• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಟ್ಯಾಂಕರ್ ಮಾಫಿಯಾದ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಹೆಚ್.ಡಿ.ದೇವೇಗೌಡರು

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ನವದೆಹಲಿ:ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ADVERTISEMENT

ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು; ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.

ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.

Lakshmi Hebbalkar: ಪ್ರಜ್ವಲ್‌ ರೇವಣ್ಣಗೆ ಟಾಂಗ್‌ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್..!  #prajwalrevanna

ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು.

ಟ್ಯಾಂಕರ್ ಮಾಫಿಯಾ ಬಗ್ಗೆ ಕಳವಳ:

ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ.ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ.ಒಂದು ಟ್ಯಾಂಕರ್ ನೀರಿಗೆ ₹3000 ತೆರಬೇಕಿದೆ.ಇದು ಎಷ್ಟು ಅನ್ಯಾಯ ಎಂದರೆ ಕೇವಲ ನಾಲ್ಕು ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ ₹20,000 ಖರ್ಚು ಮಾಡಬೇಕಿದೆ. ಇದು ಕಳವಳಕಾರಿ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಎಲ್ಲರೂ ರಾಜಕೀಯ ಬದಿಗಿಟ್ಟು ಮೇಕೆದಾಟು ಯೋಜನೆ ಬಗ್ಗೆ ಬೆಂಬಲ ನೀಡಬೇಕಿದೆ. ಈ ಯೋಜನೆ ಕಾರ್ಯಗಾಯವಾದರೆ ಈ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದು ಅವರು ಹೇಳಿದರು.

Tags: Bangalore's tanker mafiaFormer Prime Minister HD Deve GowdaH. D. Deve Gowda proposed.implementationMekedatu Yojana freed Bengaluru water supplyNew DelhiRajya Sabha
Previous Post

ಮಹಾರಾಷ್ಟ್ರದ ನೂತನ `CM’ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

Next Post

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು

Related Posts

Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ
Top Story

Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

by ಪ್ರತಿಧ್ವನಿ
February 7, 2026
0

ನಳಂದ: ಬಿಹಾರದ ನಳಂದ ಜಿಲ್ಲೆಯ ರಾಜಗೀರ್ ಪಟ್ಟಣದ ಧರ್ಮಶಾಲೆಯೊಂದರಲ್ಲಿ ಕರ್ನಾಟಕದ ಮೂವರು ಮಹಿಳೆಯರು ಸೇರಿ ನಾಲ್ವರು ಪ್ರವಾಸಿಗರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. https://youtu.be/tOYDlhJIj3w?si=RqjvF_JFmlEWZLQ8...

Read moreDetails
ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Namma Metro: ಮೆಟ್ರೋ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Namma Metro: ಮೆಟ್ರೋ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

February 7, 2026
ಶಕ್ತಿ ಕೇಂದ್ರಗಳಲ್ಲಿ “ಸೌರ”ಶಕ್ತಿ ಯೋಜನೆ..? ಹೇಗಿರಲಿದೆ ಗೊತ್ತಾ‌.?

ಶಕ್ತಿ ಕೇಂದ್ರಗಳಲ್ಲಿ “ಸೌರ”ಶಕ್ತಿ ಯೋಜನೆ..? ಹೇಗಿರಲಿದೆ ಗೊತ್ತಾ‌.?

February 7, 2026
Next Post

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada