ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಜೊತೆ ಇಡೀ ಅಲ್ಪಸಂಖ್ಯಾತ ಸಮುದಾಯವೇ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಎಂಎಲ್ಸಿ ಎಚ್ ವಿಶ್ವನಾಥ್ ಅವರು ನಾನು ಅಧ್ಯಕ್ಷ ಆಗಿದ್ರೆ ಎಚ್ ಡಿ ಕುಮಾರಸ್ವಾಮಿ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎಂಬ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು, ಮೈತ್ರಿಯ ಮೂಲಕ ಕುಮಾರಸ್ವಾಮಿ ಅವರು ಜಾತ್ಯತೀತ ಅನ್ನೋ ಅರ್ಥವನ್ನೇ ತೆಗೆದುಹಾಕಿಬಿಟ್ಟಿದ್ದಾರೆ.ಯಾರು ಚಮಚಾಗಿರಿ ಮಾಡುತ್ತಾರೆ ಅವರು ಮೈತ್ರಿಗೆ ಒಪ್ಪುತ್ತಾರೆ. ನಾನೇನಾದರೂ JDS ರಾಜ್ಯಾಧ್ಯಕ್ಷನಾಗಿದ್ದರೆ HD ಕುಮಾರಸ್ವಾಮಿಯನ್ನ 6 ವರ್ಷ ಅಮಾನತು ಮಾಡುತ್ತಿದ್ದೆ ಎಂದು ಸಿಎಂ ಇಬ್ರಾಹಿಂ ಪರ ಬ್ಯಾಟ್ ಬೀಸಿದ್ದಾರೆ.

ಸಿಎಂ ಇಬ್ರಾಹಿಂ ಅವರ ಉಚ್ಚಾಟನೆ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಪ್ರತಿಕ್ರಿಯಿಸಿದ್ದು, ಸಿಎಂ ಇಬ್ರಾಹಿಂ ಅವರ ನಿಲುವು ಸರಿಯಾಗಿದೆ.ಸಿಎಂ ಇಬ್ರಾಹಿಂಗೆ ಉಚ್ಚಾಟನೆ ಮಾಡುವ ಅಧಿಕಾರ ಇದೆ. ರಾಜ್ಯಾಧ್ಯಕ್ಷ ಇಬ್ರಾಹಿಂ ಸ್ಟ್ಯಾಂಡ್ ಕರೆಕ್ಟ್ ಆಗಿದೆ. ಎಚ್ಡಿಕೆ ವೈಯಕ್ತಿಕವಾಗಿ ಬಿಜೆಪಿ ಜೊತೆಗೆ ಮೈತ್ರಿ ಬಗ್ಗೆ ಮಾತಾಡಿಕೊಂಡಿದ್ದಾರೆ ಎಂದು ತಿಳಿಸಿದರು.