ಬಿಜೆಪಿಯ ವಿಧಾನಪರಿಷತ್ ಸದಸ್ಯ ಹಳ್ಳಿಹಕ್ಕಿ ಅಡಗೂರು ಹೆಚ್.ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರುತ್ತಾರ ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿ ಬರುತ್ತಿದೆ.
ಸದಾ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರುತ್ತಿದ್ದ ವಿಶ್ವನಾಥ್ ಈಗ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಎಲ್ಲಿಲದ ಒಲವನ್ನು ತೋರುತ್ತಿದ್ದಾರೆ.
ಒಂದು ಕಾಲದಲ್ಲಿ ತಾವು ಕಾಂಗ್ರೆಸ್ ಸಿದ್ದರಾಮಯ್ಯ ನೇರ ಕಾರಣ ಎಂದು ಆರೋಪಿಸಿದ್ದ ವಿಶ್ವನಾಥ್ ಈಗ ಸಿದ್ದರಾಮಯ್ಯ ಬಗ್ಗೆ ಮೃಧು ಧೋರಣೆ ತೋರುತ್ತಿದ್ದು ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಿದ್ದರಾಮಯ್ಯಗೆ ಮತ್ತಷ್ಟು ಹತ್ತಿರವಾಗಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ಬಿಜೆಪಿ ನಾಯಕರನ್ನು ಟೀಕಿಸುತ್ತಾ ಸ್ವಪಕ್ಷೀಯರ ಕಣ್ಣಿಗೆ ಗುರಿಯಾಗಿದ್ದ ವಿಶ್ವನಾಥ್ ಮರಳಿ ಕಾಂಗ್ರೆಸ್ ಪಕ್ಷ ಸೇರಿ 2024ರ ಲೋಕಸಭೆ ಚುನಾವಣೆಗೆ ಮೈಸೂರಿನಿಂದ ಸ್ಪರ್ದಿಸಲು ಚಿಂತನೆ ನಡೆಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.