
ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳವನ್ನು ವಿರೋಧಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ದರ ಇಳಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ನಿರ್ಧಾರ ಮಾಡಿದ್ದೇವೆ. ದರ ಏರಿಸಿರೋದು ಸರಿಯಲ್ಲ. ಆರೋಗ್ಯ ಸಚಿವರು ಗಂಭೀರವಾಗಿ ಚಿಂತನೆ ಮಾಡಬೇಕು. ಎಸಿ ರೂಂನಲ್ಲಿ ಕುಳಿತುಕೊಂಡು ದಿನೇಶ್ ಗುಂಡೂರಾವ್ ಉಡಾಫೆಯಾಗಿ ಮಾತನಾಡಬಾರದು. ಬಡ ಜನರಿಗೆ ತೊಂದರೆಯಾಗಬಾರದು ಎಂದು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳ ಹಿನ್ನೆಲೆ ಸಂಜಯ್ ಗಾಂಧಿ ಆಸ್ಪತ್ರೆಗೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರೋಗಿಗಳನ್ನು ಭೇಟಿಯಾದ ಬಳಿಕ ಮಾತನಾಡಿದ ಆರ್ ಅಶೋಕ್, ಸಿದ್ದರಾಮಯ್ಯನವರ ಸರ್ಕಾರ 16 ತಿಂಗಳಲ್ಲಿ ಬಡವರ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡ್ತಿದೆ. ರಾಜ್ಯದಲ್ಲಿ ನಿತ್ಯ ಉಪಯೋಗ ಮಾಡುವ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಾಲು, ಆಲ್ಕೋಹಾಲ್ ಹೆಚ್ಚು ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಈಗ ಹಣಕಾಸಿನ ತೊಂದರೆ ಎದುರಾಗಿದೆ. ಅದೇ ಕಾರಣಕ್ಕೆ ಸೇವಾ ಶುಲ್ಕವನ್ನ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ರಿಜಿಸ್ಟ್ರೇಷನ್ ಚಾರ್ಜ್ 30 ರೂಪಾಯಿಗೆ ಹೆಚ್ಚಿಸಿದ್ದಾರೆ. ಎರಡನೇ ದಿನ ಬಂದ್ರೆ 20 ರೂಪಾಯಿ, ಅಡ್ಮಿಷನ್ ಚಾರ್ಜ್ 120, ಲ್ಯಾಬ್ ಟೆಸ್ಟ್ 320, ಎಕ್ಸ್ ರೇ ಚಾರ್ಜ್ 1500, ಆಕ್ಸಿಜನ್ ವೆಂಟಿಕೇಟರ್ 2800 ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಪಿಎಲ್ ಕಾರ್ಡ್ ರದ್ದು ಮಾಡ್ತಿದ್ದಾರೆ. ವಕ್ಪ್ ಒತ್ತುವರಿ ಮೂಲಕ ರೈತರ ಜಮೀನ್ ಹೋಗ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯಲ್ಲಿ 20 ಶೇಕಡಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸೇವಾ ಶುಲ್ಕ ಆಸ್ಪತ್ರೆಗೆ ಹೋಗುತ್ತದೆ. 10 ರೂಪಾಯಿ ಇದ್ದಿದ್ದನ್ನು ಶೇಕಡಾ 15 ರಿಂದ 20 ಹೆಚ್ಚಿಸಿದ್ದಾರೆ. ಸಣ್ಣ ಪರಿಷ್ಕರಣೆ ಮಾಡಿದ್ದಾರೆ ಅಷ್ಟೇ. ಅದು ಸರ್ಕಾರಕ್ಕೆ ಹೋಗಲ್ಲ, ಅದು ಗ್ಯಾರಂಟಿ ಹೋಗಲ್ಲ. ಗ್ಯಾರಂಟಿಗೂ ಶುಲ್ಕ ಪರಿಷ್ಕರಣೆಗೆ ಲಿಂಕ್ ಇಲ್ಲ. ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ಏನು ಆಗುದಿಲ್ಲ. ಅಲ್ಪ ಪ್ರಮಾಣದಲ್ಲಿ ಮಾಡಿದ್ದಾರೆ ಅಷ್ಟೇ ಎಂದಿದ್ದಾರೆ.





