ಮಾಜಿ ಸಚಿವ ಬಿ.ನಾಗೇಂದ್ರಗೆ (B.Nagendra) ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki board) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ (Prosecution) ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಈ ಕೇಸ್ ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಇ.ಡಿ (ED) ರಾಜ್ಯಪಾಲರ ಅಬಲಿ ಮನವಿ ಮಾಡಿತ್ತು.ಹೀಗಾಗಿ ಈಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Thavar chand gehlot) ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಈ ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಕ್ಕೆ ಸಿಲುಕಿ ಈ ಹಿಂದೆ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದು ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಇ.ಡಿ ಆತಂಕ ಶುರುವಾಗಿದೆ.