• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ; ಪ್ರಧಾನಿ ಮೋದಿ ಕನಸು ಅನಾವರಣ ಮಾಡಿದ ಕೇಂದ್ರ ಸಚಿವ HD ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 12, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಾಂಸ್ಥಿಕ ರಚನೆಗಳ ವೈಜ್ಞಾನಿಕ ವರ್ಗೀಕರಣ (Taxonomy) ವರದಿ ಮೂಲಕ ಉಕ್ಕು ಕ್ಷೇತ್ರಕ್ಕೆ ಕೇಂದ್ರದ ಉತ್ತೇಜನ

ADVERTISEMENT

||ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ಯಾಕ್ಸಾನಮಿ ವರದಿ ಅನಾವರಣ||

ನವದೆಹಲಿ: ಉಕ್ಕು ಕ್ಷೇತ್ರದಲ್ಲಿ ಮಾಲಿನ್ಯಕ್ಕೆ ಇತಿಶ್ರೀ ಹಾಡಲು ಹಾಗೂ ಪರಿಸರಪೂರಕವಾದ ಗ್ರೀನ್ ಸ್ಟೀಲ್ ತಯಾರಿಕೆಗೆ ಪ್ರಾಮುಖ್ಯತೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ‘ಸಾಂಸ್ಥಿಕ ರಚನೆಗಳ ವೈಜ್ಞಾನಿಕ ವರ್ಗೀಕರಣ’ (Taxonomy) ವರದಿಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ಗುರುವಾರ ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಸಾಂಸ್ಥಿಕ ರಚನೆಗಳ ವೈಜ್ಞಾನಿಕ ವರ್ಗೀಕರಣ’ (Taxonomy) ವರದಿಯನ್ನು ಬಿಡುಗಡೆ ಮಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು; ಭಾರತವು ಪರಿಸರ ರಕ್ಷಣೆಗೆ ಎಲ್ಲಾ ಉಪಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ನಿಟ್ಟಿನಲ್ಲಿ ಹೆಚ್ಚು ಒತ್ತಾಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ಯಾಕ್ಸಾನಮಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ದೇಶದ ಅತ್ಯಂತ ಪ್ರಮುಖ ಉದ್ಯಮಗಳಲ್ಲಿ ಒಂದಾದ ಉಕ್ಕು ಉದ್ಯಮದ ಸುಸ್ಥಿರತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದರು.

ಟ್ಯಾಕ್ಸಾನಮಿ ಬಿಡುಗಡೆಯು ಒಂದು ಐತಿಹಾಸಿಕ ಹೆಜ್ಜೆ ಎಂದು ನಾನು ಹೇಳಬಯಸುತ್ತೇನೆ. ಏಕೆಂದರೆ, ಇದು ಉಕ್ಕಿನ ಉತ್ಪಾದನೆಯನ್ನು ಸಂಪೂರ್ಣವಾಗಿ ಮಾಲಿನ್ಯ ಮುಕ್ತಗೊಳಿಸಲು ಸಮಗ್ರವಾಗಿ ಕೆಲಸ ಮಾಡುತ್ತದೆ. ಅಲ್ಲದೆ, ಪರಿಸರಕ್ಕೆ ಪೂರಕವಾಗಿ ಹೊಣೆಗಾರಿಕೆಯನ್ನು ಉತ್ತೇಜಿಸುವ ಕಾರ್ಯವನ್ನೂ ಮಾಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದ ಉಕ್ಕಿನ ಕ್ಷೇತ್ರವು ತನ್ನ ಬೆಳವಣಿಗೆಯ ಪಥವನ್ನು ಮತ್ತಷ್ಟು ವಿಸ್ತೃತಗೊಳಿಸಿಕೊಂಡು, ಸುಸ್ಥಿರ ಜಾಗತಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಗ್ರೀನ್ ಸ್ಟೀಲ್ ಮಿಷನ್ ನ ಕಾರ್ಯಸೂಚಿಯ ಪ್ರಕಾರ; ಹೈಡ್ರೋಜನ್ ಆಧಾರಿತ ಉಕ್ಕು ಉತ್ಪಾದನೆ ಮತ್ತು ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರುವುದು, ಸುಸ್ಥಿರ ಅಭಿವೃದ್ಧಿಗೆ ಹಸಿರುಪೂರಕ ತಂತ್ರಜ್ಞಾನಗಳನ್ನು ಉತ್ತೇಜಿಸುವುದು, ಉಕ್ಕಿನ ಮರು ಬಳಕೆ ಹೆಚ್ಚಳ ಮಾಡುವುದು ಮತ್ತು ಉತ್ತೇಜಿಸುವುದು, ಉಕ್ಕಿನ ಸುಸ್ಥಿರ ಉತ್ಪಾದನೆಗೆ ಸಂಶೋಧನೆ ಅಭಿವೃದ್ಧಿಗೆ ಒತ್ತು ಕೊಡಲಾಗುತ್ತದೆ ಎಂದು ಕೇಂದ್ರ ಸಚಿವರು ಪ್ರಮುಖವಾಗಿ ಉಲ್ಲೇಖಿಸಿದರು.

ಈಗ ಬಿಡುಗಡೆಯಾಗಿರುವ ಟ್ಯಾಕ್ಸಾನಮಿಯು ಪ್ಯಾರಿಸ್ ಒಪ್ಪಂದದ ಬದ್ಧತೆಗಳನ್ನು ಪೂರೈಸುತ್ತದೆ. ಜಾಗತಿಕವಾಗಿ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಮಾನದಂಡವಾಗಿ ಕಾರ್ಯನಿರ್ವಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಚೌಕಟ್ಟನ್ನು ರೂಪಿಸಲು ನೀಡಿದ ಕೊಡುಗೆಗಳಿಗಾಗಿ ಉಕ್ಕು ಉತ್ಪಾದಕರು, ನೀತಿ ನಿರೂಪಕರು ಮತ್ತು ಪರಿಸರ ತಜ್ಞರು ಸೇರಿದಂತೆ ಅನೇಕರಿಗೆ ಕೇಂದ್ರ ಸಚಿವರು ಕೃತಜ್ಞತೆ ಸಲ್ಲಿಸಿದರು.

ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ರಾಜ್ಯ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ ಮತ್ತು ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರು ಸೇರಿದಂತೆ ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCentral MinisterCongress Partyhd kumarswamyJDSKarnataka MPMandya MPMember of parliamentModiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇವಲ 6 ದಿನಕ್ಕೆ 1000 ಕೋಟಿ ದಾಟಿದ ಪುಷ್ಪ-೨ ಕಲೆಕ್ಷನ್ ! 

Next Post

ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಸುದ್ದಿಗೋಷ್ಠಿ

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Next Post

ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada