• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:

ಪ್ರತಿಧ್ವನಿ by ಪ್ರತಿಧ್ವನಿ
March 23, 2024
in ಇದೀಗ, ರಾಜಕೀಯ
0
ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:
Share on WhatsAppShare on FacebookShare on Telegram

ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:

ADVERTISEMENT

ನೀವೆಲ್ಲರೂ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಯಭಾರಿಗಳು ನೀವು.

ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ ಮನೆಗಳಿಗೆ ಪ್ರಯೋಜನವಾಗುತ್ತಿದೆ.

ಇನ್ನು ಹಸಿವು ಮುಕ್ತ ರಾಜ್ಯ ಮಾಡಲು ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಿದೆವು. ನಾವು ಅಕ್ಕಿ ಖರೀದಿ ಮಾಡಲು ಕೇಂದ್ರಕ್ಕೆ ಮನವಿ ಮಾಡಿದರೆ, ಕೇಂದ್ರ ಸರ್ಕಾರ ನಿರಾಕರಿಸಿತು. ಹೀಗಾಗಿ ನಮ್ಮ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣವನ್ನು ನೀಡುತ್ತಿದ್ದೇವೆ.

ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್ ಬೆಲೆ 70ರಿಂದ 110ಕ್ಕೆ ಏರಿತು. ಅಡುಗೆ ಅನಿಲ 410ರಿಂದ 1100 ರೂಪಾಯಿ ಆಯಿತು. ಅಡುಗೆ ಎಣ್ಣೆ 200ರ ಗಡಿ ದಾಟಿತು. ಹೀಗಾಗಿ ನಾವು ಬೆಲೆ ಏರಿಕೆ ಸಮಯದಲ್ಲಿ ಮಹಿಳೆಯರಿಗೆ ನೆರವಾಗಬೇಕು ಎಂದು ಚರ್ಚೆ ಮಾಡಿ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದೆವು. ಇಂದು 1.33 ಕೋಟಿ ಮನೆಯೊಡತಿಯರಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡಲಾಗುತ್ತಿದೆ.

ಈ ಯೋಜನೆ ಘೋಷಣೆ ವೇಳೆ ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ನಮ್ಮ ಗ್ಯಾರಂಟಿ ಚೆಕ್ ಗೆ ನಾನು ಹಾಗೂ ಸಿದ್ದರಾಮಯ್ಯ ಅವರು ಸಹಿ ಹಾಕಿದೆವು.

ನಮ್ಮ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಮಂಗಳೂರಿನಲ್ಲಿ ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆ ಘೋಷಣೆ ಮಾಡಿದರು. ಆಮೂಲಕ ರಾಜ್ಯದ ಎಲ್ಲೆಡೆ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಯಿತು.

ನಂತರ ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲು ಯುವನಿಧಿ ಯೋಜನೆ ಘೋಷಣೆ ಮಾಡಿ ಶಿವಮೊಗ್ಗದಲ್ಲಿ ಜಾರಿ ಮಾಡಿದೆವು. ಈ ಕಾರ್ಯಕ್ರಮಕ್ಕೆ 1 ಲಕ್ಷ ಯುವಕರು ಭಾಗವಹಿಸಿದ್ದರು. ಅಲ್ಲಿನ ಜನರನ್ನು ನೋಡಿದರೆ ಯಡಿಯೂರಪ್ಪನವರ ಮಗ ಗೆಲ್ಲುವುದು ಅಸಾಧ್ಯ ಎಂಬುದು ಖಚಿತವಾಗುತ್ತದೆ.

ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಬಡ ಕುಟುಂಬಗಳಿಗೆ ಮಾಸಿಕ 5-6 ಸಾವಿರ ಉಳಿತಾಯವಾಗುತ್ತದೆ. ಆಮೂಲಕ ಜನರ ಕೈಯಲ್ಲಿ ಹಣ ಹರಿದಾಡುವಂತೆ ಮಾಡಲಾಗಿದೆ. ಜನರ ಕೈಯಲ್ಲಿ ಹಣ ಹರಿದಾಡುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ.

ನೀವು ಕಷ್ಟಪಟ್ಟು ಕೆಲಸ ಮಾಡಬೇಕು. ಮರಕ್ಕೆ ಬೇರು ಎಷ್ಟು ಮುಖ್ಯವೋ ಅದೇ ರೀತಿ ಮನುಷ್ಯನಿಗೆ ನಂಬಿಕೆ ಮುಖ್ಯ. ಕಾಂಗ್ರೆಸ್ ಪಕ್ಷ ನಿಮ್ಮನ್ನು ನಂಬಿದೆ. ನೀವು ಈ ನಂಬಿಕೆ ಉಳಿಸಿಕೊಳ್ಳಬೇಕು. ನಾವು ದೊಡ್ಡ ಹುದ್ದೆ ಕೊಟ್ಟಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಸಾಧ್ಯವಾದಷ್ಟು ಗೌರವ ಹಾಗೂ ಅಧಿಕಾರ ನೀಡುತ್ತಿದ್ದೇವೆ.

ಗ್ಯಾರಂಟಿ ಯೋಜನೆಗಳ ಜಾರಿಗೆ ಕರ್ನಾಟಕ ರಾಜ್ಯದ 3.71 ಲಕ್ಷ ಕೋಟಿ ಮೊತ್ತದ ಬಜೆಟ್ ನಲ್ಲಿ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ಮೀಸಲು ಇಟ್ಟಿದ್ದೇವೆ.

ನಮ್ಮ ಯೋಜನೆಗಳಿಂದ ದೇವಾಲಯಗಳಲ್ಲಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿ ಹುಂಡಿ ತುಂಬುತ್ತಿದೆ. ಮಹಿಳೆಯರು ನಿಮ್ಮ ಹೆಸರಲ್ಲಿ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಎಐಸಿಸಿ ನಾಯಕರು ಕೂಡ ಐದು ನ್ಯಾಯ ಯೋಜನೆಗಳನ್ನು ಘೋಷಿಸಿದ್ದು, ಈ ನ್ಯಾಯ ಯೋಜನೆಗಳಲ್ಲಿ ತಲಾ ಐದು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಿಳಾ ನ್ಯಾಯ ಯೋಜನೆಯಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮನೆಯೊಡತಿಯರಿಗೆ ವರ್ಷಕ್ಕೆ 1 ಲಕ್ಷ, ಕೇಂದ್ರದ ಹೊಸ ನೇಮಕಾತಿಗಳಲ್ಲಿ ಅರ್ಧದಷ್ಟು ಮಹಿಳೆಯರಿಗೆ ಮೀಸಲುಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ವೇತನದಲ್ಲಿ ಕೇಂದ್ರದ ಪಾಲು ದುಪ್ಪಟ್ಟು ಮಾಡಲಾಗುವುದು.

ರೈತ ನ್ಯಾಯದಲ್ಲಿ ಕಾನೂನು ಬದ್ಧ ಕನಿಷ್ಠ ಬೆಂಬಲ ಬೆಲೆ, ಕೃಷಿ ಕ್ಷೇತ್ರ ಜಿಎಸ್ಟಿ ಮುಕ್ತ. ಕೃಷಿ ಸಾಲ ಮನ್ನಾ ಆಯೋಗ ಸ್ಥಾಪನೆ.

ಶ್ರಮಿಕ ನ್ಯಾಯದಲ್ಲಿ ಕಾರ್ಮಿಕರಿಗೆ ಆರೋಗ್ಯದ ಹಕ್ಕು, ಕಾರ್ಮಿಕ ವಿರೋಧಿ ಕಾನೂನು ರದ್ದು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ನಗರ ಉದ್ಯೋಗ ಖಾತ್ರಿ. ಹೀಗೆ ಐದು ನ್ಯಾಯ ಯೋಜನೆಯಲ್ಲಿ 25 ಗ್ಯಾರಂಟಿ ಗಳನ್ನ ಘೋಷಣೆ ಮಾಡಲಾಗಿದೆ.

ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಪರವಾಗಿ ಯಾವುದೇ ಅಲೆ ಇಲ್ಲ.
ನಾವು ನಮ್ಮ ಊರುಗಳ ಬಡ ದೇವಾಲಯಗಳ ಅಭಿವೃದ್ಧಿಗೆ ಕಾನೂನು ತಂದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಈ ಕಾನೂನನ್ನು ಪರಿಷತ್ ನಲ್ಲಿ ಮಣಿಸಿದ್ದಾರೆ.

ಈಗ ಈ ಯೋಜನೆಗಳನ್ನು ಜಾರಿಗೊಳಿಸಲು ಈ ಅನುಷ್ಠಾನ ಸಮಿತಿ ಮಾಡಲಾಗಿದೆ. ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದ ಸಮಿತಿ ಮಾಡಿ ಅವರಿಗೆ ಕಚೇರಿ ಹಾಗೂ ಗೌರವಧನ ನೀಡಲಾಗುವುದು. ಇದರ ಜತೆಗೆ ಆರಾಧನ, ಶಿಕ್ಷಣ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗುತ್ತಿದೆ.

ನಾವು ನುಡಿದಂತೆ ನಡೆದು ನಿಮಗೆ ಶಕ್ತಿ ನೀಡಿದ್ದೇವೆ. ಈಗ ನೀವು ಪಂಚಾಯ್ತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ ಮನೆ ಮನೆಗೆ ಹೋಗಿ ಜನರಿಗೆ ಈ ಯೋಜನೆ ತಲುಪಿಸಬೇಕು. ಆಮೂಲಕ ನಮಗೆ ನೀವು ಶಕ್ತಿ ನೀಡಬೇಕು.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ.

ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು, ತೆನೆ ಹೊತ್ತ ಮಹಿಳೆ ತೆನೆ ಬಿಸಾಡಿದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಪ್ರಬುದ್ಧವಾಯಿತು, ಕರ್ನಾಟಕ ಸಮೃದ್ಧವಾಯಿತು.

ನಾವು ಎಷ್ಟೇ ದೊಡ್ಡವರಾದರೂ ಕಾರ್ಯಕರ್ತರು. ಹೀಗಾಗಿ ನಾವು ಸ್ವಾಭಿಮಾನ ಬಿಡಬೇಕು. ನಮ್ಮ ಪಕ್ಷದ ಶಾಲು ತ್ರಿವರ್ಣ ಹೊಂದಿದೆ. ಈ ಶಾಲು ಹಾಕಿಕೊಳ್ಳುವ ಅವಕಾಶ ಕಾಂಗ್ರೆಸಿಗರಿಗೆ ಬಿಟ್ಟು ಬೇರೆಯವರಿಗೆ ಇಲ್ಲ.

ನೀವು ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲಿಲ್ಲವಾದರೆ ನೀವು ನಾಯಕರಲ್ಲ, ನೀವು ಕೆಲಸ ಮಾಡಿಲ್ಲ ಎಂದರ್ಥ. ಹೀಗಾಗಿ ನೀವು ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತನ್ನಿ, ಪಕ್ಷ ಬಲಪಡಿಸಿ.

Tags: Congress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಬೆಂ.ಗ್ರಾ ಗೆಲ್ಲಲು ‘ಅಷ್ಟಪಾಲಕರ’ ನೇಮಕ.. ಡಿಕೆ ಬ್ರದರ್ಸ್ ತಂತ್ರಕ್ಕೆ ‘ಕೇಸರಿ’ ಪ್ರತಿತಂತ್ರ.. ಡಾ.ಮಂಜುನಾಥ್ ಜಯಕ್ಕೆ ವೋಟ್ ‘ಲೆಕ್ಕಾ’ಚಾರ ..!

Next Post

ಸುಳ್ಳು ಹೇಳೋದೆ ಬಿಜೆಪಿ ಕೆಲ್ಸ.. ಈಗ ನಮ್ಮ ಗ್ಯಾರಂಟಿ ಕದ್ದು ಮೋದಿ ನಮ್ಮ ಗ್ಯಾರಂಟಿ ಅಂತಿದ್ದಾರೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Related Posts

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?
ಇದೀಗ

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

by ಪ್ರತಿಧ್ವನಿ
January 28, 2026
0

ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಿಗ್ಗೆ ಮುಂಬೈಯಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗಿಯಾಗಲು...

Read moreDetails
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
Next Post
ಸುಳ್ಳು ಹೇಳೋದೆ ಬಿಜೆಪಿ ಕೆಲ್ಸ.. ಈಗ ನಮ್ಮ ಗ್ಯಾರಂಟಿ ಕದ್ದು ಮೋದಿ ನಮ್ಮ ಗ್ಯಾರಂಟಿ ಅಂತಿದ್ದಾರೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಸುಳ್ಳು ಹೇಳೋದೆ ಬಿಜೆಪಿ ಕೆಲ್ಸ.. ಈಗ ನಮ್ಮ ಗ್ಯಾರಂಟಿ ಕದ್ದು ಮೋದಿ ನಮ್ಮ ಗ್ಯಾರಂಟಿ ಅಂತಿದ್ದಾರೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada