• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗ್ರೇಟರ್​ ಬೆಂಗಳೂರು ಸ್ಥಾಪನೆ ಮಾಡಿದ್ಯಾ ರಾಜ್ಯ ಸರ್ಕಾರ..?

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in Top Story, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಗ್ರೇಟರ್​ ಬೆಂಗಳೂರು ಸ್ಥಾಪನೆ ಮಾಡಿದ್ಯಾ ರಾಜ್ಯ ಸರ್ಕಾರ..?
Share on WhatsAppShare on FacebookShare on Telegram

ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆ ಬದಲಿಗೆ ಗ್ರೇಟರ್ ಬೆಂಗಳೂರು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿತ್ತು. ಆದರೆ ಸದನದಲ್ಲಿ ಈ ಬಗ್ಗೆ ಚರ್ಚಿಸಲು ಸದನ ಸಮಿತಿ ರಚಿಸುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸದನ ಸಮಿತಿ ರಚನೆಗೂ ಮುನ್ನವೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಿ ಹೋಯ್ತಾ..? ಅನ್ನೋ ಅನುಮಾನಕ್ಕೆ ಕಾರಣವಾಗಿದೆ ಸರ್ಕಾರದ ನಡೆ. ನಿನ್ನೆ ಸ್ವಾತಂತ್ರ್ಯ ದಿನಾಚರಣೆಯ ಆಹ್ವಾನ ಪತ್ರಿಕೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರ ಹೆಸರು ನಮೂದು ಮಾಡಲಾಗಿದೆ. ಅಧ್ಯಕ್ಷರ ಹೆಸರು ನಮೂದಿಸಿರುವ ಆಹ್ವಾನ ಪತ್ರಿಕೆ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ADVERTISEMENT

ಆಹ್ವಾನ ಪತ್ರಿಕೆ ಮೂಲಕ ಸರ್ಕಾರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇನ್ನೂ ರಚನೆ ಆಗಿಲ್ಲ. ಆದರೆ ಇದಕ್ಕಾಗಲೇ ಒಬ್ಬರು ಅಧ್ಯಕ್ಷರು ನಾಮಕರಣ ಆಗಿಬಿಟ್ಟಿದ್ದಾರೆ. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸುವುದು ಎಂದರೆ ಇದೇನಾ..? ಎಂದು ಕಿಚಾಯಿಸಿದ್ದಾರೆ. ಬೆಳೆಯುತ್ತಿರುವ ಬೆಂಗಳೂರು ನಗರದ ಅಭಿವೃದ್ಧಿಗಾಗಿ ಮತ್ತು ಉತ್ತಮ ಆಡಳಿತಕ್ಕಾಗಿ ಸಮನ್ವಯತೆ ಸಾಧಿಸಲು ಪ್ರಾಧಿಕಾರ ರಚನೆ ಅಗತ್ಯ ಎಂದು ಸರ್ಕಾರಕ್ಕೆ ಅನಿಸಿದೆ. ಕಳೆದ ಜುಲೈನಲ್ಲಿ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಯಿತು. ಹಾಲಿ ಇರುವ ಬೆಂಗಳೂರು ಆಡಳಿತ ಕುರಿತ ಕಾಯ್ದೆಯನ್ನು ಬದಲಿಸಲು. ನಾನೂ ಸೇರಿದಂತೆ ಅನೇಕ ಶಾಸಕರು ಈ ಬಹಳ ದೊಡ್ಡ ಗಾತ್ರದ ವಿಧೇಯಕವನ್ನು ಅಧ್ಯಯನ ಮಾಡಲು ಮತ್ತು ವಿಸ್ತೃತ ಚರ್ಚೆ ಮಾಡಲು ಈ ವಿಧೇಯಕವನ್ನು ಸದನ ಸಮಿತಿಗೆ ಕಳಿಸಬೇಕು ಎಂದು ಆಗ್ರಹ ಮಾಡಿದ್ದೆವು. ಬಳಿಕ ಉಪಮುಖ್ಯಮಂತ್ರಿಗಳ ಮೂಲಕ ಸದನ ಸಮಿತಿಗೆ ಸಮ್ಮತಿ ಸಿಕ್ಕಿತ್ತು. ಆದರೆ ಈಗಾಗಲೇ ಅಧ್ಯಕ್ಷರ ನೇಮಕದ ಉದ್ದೇಶ ಏನು..? ಎಂದಿದ್ದಾರೆ.

ನನಗೆ ತಿಳಿದಿರುವಂತೆ ಈವರೆಗೆ ಈ ವಿಧೇಯಕ ಕುರಿತ ಸಂಬಂಧಪಟ್ಟ ಸದನ ಸಮಿತಿ ರಚನೆಯಾಗಿಲ್ಲ. ವಿಧೇಯಕವೂ ಈವರೆಗೆ ಕಾಯಿದೆಯಾಗಿಲ್ಲ ಅಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ.
ಆದರೆ ಆಗಸ್ಟ್ 15ರ ಸ್ವಾತಂತ್ರೋತ್ಸವಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾ ಆಡಳಿತ ಹೊರಡಿಸಿರುವ ಆಹ್ವಾನ ಪತ್ರಿಕೆ ನನ್ನ ಗಮನಕ್ಕೆ ಬಂದಿದ್ದು, ಈ ಆಹ್ವಾನ ಪತ್ರಿಕೆಯ ಮುಖ್ಯ ಅತಿಥಿಗಳ ಪಟ್ಟಿಯಲ್ಲಿ ಶ್ರೀ ಜಿ.ಎನ್. ನಟರಾಜು ಗಾಣಕಲ್ ಎಂಬುವರ ಹೆಸರನ್ನು ನಮೂದಿಸಿದ್ದಾರೆ. ಇವರೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಎಂದು ಸಂಬೋಧಿಸಲಾಗಿದೆ. ನನಗೆ ನಿಜಕ್ಕೂ ಆಶ್ಚರ್ಯ ಹಾಗೂ ದಿಗ್ಭ್ರಮೆ ಉಂಟು ಮಾಡಿರುವ ಸಂಗತಿ ಇದು ಎಂದು ಸುರೇಶ್​ ಕುಮಾರ್​ ತಿಳಿಸಿದ್ದಾರೆ.

ಇನ್ನೂ ಸದನ ಸಮಿತಿಯೇ ರಚನೆಯಾಗಿಲ್ಲ. ಹೀಗಿರುವಾಗ, ಸದನ ಸಮಿತಿಯಲ್ಲಿ ಚರ್ಚೆಯಾಗಿ ವಿಧೇಯಕವನ್ನು ಸದನದಲ್ಲಿ ಮಂಡಿಸಿಲ್ಲ. ಇನ್ನೂ ವಿಧೇಯಕವು ಕಾಯ್ದೆಯಾಗಿಲ್ಲ. ಹಾಗಾದರೆ ಗ್ರೇಟರ್ ಬೆಂಗಳೂರು ರಚನೆ ಆಗಿಲ್ಲ. ಇನ್ನೂ ರಚನೆಯಾಗದ ಒಂದು ಪ್ರಾಧಿಕಾರಕ್ಕೆ ಸರ್ಕಾರ ಅಧ್ಯಕ್ಷರನ್ನು ನೇಮಕ ಮಾಡಿದ್ಯಾ..? ಈ ರೀತಿ ರಚನೆಯಾದ ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷ ಎನ್ನುವ ಓರ್ವ ವ್ಯಕ್ತಿಯನ್ನು ಜಿಲ್ಲಾಡಳಿತ ನಡೆಸಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯನ್ನಾಗಿ ಕರೆದಿರುವ ಕ್ರಮಕ್ಕೆ ಸರ್ಕಾರದ ಸಮ್ಮತಿ ಇದೆಯೇ..? ಒಂದೊಮ್ಮೆ ರಚನೆಯಾಗದಿರುವ ಪ್ರಾಧಿಕಾರಕ್ಕೆ ಈ ವ್ಯಕ್ತಿ ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಎಂದು ತನ್ನನ್ನು ತಾನೇ ಘೋಷಿಸಿಕೊಂಡರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ..? ಸಾಮಾಜಿಕ ಜಾಲತಾಣಗಳ ನಕಲಿ ಸುದ್ದಿಗಳನ್ನು ಕಂಡುಹಿಡಿಯಲು ಸರ್ಕಾರದಲ್ಲಿ Fact Check ವ್ಯವಸ್ಥೆ ಜಾರಿಗೆ ಬಂದಿದೆ. ಅದು ಏನು ಮಾಡುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವ್ಯಕ್ತಿಯ ಸಾಮಾಜಿಕ ಜಾಲತಾಣದ ವಿವರಗಳನ್ನು ಸರ್ಕಾರ Fact Check ಮಾಡಿ ಕ್ರಮ ಕೈಗೊಳ್ಳುವುದೇ..?  ಎಂದು ಪ್ರಶ್ನೆಯನ್ನೂ ಮಾಡಿದ್ದಾರೆ. ಆದರೆ ಇನ್ನೂ ರಚನೆಯೇ ಆಗದೆ ಇರುವ ಗ್ರೇಟರ್​​ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿ ಇರುತ್ತಾರೆ ಎಂದು ಹೇಳಲಾಗಿದೆ. ಇನ್ನು ಉಳಿದ ಶಾಸಕರು, ಪಾಲಿಕೆ ಸದಸ್ಯರು ಗ್ರೇಟರ್​​ ಬೆಂಗಳೂರು ಪ್ರಾಧಿಕಾರದಲ್ಲಿ ಸದ್ಯಸ್ಯ ಸ್ಥಾನ ಪಡೆಯುತ್ತಾರೆ ಎನ್ನಲಾಗಿದೆ. ಇದೀಗ ರಾಮನಗರ ಜಿಲ್ಲಾಡಳಿತ ಆಹ್ವಾನ ಪತ್ರಿಕೆ ಮಾಡಿಸುವಾಗ ಈ ರೀತಿಯ ತಪ್ಪನ್ನು ಮಾಡಿರುವ ಸಾಧ್ಯತೆಯಿದ್ದು, ಈ ಬಗ್ಗೆ ಸಂಬಂಧ ಪಟ್ಟವರು ಸ್ಪಷ್ಟನೆ ಕೊಡಬೇಕಿದೆ. ಹುದ್ದೆ ಹೆಸರು ಬದಲಾಗಿ ಪ್ರಿಂಟ್​ ಆಗಿದ್ಯಾ ಅನ್ನೋದನ್ನಾದರೂ ತಿಳಿಸಬೇಕಿದೆ. ಇಲ್ಲದಿದ್ದರೆ ಗೊಂದಲದ ಗೂಡಾಗಲಿದೆ.

ಕೃಷ್ಣಮಣಿ

Tags: kannada newskannada news channelkarnataka assembly sessionkarnataka assembly session 2024karnataka assembly session livekarnataka assembly session live todaykarnataka assembly session todaykarnataka assembly session today livekarnataka assembly session yesterdayಕರ್ನಾಟಕ ತಕ್
Previous Post

ನಾಗಮಂಗಲದಲ್ಲಿ ಹೆಣ್ಣು ಭ್ರೂಣ ಹತ್ಯೆ, ಜಾಲ ಬೇಧಿಸಿದ ಸಿಬ್ಬಂದಿ..

Next Post

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ: ಶಾಸಕ ಪ್ರಭು ಚವ್ಹಾಣ

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ: ಶಾಸಕ ಪ್ರಭು ಚವ್ಹಾಣ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada