ರಾಜ್ಯ ರಾಜಕೀಯದಲ್ಲಿ ಆಗೊಮ್ಮೆ ಈಗೊಮ್ಮೆ ಸದ್ದು ಮಾಡುವ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು ದಲಿತ ಸಿಎಂ ಅಭ್ಯರ್ಥಿಗೆ ಯಾರು ಮತ ಹಾಕುತ್ತಾರೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಪ್ರಶ್ನಿಸಿದ್ದಾರೆ.
ನಾವು 2008ರಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ನಡೆಯಿತು. ದಲಿತ ಸಮುದಾಯದ ಒಬ್ಬರು ಮುಖ್ಯಮಂತ್ರಿಯಾಗುವುದು ಸಮಾಜಕ್ಕೆ ಇಷ್ಟವಾಗುವುದಿಲ್ಲ ಎಂಬುದಕ್ಕೆ ಅಂದಿನ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದಿದ್ದಾರೆ.
![](https://pratidhvani.com/wp-content/uploads/2022/07/55991104.webp)
ದಲಿತರು ಜಾತಿ ಮೀರಿ ಸಮಾಜದಲ್ಲಿ ಎಲ್ಲರಿಗೂ ಸಮಾನರಾಗಿ ಬೆಳೆದಿದ್ದಾರೆ ಅವರನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ದಲಿತ ಮುಖ್ಯಮಂತ್ರಿ ಎಂಬ ವಿಚಾರವೇ ಅಪ್ರಸ್ತುತ.
ನಾವು ಮಾಜಿ ಸಿಎಂ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಬಹುಮತ ಬಂದ ನಂತರ ಶಾಸಕಾಂಗ ಪಕ್ಷದ ನಾಯಕರನ್ನು ಚುನಾಯಿತ ಜನಪ್ರತಿನಿಧಿಗಳು ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.