• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಅರ್ಧಕರ್ಧ ಕುಸಿತ : ಬಜೆಟ್ನಲ್ಲಿ ಅನುದಾನ ನೀಡದೇ ಕ್ಯಾಂಟೀನ್ ಮುಚ್ಚಲು ಬಿಜೆಪಿ ಹುನ್ನಾರ?

Any Mind by Any Mind
March 16, 2022
in ಕರ್ನಾಟಕ
0
ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಅರ್ಧಕರ್ಧ ಕುಸಿತ : ಬಜೆಟ್ನಲ್ಲಿ ಅನುದಾನ ನೀಡದೇ ಕ್ಯಾಂಟೀನ್ ಮುಚ್ಚಲು ಬಿಜೆಪಿ ಹುನ್ನಾರ?
Share on WhatsAppShare on FacebookShare on Telegram

ಕಡು ಬಡವರು ಹಾಗೂ ಕೂಲಿ ಕಾರ್ಮಿಕ ವರ್ಗದ ಮೆಚ್ಚಿನ ಆಹಾರ ತಾಣವಾಗಿ ಒಂದು ಕಾಲದಲ್ಲಿ ಮಿಂಚಿದ್ದ ಇಂದಿರಾ ಕ್ಯಾಂಟೀನ್ಗಳು ಕ್ರಮೇಣ ತಮ್ಮ ಕಳೆ ಕಳೆದುಕೊಳ್ಳುತ್ತಿದೆ. ಕಳಪೆ ಆಹಾರ ಗುಣಮಟ್ಟ ಒಂದು ಕಡೆಯಾದರೆ, ಸರ್ಕಾರದಿಂದ ಯಾವುದೇ ಅನುದಾನ ಇಲ್ಲ ಎನ್ನುವ ಕೂಗು ಮತ್ತೊಂದೆಡೆ. ಈ ನಡುವೆ ಇಂದಿರ್ ಕ್ಯಾಂಟಿನ್ ಗೆ ಬರುವರ ಸಂಖ್ಯೆ ಶೇ.50 ರಷ್ಟು ಕಡಿಮೆಯಾಗಿದೆ. ಈ ನಡುವೇ ಯೋಜನೆಯನ್ನು ಜನ ಮಾನಸದಿಂದ ದೂರಗೊಳಿಸುವ ಬಿಜೆಪಿ ಹುನ್ನಾರ ನಡೆಸುತ್ತಿದೆ ಎಂಬ ಆರೋಪ ರಾಜಕೀಯ ವಲಯಗಳಿ೦ದ ಕೇಳಿ ಬಂದಿದೆ.

ADVERTISEMENT

ಕ್ಯಾಂಟೀನ್ ಮುಚ್ಚಲು ವ್ಯವಸ್ಥಿತ ಪಿತುರಿ ನಡೆಸುತ್ತಿದ್ದೆಯೇ ಬಿಜೆಪಿ!

ಒಂದು ಕಾಲದಲ್ಲಿ ಮಾಜಿ ಸಿಎಂ ಸಿದ್ದರಾಮಾಯ್ಯನವರ ಕನಸಿನ ಕೂಸು ಎಂದೆ ಬಿಂಬಿತವಾಗಿದ ಇಂದಿರಾ ಕ್ಯಾಂಟೀನ್ ಇಂದು ಮುಚ್ಚಿವ ಹಂತಕ್ಕೆ ಬಂದು ನಿಂತದೆ. ಕಡು ಬಡವರಿಗೆ ಕಡಿಮೆ ಬೆಲೆಯಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಬಿಜೆಪಿಯವರ ಕುತಂತ್ರಕ್ಕೆ ಬಲಿಯಾಗುತ್ತಿದೆ. ಇದೇ ಕಾರಣಕ್ಕೆ ತಮ್ಮ ಬಜೆಟ್ನಲ್ಲೂ ಕೂಡ ಸಿಎಂ ಬೊಮ್ಮಾಯಿ ನಯಾ ಪೈಸೆ ಮೀಸಲಿಡದೆ ಬಿಬಿಎಂಪಿಗೆ ನಿಮ್ಮ ಖರ್ಚಿನಲ್ಲಿ ನಡೆಸಿಕೊಳ್ಳಿ ಎಂದು ಹೇಳಿದೆ.

3.5 ಲಕ್ಷದಿಂದ 1 ಲಕ್ಷಕ್ಕೆ ಇಳಿದ ಗ್ರಾಹಕರ ಸಂಖ್ಯೆ!

ಬಡವರ ಪಾಲಿಗೆ ಅನ್ನದ ದೇಗುಲದಂತಿದ್ದ ಇಂದಿರಾ ಕ್ಯಾಂಟೀನ್ ಗೆ ಇಂದು ಕಳಪೆ ಅಹಾರ ಪೂರೈಕೆಯಿಂದ ಹಾಗು ಅನುದಾನದ ಕೊರತೆಯಿಂದ ಬಾಗಿಲು ಮುಚ್ಚುವ ಸ್ಥಿತಿ ಎದುರಾಗಿದೆ. ಕಳೆದ ಒಂದು ವರ್ಷದಿಂದ ಇಂದಿರ್ ಕ್ಯಾಂಟೀನ್ ಗೆ ಬರುತ್ತಿರುವ ಗ್ರಾಹಕರ ಸಂಖ್ಯೆಯಲ್ಲಿ ಗಣನಿಯವಾಗಿ ಇಳಿಕೆ ಕಂಡು ಬಂದಿದ್ದು, ಗ್ರಾಹಕರು ಸಂಖ್ಯೆಯಲ್ಲಿ 50% ರಷ್ಟು ಕಡಿಮೆಯಾಗಿದೆ. ಇದಕ್ಕೆ ಮುಖ್ಯ ಕಾರಣ ಕಳಪೆ ಗುಣಮಟ್ಟದ ಅಹಾರ ಪೂರೈಕೆ ಹಾಗೂ ಕ್ಯಾಂಟೀನ್ ಗುತ್ತಿಗೆದಾರರಿಗೆ ಸೂಕ್ತ ರೀತಿಯಲ್ಲಿ ಬಿಲ್ ಪಾವತಿಯಾಗದೇ ಇರುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್ಗಳಿದ್ದಾವೆ. ಈ ಪೈಕಿ 174 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟಿನ್ಗಳಿದ್ದು, ಆರಂಭದಲ್ಲಿ ಪ್ರತಿ ನಿತ್ಯ ಮೂರುವರೆ ಲಕ್ಷ ಜನ ಊಟ, ತಿಂಡಿಗಾಗಿ ಇಂದಿರಾ ಕ್ಯಾಂಟೀನ್ ಅನ್ನು ಆಶ್ರಯಿಸಿಕೊಂಡಿದ್ದರು. ಆದರೆ ಅದೀಗ ಕೇವಲ 1 ಲಕ್ಷಕ್ಕೆ ಇಳಿದಿದ್ದು ಊಟ, ತಿಂಡಿ ತಿನ್ನಲು ಬರುವವರ ಸಂಖ್ಯೆ 60%ಕ್ಕೆ ಇಳಿಕೆಯಾಗಿದೆ.

11 ತಿಂಗಳಿಂದ 270 ಕೋಟಿ ಗುತ್ತಿಗೆದಾರರಿಗೆ ಬಿಲ್ ಬಾಕಿ!

ಬಿಬಿಎಂಪಿ ವ್ಯಾಪ್ತಿಯಲ್ಲಿ 174 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟಿನ್ಗಳಿದ್ದು, ಕಳೆದ ಎರಡು ಮೂರು ವರ್ಷದಿಂದ ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟಿನ ಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ. ಬಿಬಿಎಂಪಿ ತನ್ನ ಆದಾಯ ದಲ್ಲಿಯೇ ನಿರ್ವಹಣೆ ಮಾಡುತ್ತಿದೆ. ಕಳೆದ 11 ತಿಂಗಳಿಂದ ಸುಮಾರು 270 ಕೋಟಿ ಗುತ್ತಿಗೆದಾರರಿಗೆ ಬಿಲ್ ಬಾಕಿ ಇದೆ. ಹೀಗಾಗಿ ಗುತ್ತಿಗೆದಾರರು ಕ್ಯಾಂಟೀನ್ಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿಲ್ಲ ಎಂಬ ಆರೋಪಗಳಿವೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿ ಉತ್ತಮ ಊಟ ನೀಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗುತ್ತಿತ್ತು. ಈಗ ಮೇಲ್ವಿಚಾರಣೆ ನಡೆಸುವವರಿಲ್ಲ. ಹೀಗಾಗಿ ಗುಣಮಟ್ಟ ಕಳೆದುಕೊಂಡಿದೆ.

Tags: BJPCongress PartyCovid 19ಇಂದಿರಾ ಕ್ಯಾಂಟೀನ್ಕರೋನಾಕೋವಿಡ್-19ಬಜೆಟ್ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಉಂಡ ಮನೆಗೆ ದ್ರೋಹ ಬಗೆಯುತ್ತಿರುವ ಜಿ-6 ನಾಯಕರಿಂದ ಇಂದು ಮತ್ತೊಂದು ಸಭೆ

Next Post

ಡಿಕೆ. ಶಿವಕುಮಾರ್ ಸಮ್ಮುಖದಲ್ಲಿ ನಟ, ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಡಿಕೆ. ಶಿವಕುಮಾರ್ ಸಮ್ಮುಖದಲ್ಲಿ ನಟ, ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಡಿಕೆ. ಶಿವಕುಮಾರ್ ಸಮ್ಮುಖದಲ್ಲಿ ನಟ, ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada