ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷ ಬಿಜೆಪಿ ಮಂಗಳವಾರ ರಾತ್ರಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಒತ್ತಾಯಿಸಿದ ಬೆನ್ನಲ್ಲೇ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದು, ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುವ ಮೂಲಕ ಬಹುಮತವನ್ನು ಸಾಬೀತುಪಡಿಸುವಂತೆ ಸೂಚಿಸಿದ್ದಾರೆ. ಸಂಜೆ 5 ವೇಳೆಗೆ ವಿಶ್ವಾಸ ಮತಯಾಚನೆ ಪೂರ್ಣಗೊಳಿಸುವಂತೆಯೂ ಸೂಚಿಸಿದ್ದಾರೆ.
ಆದರೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಿವಸೇನೆ ಶಾಸಕರನ್ನು ತಲುಪಲು ಹೊಸ ಪ್ರಯತ್ನವನ್ನು ಮಾಡಿದರು ಪ್ರಯತ್ನವೇನು ಅಗಿಲ್ಲ.
ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಒಂದು ವಾರದಿಂದ ನಮ್ಮನ್ನು ಬೆಂಬಲಿಸುವ ಶಾಸಕರ ದೊಡ್ಡ ಗುಂಪು ಶಿಬಿರದಲ್ಲಿದೆ, ಅವರು ತಮ್ಮ ಎಲ್ಲಾ ಗುಂಪಿನ ಶಾಸಕರೊಂದಿಗೆ ಮುಂಬೈ ತಲುಪಲಿದ್ದಾರೆ. ಕಳೆದ ವಾರದಿಂದ ಬಂಡಾಯ ಶಾಸಕರ ಗುಂಪಿನ ಮನೆಯಾದ ಗುವಾಹಟಿಯ ಐಷಾರಾಮಿ ಹೋಟೆಲ್ನಿಂದ ಹೊರಬಂದ ಶಿಂಧೆ, ಮಹಾರಾಷ್ಟ್ರದ ಜನರ ಶಾಂತಿ ಮತ್ತು ಸಮೃದ್ಧಿಗಾಗಿ ಗುವಾಹಟಿಯ ಕಾಮಾಖ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ, ಬಾಳಾ ಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುತ್ತೇನೆಂದು ಹೇಳಿದ್ದರು.
ಈ ಹಿಂದೆ ಗೋವಾಕ್ಕೆ ತೆರಳಬೇಕಿದ್ದ ಶಿವಸೇನೆಯ ಬಂಡಾಯ ಶಾಸಕರು ತೆರಳುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಮುಂದಿನ ಕ್ರಮವನ್ನು ನಿರ್ಧರಿಸಲು ಎಸ್ಸಿ ವಿಚಾರಣೆಗಾಗಿ ಕಾಯುತ್ತಾರೆ ಎಂದು ತಿಳಿದುಬಂದಿದೆ.