• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ ಮಾಡುತ್ತಾರೆ;ಮಾಜಿ ಪ್ರಧಾನಿ ದೇವೇಗೌಡರು.

ಪ್ರತಿಧ್ವನಿ by ಪ್ರತಿಧ್ವನಿ
November 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚನ್ನಪಟ್ಟಣ/ರಾಮನಗರ:ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ.ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.

ADVERTISEMENT

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಅವರು; ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ.ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ.ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಪಟ್ಟಣಕ್ಕೆ ಯಾರು ಭಗೀರಥ? ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ.ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ ಎಂದ ಅವರು; ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ? ಎಂದು ಜನತೆಯಲ್ಲಿ ಕೇಳಿದರು ಮಾಜಿ ಪ್ರಧಾನಿಗಳು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು.ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದಾರೆ:ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು.ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ಅವರು ಟೀಕಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು 2028ಕ್ಕೆ ಸ್ಪರ್ಧೆ ಮಾಡುತ್ತೇನೆ, ನಾನು ಪಕ್ಷ ಕಟ್ಟುತ್ತೇನೆ ಎಂದರು. ನಾಮಪತ್ರ ಸಲ್ಲಿಸುವ ಹಿಂದಿನ ದಿನ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿಶ್ ಶಾ ಅವರೆಲ್ಲರೂ ಸೇರಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ತೀರ್ಮಾನ ಮಾಡಿದರು. ಈ ಯುವಕ ನಿಮ್ಮ ಮೊಮ್ಮಗನಿದ್ದ ಹಾಗೆ,ವಿಧಾನಸಭೆಗೆ ಆಯ್ಕೆ ಮಾಡಿ ಆಶೀರ್ವಾದ ಮಾಡಿ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ.ನಮ್ಮ ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ನಿಖಿಲ್ ಕುಮಾರಸ್ವಾಮಿ ವಿಧಾನಸೌಧಕ್ಕೆ ಹೋಗುವುದು 100ಕ್ಕೆ 100 ಸತ್ಯ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಶಾಸಕರಾದ ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ್ ಸೇರಿದಂತೆ ಸ್ಥಳೀಯ ಮುಖಂಡರು ಅನೇಕರು ಮಾಜಿ ಪ್ರಧಾನಿಗಳ ಜತೆಯಲ್ಲಿ ಇದ್ದರು.

ಚನ್ನಪಟ್ಟಣದಲ್ಲಿ ಎರಡು ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ಮಾಸಿಕ ₹80 ಲಕ್ಷ ತಾಲೂಕಿಗೆ ಬರುತ್ತದೆ. ಕರ್ನಾಟಕಕ್ಕೆ ಹಾಲಿನ ಡೈರಿ ತಂದಿದ್ದು ಯಾರು? ಅದನ್ನು ತಂದ ಈ ದೇವೇಗೌಡ ಇನ್ನೂ ಬದುಕಿದ್ದೇನೆ. ಇಗ್ಗಲೂರು ಡ್ಯಾಂನಿಂದ ಎಲ್ಲರಿಗೂ ನೀರು ಸಿಗಲ್ಲ. ಅದಕ್ಕಾಗಿ ಹೈನುಗಾರಿಕೆ ಮಾಡಿ ಕೆಲವರು ಜೀವನ ಮಾಡುತ್ತಿದ್ದಾರೆ. ನಮ್ಮ ಹುಟ್ಟುಗುಣ ಬೇರೆಯವರಿಂದ ಕಿತ್ತುಕೊಳ್ಳುವುದಲ್ಲ. ನಮ್ಮದು ಕೊಡುವ ಕೈ. ಈ ಹಣ ಶಾಶ್ವತವಾಗಿ ಚನ್ನಪಟ್ಟಣಕ್ಕೆ ಬರುತ್ತಿದೆ ಎಂದು ಪ್ರಧಾನಿಗಳು ಹೇಳಿದರು.

Tags: Channapatna assemblychannapatna by electionChannapatna constituency.Channapatna/Ramanagar.Former Prime Minister Deve GowdaGrilahakshmi bandh after by-election;Nikhil Kumaraswamy
Previous Post

ಮನೆಯವರು ಕೊಟ್ಟ ನಾಲಾಯಕ್ ಅವಾರ್ಡ್ ಗೆ ಧರ್ಮ ಫುಲ್ ಡಲ್ -ಬಿಗ್ ಮನೆಯ ಊಸರವಳ್ಳಿ ಯಾರು?

Next Post

ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ:ಸಿ.ಎಂ.ಸಿದ್ದರಾಮಯ್ಯ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ:ಸಿ.ಎಂ.ಸಿದ್ದರಾಮಯ್ಯ

ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ:ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada