ್ಯೋತಿ

Krishna Mani by Krishna Mani
May 2, 2024
in Top Story, ದೇಶ, ರಾಜಕೀಯ
0
ಸರ್ಕಾರಕ್ಕೆ ಗ್ಯಾರಂಟಿಯೇ ಆಸರೆ.. ಎಲ್ಲರನ್ನೂ ತಲುಪಿದೆ ಗೃಹಜ್ಯೋತಿ
Share on WhatsAppShare on FacebookShare on Telegram

ಕಾಂಗ್ರೆಸ್​ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್​ಗಿಂತ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ಇದು ದೇಶಕ್ಕಾಗಿ ನಡೆಯುತ್ತಿರುವ ಚುನಾವಣೆ, ನರೇಂದ್ರ ಮೋದಿ ನಾಯಕತ್ವಕ್ಕೆ ಜನರು ಮತ ನೀಡ್ತಾರೆ ಎನ್ನುವುದು ಎನ್​ಡಿಎ ಪಕ್ಷಗಳ ಅಂಬೋಣ. ಅದೇ ಕಾರಣಕ್ಕೆ 25 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುವ ಮಾತನಾಡ್ತಿದ್ದಾರೆ. ಆದರೆ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್​​ ಪಕ್ಷಕ್ಕೆ ಗ್ಯಾರಂಟಿ ಗೆಲುವು ತಂದುಕೊಡಲಿದೆ ಎನ್ನುವ ಬಲವಾದ ನಂಬಿಕೆ ಇದೆ. ಕಳೆದ ಬಾರಿ ಕರ್ನಾಟಕದ ಜನರು ಕಾಂಗ್ರೆಸ್​​ ಪಕ್ಷವನ್ನು ಗೆಲ್ಲಿಸಿದ್ದು, ಇದೇ ಗ್ಯಾರಂಟಿ ಯೋಜನೆಯ ಭರವಸೆ ಆಧಾರದಲ್ಲಿ ಎನ್ನುವುದು ಕಾಂಗ್ರೆಸ್​ ನಂಬಿಕೆಗೆ ಕಾರಣ.

ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರನ್ನು ಕೇಂದ್ರೀಕರಿಸಿ ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತು. ಅದರಲ್ಲಿ ಒಂದು ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮಹಿಳೆಯರ ಅಕೌಂಟ್​ಗೆ 2 ಸಾವಿರ ರೂಪಾಯಿ ಕೊಡುವುದು. ಅದರಂತೆ ಶಕ್ತಿಯೋಜನೆ, ಇದರಲ್ಲಿ ಪ್ರತಿ ಮಹಿಳೆಗೂ ಸಾರಿಗೆ ಬಸ್​​ನಲ್ಲಿ ಉಚಿತ ಸಂಚಾರ ಸೌಲಭ್ಯ. ಈ ಎರಡೂ ಯೋಜನೆಗಳು ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಕಾರಣವಾಯ್ತು. ಇದರ ಜೊತೆಗೆ ಪಕ್ಷಬೇಧ, ಲಿಂಗಬೇಧ ಮರೆತು ಬೆಂಬಲ ಸಿಗುವಂತೆ ಮಾಡಿದ್ದು ಗೃಹಜ್ಯೋತಿ ಯೋಜನೆ. ಪ್ರತಿ ಮನೆಗೂ 200 ಯುನಿಟ್​ ವಿದ್ಯುತ್​​ ಕೊಟ್ಟಿದ್ದು, ಜನರ ಮನಸ್ಸಲ್ಲಿ ಉಳಿಯುವಂತಾಗಿದೆ.

ಗ್ಯಾರಂಟಿ ಯೋಜನೆಗಳ ನಡುವೆ ಹೆಚ್ಚು ಜನಪ್ರಿಯ ಆಗಿದ್ದು ಗೃಹಜ್ಯೋತಿ ಯೋಜನೆ. ಕಳೆದ ಆಗಸ್ಟ್​ನಿಂದ ಯಾವುದೇ ಕುಟುಂಬಗಳಿಗೆ ಕರೆಂಟ್​ ಬಿಲ್​ ಬರ್ತಿಲ್ಲ. 200 ಯೂನಿಟ್​ ಒಳಗೆ ಬಳಸುವ ಕುಟುಂಬಗಳಿಗೆ ಸರ್ಕಾರ ಉಚಿತ ವಿದ್ಯುತ್​ ಪೂರೈಕೆ ಮಾಡುತ್ತಿದೆ. ಬಹುತೇಕ ಶೇಕಡ 90ರಷ್ಟು ಕುಟುಂಬಗಳು ಈ ಯೋಜನೆಯ ಲಾಭ ಪಡೆದುಕೊಂಡಿವೆ. ಕನಿಷ್ಟ 250 ರಿಂದ ಒಂದೂವರೆ ಸಾವಿರ ರೂಪಾಯಿ ಪ್ರತಿ ತಿಂಗಳು ಉಳಿತಾಯ ಆಗುತ್ತಿದೆ. ಇದರಲ್ಲಿ ಮಹಿಳೆ – ಪುರುಷ ಅನ್ನೋ ತಾರತಮ್ಯವಿಲ್ಲ. ಬಡವ ಶ್ರೀಮಂತ ಅನ್ನೋದು ಇಲ್ಲ. 200 ಯೂನಿಟ್​ ಒಳಗೆ ಬಳಕೆ ಮಾಡುವ ಎಲ್ಲರಿಗೂ ಈ ಯೋಜನೆಯ ಲಾಭ ಲಭಿಸಿದೆ.

ಇಂಧನ ಸಚಿವ ಕೆ.ಜೆ ಜಾರ್ಜ್​ ನೇತೃತ್ವದಲ್ಲಿ ಇಂಧನ ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಉಚಿತ ವಿದ್ಯುತ್​ ಕೊಡುತ್ತಿದ್ದರೂ ಬೇಸಿಗೆಯಲ್ಲಿ ವಿದ್ಯುತ್​ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿರುವುದು ರೈತರು ಹಾಗು ಹಳ್ಳಿ ಭಾಗದ ಜನರ ನೆಮ್ಮದಿಗೆ ಕಾರಣವಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಲೋಡ್​ ಶೆಡ್ಡಿಂಗ್​ ಅನ್ನೂ ಭೂತದ ಕೈಗೆ ಸರ್ಕಾರಗಳು ಸಿಲುಕಿಕೊಂಡಿದ್ದವು. ಈ ಬಾರಿ ಲೋಡ್​ ಶೆಡ್ಡಿಂಗ್​ ಇಲ್ಲದೆ ನಿತಂತರ ವಿದ್ಯುತ್​ ಪೂರೈಕೆ, ಕೊಳವೆ ಬಾವಿಗಳನ್ನು ಓಡಿಸಲು ರೈತರಿಗೆ ತ್ರಿಫೇಸ್​ ವಿದ್ಯುತ್​ ಕೂಡ ನಿರಂತರವಾಗಿ ನೀಡುತ್ತಿರುವುದು ಬರಗಾಲದಲ್ಲೂ ಜನರು ಶಾಂತಿಯಿಂದ ಇರುವಂತೆ ಮಾಡಿದೆ.

ಮತದಾನ ಮಾಡಲು ಮತಕೇಂದ್ರಕ್ಕೆ ಬಂದಾಗ ಮತಪೆಟ್ಟಿಗೆ ಬಳಿಗೆ ಹೋಗುವ ತನಕ ಮತದಾರ ಯೋಚಿಸುತ್ತಾನೆ. ಒಂದು ಕ್ಷಣ ಕಾಂಗ್ರೆಸ್​ ಸರ್ಕಾರ ನೀಡಿರುವ ಎಲ್ಲಾ ಅನುಕೂಲಗಳು ಕಣ್ಣ ಮುಂದೆ ಬಂದೇ ಬರುತ್ತವೆ ಎನ್ನುವುದು ಕಾಂಗ್ರೆಸ್​​ ನಾಯಕರ ವಿಶ್ವಾಸ. ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷದಲ್ಲಿ ಕೇವಲ ಭರವಸೆಗಳಿಗೆ ಸೀಮಿತ ಆಗಿದೆ. ಯಾವುದೇ ಉಪಯೋಗಕಾರಿ ಯೋಜನೆಗಳನ್ನು ಜಾರಿ ಮಾಡಿಲ್ಲ. ದರ ಏರಿಕೆ ಮಾಡಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮತದಾರ ಎಲ್ಲವನ್ನೂ ತುಲನೆ ಮಾಡಿ ಮತ ಚಲಾಯಿಸ್ತಾನೆ ಎನ್ನೋದು ಕಾಂಗ್ರೆಸ್​ ನಾಯಕರ ಮಾತು. ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದ್ದು, 14 ಸ್ಥಾನಗಳ ಪೈಕಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸ್ತಿದ್ದಾರೆ. ಎಲ್ಲದಕ್ಕೂ ಉತ್ತರ ಜೂನ್​ 4ರಂದು ಹೊರ ಬೀಳಲಿದೆ.

ಕೃಷ್ಣಮಣಿ

Tags: #dkshivakumarBJPCongress PartyGruha Jyothi SchemeKJ Georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ಶಾಸಕರು – ಕಾರ್ಯಕರ್ತೆ ವಿಡಿಯೋ ಅಸಲಿಯತ್ತು ಏನು..?

Next Post

Congressಗೆ Prajwal Revanna Sex Scandal ಬಗ್ಗೆ ಮೊದಲೇ ತಿಳಿದಿತ್ತು

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post

Congressಗೆ Prajwal Revanna Sex Scandal ಬಗ್ಗೆ ಮೊದಲೇ ತಿಳಿದಿತ್ತು

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada