ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Devegowda) ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ (congress) ಸಂಚು ರೂಪಿಸಿದೆ ಎಂದು ಜೆಡಿಎಸ್ (Jds) ಗಂಭೀರ ಆರೋಪ ಮಾಡಿದೆ. ಅಲ್ಲದೆ ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದಿರುವ ಜೆಡಿಎಸ್,ಡಿಸಿಎಂ ಡಿ.ಕೆ.ಶಿವಕುಮಾರ್ (Dk shivakumar) ವಿರುದ್ಧ ಗುರುತರ ಆರೋಪಗಳನ್ನು ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ (LR shivaramegowda) ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ (Dcm) ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.
ಇಂದು ಬಿಡುಗಡೆಗೊಂಡ ಆಡಿಯೋದಲ್ಲಿ ಮತ್ತಷ್ಟು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿದ್ದು, ಕಾಂಗ್ರೆಸ್ ಸರ್ಕಾರ ಮತ್ತಷ್ಟು ಇಕ್ಕಟಿಗೆ ಸಿಲುಕಿದೆ. ಈ ಬಗ್ಗೆ ಇದುವರೆಗೂ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದಿರೋದು ಕುತೂಹಲಕ್ಕೆ ಕಾರಣವಾಗಿದೆ.












