• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಹೆಚ್.ಡಿ. ಕುಮಾರಸ್ವಾಮಿ ಕಿಡಿ*

ಪ್ರತಿಧ್ವನಿ by ಪ್ರತಿಧ್ವನಿ
March 28, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

*ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ!!**

ADVERTISEMENT

ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ**ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ**ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!!*ನವದೆಹಲಿ: ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ.

ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ?

ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಇದು ಪ್ರಜಾಪ್ರಭುತ್ವ ಸರಕಾರವಲ್ಲ.ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಅವರು ಕಿಡಿ ಕಾರಿದ್ದಾರೆ.

Tags: ex cm hd kumaraswamyH D KumaraswamyHD Kumaraswamyhd kumaraswamy jdshd kumaraswamy latest newshd kumaraswamy newshd kumaraswamy slams congresshd kumaraswamy slams siddaramaiahhd kumaraswamy speechhd kumaraswamy updateskerala rice price hikekumaraswamykumaraswamy newskumaraswamy on siddukumaraswamy speechmilk pricemilk price hikemilk price hike soonNikhil KumaraswamyPrice Hikerice price hike in kerala
Previous Post

ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್…ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ*

Next Post

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌
Top Story

ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌

by ಪ್ರತಿಧ್ವನಿ
August 7, 2026
0

ದುನಿಯಾ ವಿಜಯ್ ನಿರ್ದೇಶನದ ಮೂರನೇ ಚಿತ್ರ ‘ಸಿಟಿ ಲೈಟ್ಸ್’ ಬಿಡುಗಡೆಗೆ ಸಜ್ಜಾಗಿದೆ. ನಟ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿರುವ ಈ ಸಿನಿಮಾ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ...

Read moreDetails
ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

August 7, 2026
BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

August 7, 2026
ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

August 7, 2026
Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

August 7, 2026
Next Post

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada