ಡಿಸೆಂಬರ್ 8 ರಂದು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ ಇತರೆ 13 ಜನ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಅಪಘಾತಕ್ಕೆ ಈಡಾಗಿ 13 ಮಂದಿ ಮೃತಪಟ್ಟಿದ್ದರು. ಈ ಅವಘಡದಲ್ಲಿ ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು (ಬುಧವಾರ) ನಿಧನರಾಗಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಮಿಳುನಾಡಿನ ಕೂನೂರಿನ ವೆಲ್ಲಿಂಗ್ಟನ್ ಆಸ್ಪತ್ರೆಯಿಂದ ಬೆಂಗಳೂರಿನ ಮಿಲಿಟರಿ ಆಸ್ಪತ್ರೆಯಲ್ಲಿ ಸ್ಥಳಾಂತರಿಸಲಾಗಿತ್ತು. ತೀವ್ರ ಸುಟ್ಟಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಗಾಯಗೊಂಡಿದ್ದ ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಅಧಿಕಾರಿಗಳ ಮಾಹಿತಿಯ ಪ್ರಕಾರ, ವರುಣ್ ಸಿಂಗ್ ಅವರು ಜೀವ ಬೆಂಬಲದಲ್ಲಿದ್ದರು.
“08 ಡಿಸೆಂಬರ್ 21 ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಬೆಳಿಗ್ಗೆ ನಿಧನರಾಗಿದ್ದುIAF ಸಂತಾಪ ಸೂಚಿಸಿದೆ ಮತ್ತು ದುಃಖಿತ ಕುಟುಂಬದೊಂದಿಗೆ ವಾಯು ಸೇನೆ ಜೊತೆ ನಿಲ್ಲುತ್ತದೆ ಎಂದು ಟ್ವೀಟ್ ಮಾಡಲಾಗಿದೆ.