• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಹೆಚ್.ಡಿ. ಕುಮಾರಸ್ವಾಮಿ ಕಿಡಿ*

ಪ್ರತಿಧ್ವನಿ by ಪ್ರತಿಧ್ವನಿ
March 28, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

*ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ!!**

ADVERTISEMENT

ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ**ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ**ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!!*ನವದೆಹಲಿ: ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ.

ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ?

ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಇದು ಪ್ರಜಾಪ್ರಭುತ್ವ ಸರಕಾರವಲ್ಲ.ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಅವರು ಕಿಡಿ ಕಾರಿದ್ದಾರೆ.

Tags: ex cm hd kumaraswamyH D KumaraswamyHD Kumaraswamyhd kumaraswamy jdshd kumaraswamy latest newshd kumaraswamy newshd kumaraswamy slams congresshd kumaraswamy slams siddaramaiahhd kumaraswamy speechhd kumaraswamy updateskerala rice price hikekumaraswamykumaraswamy newskumaraswamy on siddukumaraswamy speechmilk pricemilk price hikemilk price hike soonNikhil KumaraswamyPrice Hikerice price hike in kerala
Previous Post

ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್…ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ*

Next Post

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
Next Post

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada