ಬೊಮ್ಮಾಯಿ ನೇತೃತ್ವದ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಸಿದ್ಧ. ನಾನು ರಾಜ್ಯಾದ್ಯಂತ ಮಳೆ ಹಾನಿ ವೀಕ್ಷಣೆ ಮಾಡುತ್ತೇನೆ. ಸಂಕಷ್ಟ ದಲ್ಲಿರುವವರ ನೆರವಿಗೆ ಸರ್ಕಾರ ಸದಾ ಸಿದ್ಧ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ದಾಸನಪುರ, ಯಳಂದೂರು, ಕೋಡಿಮೋಳೆ ಹೀಗೆ ಹಲವು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಮಾಮೂಲಿಗಿಂತ 88% ಹೆಚ್ಚು ಮಳೆಯಾಗಿದ್ದು 40.14 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 163 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿ ಉಂಟಾಗಿದೆ. ಒಟ್ಟು 72 ಮನೆಗಳು ಅಲ್ಪಸ್ವಲ್ಪ ಹಾನಿಗೊಳಗಾಗಿದ್ದು, ಈಗಾಗಲೇ 26 ಮನೆಗಳಿಗೆ NDRF ಮಾರ್ಗಸೂಚಿ ಅನ್ವಯ ಪರಿಹಾರ ನೀಡಲಾಗಿದೆ. ಉಳಿದ ಮನೆಗಳಿಗೆ RGHCL ನಿಂದ ಪರಿಹಾರ ನೀಡಲು ಸೂಚಿಸಲಾಗಿದೆ. ಒಟ್ಟು 41 ಶಾಲೆ, 3 ಬ್ರಿಡ್ಜ್ ಹಾಗೂ 142 km ರಸ್ತೆ ಹಾನಿಯಾಗಿದೆ ಎಂದು ಅಶೋಕ್ ಹೇಳಿದರು.
ಯಳಂದೂರು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಆಹಾರವನ್ನು ಸರ್ಕಾರದ ಮಾರ್ಗಸೂಚಿಯಂತೆ ಮಾಡದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.