ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್ ನಲ್ಲಿ ನಡೆದ ಘಟನೆ, ಸಿ.ಟಿ ರವಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆದ ಜಟಾಪತಿ ಹಾಗೂ ಸಿಟಿ ರವಿ ಬಳಸಿದ ಭಾಷೆ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆದಿದ್ದಾರೆ.

ಮಾಜಿ ಸಚಿವ ಸಿಟಿ ರವಿ ಅವರ ಬಂಧನ ಹಾಗೂ ಬಂಧನದ ನಂತರದ ಘಟನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ರಾಜ್ಯಪಾಲರಿಗೆ ಪತ್ರ ಬರೆದು ಘಟನೆಯನ್ನು, ಪೊಲೀಸರ ನಡವಳಿಕೆಯನ್ನು ವಿವರಿಸಿದ್ದರು.
ಶಾಸಕ ಸಿ.ಟಿ ರವಿ ಅವರ ಪತ್ರಕ್ಕೆ ಸ್ಪಂದಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು,ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.ಈ ಘಟನೆ ಬಹಳ ಗಂಭೀರವಾಗಿದೆ.ಇದನ್ನು ವೈಯಕ್ತಿಕವಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ರಾಜ್ಯಪಾಲರು ಸೂಚನೆ ನೀಡಿದ್ದಾರೆ.