• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೆಚ್‌. ನರಸಿಂಹಯ್ಯ ಅವರ ಶತಮಾನೋತ್ಸವ ಕಾರ್ಯಕ್ರಮ.. ಸಿಎಂ ಗೈರು

ಕೃಷ್ಣ ಮಣಿ by ಕೃಷ್ಣ ಮಣಿ
February 2, 2025
in ಕರ್ನಾಟಕ, ರಾಜಕೀಯ
0
ಹೆಚ್‌. ನರಸಿಂಹಯ್ಯ ಅವರ ಶತಮಾನೋತ್ಸವ ಕಾರ್ಯಕ್ರಮ.. ಸಿಎಂ ಗೈರು
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಡಾ. ಹೆಚ್ ನರಸಿಂಹಯ್ಯನವರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಬೇಕಿತ್ತು. ಹೆಲಿಕಾಪ್ಟರ್‌ ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸುವ ಟೂರ್‌ ಪ್ಲ್ಯಾನ್ ಫಿಕ್ಸ್‌ ಆಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಹಬ್ಬದ ರೀತಿ ಶೃಂಗಾರ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳ ಡಾ. ಹೆಚ್ ನರಸಿಂಹಯ್ಯ ಭಾವಚಿತ್ರ ಮೆರವಣಿಗೆ ಮಾಡಲಾಯ್ತು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದವು. ಶಾಲಾ ಮಕ್ಕಳು ಕೂಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ADVERTISEMENT

ಡಾ. ಹೆಚ್ ನರಸಿಂಹಯ್ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಎಂಸಿ ಸುಧಾಕರ್, ನರಸಿಂಹಯ್ಯ ಅವರಿಗೆ ನಮ್ಮ ತಂದೆ ಕಂಡರೆ ತುಂಬಾ ಇಷ್ಟ. ಅವರು ವಿದೇಶದಲ್ಲಿ ಓದಿದ ಅನುಭವದಲ್ಲಿ ಬೆಂಗಳೂರಿನಲ್ಲಿ ಕಾಲೇಜು ಮಾಡಿದರು. ವಿದೇಶದಲ್ಲಿ ಈಗ ಮಾಡುತ್ತಿರುವ ವಿನ್ಯಾಸಗಳನ್ನು ಅವರು ಈ ಹಿಂದೆಯೇ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಭಾಗವಹಿಸಬೇಕಿತ್ತು. ಆದರೆ ಈ ಕಾರ್ಯಕ್ರಮಕ್ಕೆ ತಯಾರಿ ಆಗಬೇಕಾದರೆ, ಜಾರಿ ಬಿದ್ದು ಗಾಯವಾಗಿದೆ. ಹಾಗಾಗಿ ಇವತ್ತಿನ‌ ಕಾರ್ಯಕ್ರಮವನ್ನು ರದ್ದು ಮಾಡಿದರು. ಇವತ್ತು ಮುಖ್ಯಮಂತ್ರಿಗಳ ಬಳಿ ಇಟ್ಟಿದ್ದ ಮನವಿಯನ್ನ ತಿಳಿಸುತ್ತೇವೆ. ಕೆಪಿಎಸ್ ಶಾಲೆಗಳ ಆರಂಭಿಸಲು ಈಗಾಗಲೇ ತಯಾರಿ ನಡೆಸಿದ್ದೇವೆ ಎಂದಿದ್ದಾರೆ.

HDK ಅನುಕಂಪ ಗಿಟ್ಟಿಸಿಕೊಳ್ಳೋದ್ರಲ್ಲಿ ನಿಸ್ಸೀಮರು ಅಂತ ಟೀಕಿಸಿದ ಸಚಿವ Cheluvarayaswamy  #pratidhvani

ಡಾ. ನರಸಿಂಹಯ್ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಡಾ. ಕೆ ಸುಧಾಕರ್, ಮುಖ್ಯಮಂತ್ರಿಗಳಿಂದ ಶಾಲೆಗೆ ಏನಾದರೂ ಅನುದಾನ ತೆಗೆದುಕೊಳ್ಳಬೇಕು ಎಂದುಕೊಂಡಿದ್ದರು. ಸಚಿವರ ಮೂಲಕ ನಿಮ್ಮ ಬೇಡಿಕೆಗಳನ್ನ ಸಿಎಂಗೆ ತಲುಪಿಸಿ. ನರಸಿಂಹಯ್ಯನವರು ಶಿಕ್ಷಣ ಕ್ಷೇತ್ರದಲ್ಲಿ ದೂರದೃಷ್ಟಿ ಹೊಂದಿದ್ದರು. ನಮ್ಮ ಜಿಲ್ಲೆಯಲ್ಲಿ ಎರಡು ರತ್ನಗಳು ಹುಟ್ಟಿವೆ. ಒಂದು ಡಾ. ಹೆಚ್ ನರಸಿಂಹಯ್ಯ ಮತ್ತು ಡಾ ಎಂ ವಿಶ್ವೇಶ್ವರಯ್ಯ. ವಿಜ್ಞಾನ ಮತ್ತು ವೈಚಾರಿಕತೆಯ ಬಗ್ಗೆ ಬಹಳ‌ ದೂರದೃಷ್ಟಿ ಹೊಂದಿದ್ದರು. ಶಿಕ್ಷಣ ಮತ್ತು ಆರೋಗ್ಯ ಸರಿಯಾಗಿದ್ದರೆ, ಸಮಾಜ ಏಳಿಗೆ ಆಗುತ್ತದೆ. ಶಾಲೆಗೆ ಹೋಗುವ ವೇಳೆ ಪ್ರತಿಯೊಂದು ಹಂತದಲ್ಲಿಯೂ ಕಷ್ಟ ಎದುರಿಸಿದ್ದರು. ಒಬ್ಬ ಶಿಕ್ಷಕನ ಮಗ, ನಾನೂ ಕೂಡ ಶಿಕ್ಷಕರ ಮಗ. ಶಿಕ್ಷಕರೇ ಈಗ ತಂದೆ ತಾಯಿಗಳು ಎಂದಿದ್ದಾರೆ.

ನರಸಿಂಹಯ್ಯನವರು ವಿದೇಶದಲ್ಲಿ ಓದಿದ್ದರು. ಇಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಗ್ರಾಮೀಣ ಪ್ರದೇಶದ ರೈತರ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂದು ಹಳ್ಳಿಗಳಲ್ಲಿ ಶಾಲೆಗಳನ್ನು ತೆರೆದರು. ಯಾವುದೇ ಖಾಸಗಿ ಶಾಲೆಗಳನ್ನು ತೆಗೆಯಲಿಲ್ಲ ಎಂದು ಡಾ ಹೆಚ್‌. ನರಸಿಂಹಯ್ಯ ಅವರನ್ನು ನೆನಪು ಮಾಡಿಕೊಂಡರು. ಹೆಚ್‌. ನರಸಿಂಹಯ್ಯ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದು, ನ್ಯಾಷನಲ್‌ ಕಾಲೇಜು ಸ್ಥಾಪನೆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಜ್ಯೋತಿ ಆಗಿದ್ದಾರೆ. ಇಂದಿಗೂ ನ್ಯಾಷನಲ್ ಕಾಲೇಜು ತನ್ನದೇ ಆದ ಪ್ರಾಮುಖ್ಯತೆ ಉಳಿಸಿಕೊಳ್ಳುವುದರಲ್ಲಿ ಹೆಚ್‌. ನರಸಿಂಹಯ್ಯ ಅವರ ಕೊಡುಗೆ ಅಪಾರ ಎನ್ನಬಹುದು.

Tags: #bangalorecentraluniversity#hosurnarasimhaiah#kannadaliterature#teredamana100 year birth centuryBasavaraj Bommaichamrajpetcr simhadr. h. narasimhaiahdr.h n (narasimhaiah's) roomdrhnarasimhaiahengineering studentsh.narasimhaiahkarnataka state vignana parishatnational high school centenaryPrakash Padukoneramesh aravindramesh aravind national high schoolramesh arvinresearch and development
Previous Post

ಭಾರತದ ಆರ್ಥಿಕ ನೀತಿಯ ರೂಪುಗೊಳಿಸುವಲ್ಲಿ ರಾಜಕೀಯ ಮತ್ತು ಆಡಳಿತ ಶಕ್ತಿಗಳ ಪರಸ್ಪರ ಕ್ರಿಯಾಶೀಲತೆ

Next Post

ಇಂದು ದಿಲ್ಲಿಯಲ್ಲಿ ಬಿಜೆಪಿ ಬಂಡಾಯ ಟೀಂ ಸಭೆ..! ಉದ್ದೇಶ ಏನು..?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಇಂದು ದಿಲ್ಲಿಯಲ್ಲಿ ಬಿಜೆಪಿ ಬಂಡಾಯ ಟೀಂ ಸಭೆ..! ಉದ್ದೇಶ ಏನು..?

ಇಂದು ದಿಲ್ಲಿಯಲ್ಲಿ ಬಿಜೆಪಿ ಬಂಡಾಯ ಟೀಂ ಸಭೆ..! ಉದ್ದೇಶ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada