ಹಾಸನ (Hassan): ನಮ್ಮ ಸರ್ಕಾರ ಐದು ವರ್ಷಗಳು ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ (Yatindra siddaramaiah) ಹೇಳಿದ್ದಾರೆ.
ಹೊಳೆ ನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಗ್ರಾಮದಲ್ಲಿ ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲಾ ಊಹಾಪೋಹಗಳು ಆ ರೀತಿ ಏನು ಇಲ್ಲಾ, ನಮ್ಮ ಸರ್ಕಾರ ಐದು ವರ್ಷಗಳು ಕೂಡ ತನ್ನ ಅವಧಿಯನ್ನು ಪೂರೈಸುತ್ತೆ
ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದರು.
ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂಬ ಕೆಲ ಶಾಸಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲಾ ಸರ್ಕಾರ ಇದ್ದಾಗಲೂ ಕೂಡ ಆ ರೀತಿ ಇದ್ದೇ ಇರುತ್ತೆ. ಬಿಜೆಪಿ ಸರ್ಕಾರ ಇದ್ದಾಗಲೂ ಎಷ್ಟೋ ಜನ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದರು. ಅವರ ಬೆಂಬಲಿಗರು ಕೂಡ ಮಾತನಾಡಿದ್ದರು. ಒಂದು ಸ್ಥಿರವಾದ ಸರ್ಕಾರ ಕೊಡಬೇಕಿರುವುದು ಎಲ್ಲಾ ಪಕ್ಷಗಳ ಜವಾಬ್ದಾರಿ. ನಮ್ಮ ಕಾಂಗ್ರೆಸ್ ಪಕ್ಷ ಕೂಡ ಅದಕ್ಕೆ ಬದ್ಧವಾಗಿರುತ್ತೆ ಎಂದು ಹೇಳಿದರು.
#Karnataka #hassan #siddaramaiah #yatindrasiddaramaiah #congress #congressgovt







