ಕಳೆದ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ತೊರೆದು ಕೈಕಮಾಂಡ್ ವಿರುದ್ದ ಬಹಿರಂಗವಾಗಿ ಕಿಡಿಕಾರಿದ್ದ ಜಿಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಗುಜರಾತ್ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದುವರೆದು, ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಏಕಪಕ್ಷೀಯವಾಗಿ ನಡೆಯಲಿದ್ದು ಕಾಂಗ್ರೆಸ್ ಪಕ್ಷ ಎಲ್ಲಿಯು ಕಾಣಸಿಗುವುದಿಲ್ಲ ಗಾಳಿ ಬಿಜೆಪಿ ಪರವಾಗಿ ಬೀಸುತ್ತಿದೆ ಎಂದು ಹೇಳಿದ್ದಾರೆ.
ಬಿಜೆಪಿ ಸೇರುವ ಪ್ರಶ್ನೆ ಕುರಿತು ಪ್ರತಿಕ್ರಿಯಿಸಿದ ಹಾರ್ದಿಕ್ ನಾನು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿಯೂ ನೋಡುತ್ತಿಲ್ಲ. ಬಿಜೆಪಿ ಹಾಗು ಎಎಪಿ ಏಕೆ ನನ್ನ ಆಯ್ಕೆ ಆಗಬಾರದು. ಕಾಂಗ್ರೆಸ್ಗಿಂತ ಉತ್ತಮ ತಂತ್ರಗಾರಿಕೆ ಹೆಣೆಯುವುದರಲ್ಲಿ ಎಎಪಿ ಪಕ್ಷ ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಗುಜರಾತ್ ವಿಧಾನಸಭೆ ಚುನಾವಣೆ ಹಾಗು ಪಾಟೀದಾರ್ ಅಂದೋಲನ ಸಮಯದಲ್ಲಿ ಬಿಜೆಪಿ ವಿರುದ್ದ ಕಟುವಾಗಿ ಆರೋಪಿಸಿದ ಹಾರ್ದಿಕ್ ತಮ್ಮಗೆ ಯುವ ಮೋರ್ಚಾ ಅಧ್ಯಕ್ಷ ಸ್ಥಾನ ಹಾಗು ಸಾವಿರ ಕೋಟಿಯ ಆಮಿಷವನ್ನ ಒಡ್ಡಿದ್ದಾರೆ ಎಂದು ಆರೋಪಿಸಿ ಜನರು ನಿಬ್ಬೆರಗಾಗುವಂತೆ ಮಾಡಿದ್ದರು. ಆದರೆ, ವರ್ಷಾಂತ್ಯದಲ್ಲಿ ನಡೆಯುವ ಚುನಾವಣೆಗೆ ಅವರು ಬಿಜೆಪಿಯಿಂದ ಸ್ಪರ್ದಿಸಿದ್ದರೆ ರಾಜಕೀಯ ನಿಂತ ನೀರಲ್ಲ ಎಂಬ ಮಾತು ಮತ್ತೇ ಸಾಬೀತಾಗಲಿದೆ.
ಮುಂದಿನ ದಿನಗಳಲ್ಲಿ ಇದು ಎಲ್ಲಿಯವರೆಗು ಬಂದು ನಿಲ್ಲುತ್ತದೆ ಎಂಬುದನ್ನ ಕಾದು ನೋಡಬೇಕಿದೆ.