ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಶುಕ್ರವಾರ ಕೋಲಾರದ ಗಾಂಧಿ ಭವನದಲ್ಲಿ ನಡೆದ ಪ್ರತಿಭಟನೆ ತುಸು ವಿಭಿನ್ನವಾಗಿ ಇತ್ತು ಏಕೆಂದರೆ ಪ್ರತಿಭಟನೆ ಬಣ ರಾಜಕೀಯಕ್ಕೆ ಸಾಕ್ಷಿಯಾಗಿತ್ತು.
ಶಾಸಕ ರಮೇಶ್ ಕುಮಾರ್ ಹಾಗೂ ಮಾಜಿ ಕೇಂದ್ರ ಸಚಿವ ಕೆ. ಎಚ್. ಮುನಿಯಪ್ಪ ನೇತೃತ್ವದಲ್ಲಿ ಒಂದೇ ಸ್ಥಳದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಈ ವೇಳೆ ಎರಡು ಬಣದ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಉಭಯ ನಾಯಕರು ತಮ್ಮ ತಮ್ಮ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.
ಇತ್ತ ಬಣ ಬಡಿದಾಟ ಜೋರಾಗಿದ್ದರು ಸಹ ಉಸ್ತುವಾರಿ ನಾರಾಯಣಸ್ವಾಮಿ, ಸದಸ್ಯ ಅನಿಲ್ ಕುಮಾರ್ ಹಾಗೂ ಶಾಸಕ ಶ್ರೀನಿವಾಸ ಗೌಡ ಮೂಕ ಪ್ರೇಕ್ಷಕರಂತೆ ಎರಡು ಬಣ ಬಡಿದಾಟವನ್ನು ನೋಡುತ್ತಿದ್ದರು.