ಮುಂಬೈ: ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ , ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಫೋಟೋ ಹಂಚಿಕೊಂಡಿದ್ದಾರೆ.
ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ಹಾರ್ದಿಕ್ ಪಾಂಡ್ಯ ಭೇಟಿಯಾಗಿ ಮಾತುಕತೆ ನಡೆಸಿದರು. ಪಾಂಡ್ಯ ಜೊತೆ ಸಹೋದರ ಕೃನಾಲ್ ಪಾಂಡ್ಯ ಇದ್ದರು. ನಮ್ಮನ್ನು ಕರೆಸಿ ಮಾತುಕತೆ ನಡೆಸಿದ ಗೃಹಸಚಿವರಿಗೆ ಧನ್ಯವಾದ. ನಿಮ್ಮನ್ನು ಭೇಟಿಯಾಗಿದ್ದು ತುಂಬಾ ಗೌರವ, ಸಂತೋಷ ನೀಡಿದೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ
ಅಮಿತ್ ಶಾ ಭೇಟಿಯ ಉದ್ದೇಶ ಪಾಂಡ್ಯ ತಿಳಿಸಿಲ್ಲ. ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಪಾಂಡ್ಯ ಮುನ್ನಡೆಸಲಿದ್ದಾರೆ.
ಟಿ20 ತಂಡದ ನೂತನ ನಾಯಕನಾಗಿ ಈಗಾಗಲೇ ಪಾಂಡ್ಯ ಆಯ್ಕೆ ಆಗಿದ್ದು, ಏಕದಿನ ತಂಡದ ಉಪನಾಯಕನ ಸ್ಥಾನ ಕೂಡ ಪಾಂಡ್ಯ ಹೆಗಲೇರಿದೆ.